ರೈತರಿಗೆ ಇಷ್ಟರಲ್ಲೇ ಸಿಗುವುದೇ ಹೊಸ ಸಾಲ?
ದಾವಣಗೆರೆ, ಏಪ್ರಿಲ್ 18: ಲಾಕ್ ಡೌನ್ ನಿಂದಾಗಿ ರೈತರಿಗೆ ಸಾಕಷ್ಟು ಅನನುಕೂಲವಾಗಿದೆ. ಇಷ್ಟರಲ್ಲಿಯೇ ರೈತರಿಗೆ ಹೊಸ ಸಾಲ ನೀಡಲು ನಿರ್ಧರಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಸರ್ಕಾರದಿಂದ ಅಧಿಕೃತ ಆದೇಶ ಬರಲಿದೆ" ಎಂದು ತಿಳಿಸಿದ್ದಾರೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್.
ದಾವಣಗೆರೆಯಲ್ಲಿ ಇಂದು ಮಾತನಾಡಿದ ಅವರು, "ಕೊರೊನಾ ಭೀತಿ ಹಿನ್ನೆಲೆ ರಾಜ್ಯದ ಬಹುತೇಕ ಎಪಿಎಂಸಿಗೆ ಭೇಟಿ ನೀಡಲಾಗುತ್ತಿದೆ. ರೈತರಿಗೆ ತಮ್ಮ ಬೆಳೆ ಮಾರಾಟಕ್ಕೆ ತೊಂದರೆ ಆಗಬಾರದು. ಈಗಾಗಲೇ ರೈತರ ಸಾಲ ಮನ್ನಾ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ" ಎಂದು ಹೇಳಿದರು.
"ರಾಜ್ಯದಲ್ಲಿ 29800 ಅರ್ಜಿಗಳಿದ್ದವು. ಇದರಲ್ಲಿ 14629 ಅರ್ಜಿಗಳು ಇನ್ನೂ ವಿಲೇವಾರಿ ಆಗಿಲ್ಲ. ಈ ಕುರಿತು ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ರೈತರಿಗೆ ಹೊಸ ಸಾಲ ನೀಡುವ ಬಗ್ಗೆ ಆದೇಶ ಹೊರಡಿಸಲಾಗುವುದು. ಇದೇ ವಿಚಾರಕ್ಕೆ ಸಿಎಂ ಜೊತೆ ಸಭೆ ನಡೆಸಲಾಗುವುದು" ಎಂದರು.

ಖಾಸಗಿ ಹಣಕಾಸು ಕಂಪನಿಗಳು ರೈತರಿಂದ ಸಾಲ ವಸೂಲು ಮಾಡುವಂತಿಲ್ಲ. ವಾಹನಗಳನ್ನ ಸೀಜ್ ಮಾಡುವಂತಿಲ್ಲ. ಅದಾಗಿಯೂ ಸಾಲ ವಸೂಲಿ ಮಾಡಲು ಮುಂದಾದರೆ ಅಂಥ ಕಂಪನಿಗಳಿಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಸುತ್ತೋಲೆ ಕಳುಹಿಸಲಾಗುವುದು. ಮೂರು ತಿಂಗಳ ಕಾಲ ಸಾಲ ವಸೂಲಿ ಮಾಡದಂತೆ ಖಾಸಗಿ ಕಂಪನಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications