Get Updates
Get notified of breaking news, exclusive insights, and must-see stories!

ಎಪಿಎಂಸಿಯಲ್ಲಿ 130 ರೂ.ಗಳಿಗೆ ತೊಗರಿ ಬೇಳೆ ಲಭ್ಯ

ಬೆಂಗಳೂರು, ಜುಲೈ 07 : ಗಗನಮುಖಿಯಾಗಿರುವ ತೊಗರಿ ಬೇಳೆ ಬೆಲೆ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಜುಲೈ 8ರಿಂದ ಎಪಿಎಂಸಿಗಳಲ್ಲಿ 130 ರೂ.ಗಳಿಗೆ ತೊಗರಿ ಬೇಳೆ ದೊರೆಯಲಿದೆ. ಮೂರು ತಿಂಗಳ ತನಕ ಇದೇ ಬೆಲೆಯಲ್ಲಿ ಬೇಳೆ ಗ್ರಾಹಕರಿಗೆ ಲಭ್ಯವಾಗಲಿದೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಆಹಾರ ಧಾನ್ಯಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ. ಇದರಿಂದ ಬೆಲೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ' ಎಂದು ಅವರು ಹೇಳಿದ್ದಾರೆ. [ಗಮನಿಸಿ, 120 ರು.ಗಿಂತ ಹೆಚ್ಚಿನ ದರಕ್ಕೆ ಬೇಳೆಕಾಳು ಮಾರುವಂತಿಲ್ಲ]

toor dal

ರಾಜ್ಯದ 144 ಎಪಿಎಂಸಿಗಳಲ್ಲಿ ಗ್ರೇಡ್ - 1 ಬೇಳೆ ಪ್ರತಿ ಕೆಜಿಗೆ ರೂ. 145 ಮತ್ತು ಗ್ರೇಡ್ -2 ಬೇಳೆ ಪ್ರತಿ ಕೆಜಿಗೆ ರೂ. 130 ದರದಲ್ಲಿ ಮಾರಾಟ ಮಾಡಲಾಗುತ್ತದೆ. ಈ ದರದಲ್ಲೇ ಮುಂದಿನ ಮೂರು ತಿಂಗಳ ಕಾಲ ತೊಗರಿ ಬೇಳೆ ಮಾರಾಟ ಮಾಡುತ್ತದೆ. ಜುಲೈ 8ರಿಂದ ಎಪಿಎಂಸಿಗಳಲ್ಲಿ ಈ ಬೆಲೆಯಲ್ಲಿ ಬೇಳೆ ಖರೀದಿ ಮಾಡಬಹುದು. [ಬೇಳೆಕಾಳು ಖರೀದಿಗೆ ಟೆಂಡರ್ ಆಹ್ವಾನಿಸಿದ ರಾಜ್ಯ ಸರ್ಕಾರ]

ಮೋರ್ ಮೇಲೆ ದಾಳಿ ನಡೆದಿತ್ತು : ಕಳೆದ ವಾರ ಬೆಂಗಳೂರು ನಗರದಲ್ಲಿನ ಹಲವು ಮೋರ್ ಮಳಿಗೆಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿತ್ತು. 300 ಮತ್ತು 315 ರೂ.ಗಳಿಗೆ ಬೇಳೆಯನ್ನು ಮಾರಾಟ ಮಾಡುತ್ತಿರುವುದು ಈ ಸಮಯದಲ್ಲಿ ಬೆಳಕಿಗೆ ಬಂದಿತ್ತು. ಇಂತಹ ಮಳಿಗೆಳಿಗೆ ನೋಟಿಸ್ ಜಾರಿ ಮಾಡಲಾಗಿತ್ತು. [ಅಬ್ಬಾ...ದ್ವಿಶತಕದ ಗಡಿಬಿಟ್ಟು ಕೆಳಗಿಳಿದ ಬೇಳೆ ಕಾಳು]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+