ಜನ ಸಂಪರ್ಕಕ್ಕೆ ಸಿದ್ದರಾಮಯ್ಯರಿಂದ ಹೊಸ ಆ್ಯಪ್
Recommended Video

ಬೆಂಗಳೂರು, ಅಕ್ಟೋಬರ್ 31: ಜನಸಂಪರ್ಕ ವಿಚಾರದಲ್ಲಿ ಫೇಸ್ಬುಕ್, ಟ್ವಿಟ್ಟರ್ ನೆಚ್ಚಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಆ್ಯಪ್ ಕ್ಷೇತ್ರಕ್ಕೂ ಕಾಲಿಡಲಿದ್ದಾರೆ.
ಸಾರ್ವಜನಿಕರ ಜತೆ ಸಂಪರ್ಕದಲ್ಲಿರಲು ಸಹಾಯಕವಾಗುವ 'ದಿ ಸಿಟಿಜೆನ್ ಕನೆಕ್ಟ್ ಆ್ಯಪ್'ಗೆ ಇಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಇದರ ಜತೆಗೆ ರೈತರ ಬೆಳೆ ಸಮೀಕ್ಷೆ ನಡೆಸುವ ಆ್ಯಪ್ ಗೂ ಅವರು ಚಾಲನೆ ನೀಡಲಿದ್ದಾರೆ. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

'ದಿ ಸಿಟಿಜೆನ್ ಕನೆಕ್ಟ್ ಆ್ಯಪ್' ಮೂಲಕ ಸರಕಾರದ ಕಾರ್ಯಕ್ರಮಗಳು, ಸಾಧನೆಗಳ ಕುರಿತು ತಾಜಾ ಮಾಹಿತಿ ಪಡೆಯಬಹುದು. ಜತೆಗೆ ಕುಂದುಕೊರತೆಗಳಿಗೆ ಪರಿಹಾರವನ್ನೂ ಕಂಡುಕೊಳ್ಳಬಹುದು. ಜತೆಗೆ ಮುಖ್ಯಮಂತ್ರಿಯವರು ನಡೆದು ಬಂದ ದಾರಿ, ನವ ಕರ್ನಾಟಕವನ್ನು ನಿರ್ಮಿಸುವ ಕುರಿತ ಅವರ ವಿಚಾರಗಳನ್ನು ಸಹ ತಿಳಿದುಕೊಳ್ಳಬಹುದು.
ಈ ಆ್ಯಪ್ನಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಕ್ಷಣ ಕ್ಷಣದ ಸುದ್ದಿಗಳು, ಮುಖ್ಯಮಂತ್ರಿಗಳ ಬ್ಲಾಗ್, ಅವರ ಭಾಷಣ, ಸಂದರ್ಶನಗಳ ಮಾಹಿತಿ, ಲಿಂಕ್ ಲಭ್ಯವಾಗಲಿದೆ. ಬಳಕೆದಾರರು ಇಲಾಖಾವಾರು ತಮ್ಮ ಅಭಿಪ್ರಾಯಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯೊಂದಿಗೆ ಹಂಚಿಕೊಳ್ಳಲು ಇಲ್ಲಿ ಅವಕಾಶವಿದೆ. ಯೋಜನೆಗಳನ್ನು ಪರಿಣಾಮಕಾರಿಯಾಗಿ ರೂಪಿಸುವುದು ಮತ್ತು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಆ್ಯಪ್ ಸಹಕಾರಿಯಾಗಲಿದೆ ಎಂದುಕೊಳ್ಳಲಾಗಿದೆ.
ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್
ಸರ್ಕಾರವು ರಾಜ್ಯದ ಪ್ರತಿ ಜಮೀನಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ನಡೆಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. 2017-18ರ ಖಾರಿಫ್ ಹಂಗಾಮಿನಲ್ಲಿ ಬೆಳೆದ ಬೆಳೆಗಳಿಗೆ ಈ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.
ಈ ಕಾರ್ಯಕ್ಕಾಗಿ ಸುಮಾರು 15 ಸಾವಿರ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅಧಿಕಾರಿಗಳು ಜಿಪಿಎಸ್ ಕೋ-ಆರ್ಡಿನೇಟ್ಗಳೊಂದಿಗೆ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರವನ್ನು ಸಂಗ್ರಹಿಸುವರಲ್ಲದೆ ಮಾಲೀಕರ ಆಧಾರ್ ವಿವರಗಳನ್ನು ಸಹ ಸಂಗ್ರಹಿಸುವರು.
ಈ ದತ್ತಾಂಶ ಸಂಗ್ರಹಿಸುವ ಕೆಲಸ ಬೃಹತ್ ಪ್ರಮಾಣದಲ್ಲಿ ಆಗಬೇಕಾಗಿರುವುದರಿಂದ ಇದು ನಿಧಾನವಾಗುವ ಸಾಧ್ಯತೆ ಇದೆ. ಇದನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿ ಪಡಿಸಲಾಗಿದೆ.
ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ವಿತರಣೆ, ರೈತರಿಗೆ ನೆರೆ ಅಥವಾ ಬರದಂತಹ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಪರಿಹಾರ ಒದಗಿಸಲು ಹಾಗೂ ಈ ಪರಿಹಾರದ ಮೊತ್ತವನ್ನು ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲು ಇದರಿಂದ ಸಹಾಯಕವಾಗಲಿದೆ.
ಬೆಳೆಗಳನ್ನು ಆರ್ಟಿಸಿಯಲ್ಲಿ ದಾಖಲಿಸುವುದರಿಂದ ಬೆಳೆಸಾಲ ಸುಗಮವಾಗಿ ದೊರೆಯಲೂ ರೈತರಿಗೆ ಅನುಕೂಲವಾಗುತ್ತದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications