ಎಪಿಎಂಸಿಯಲ್ಲಿ 130 ರೂ.ಗಳಿಗೆ ತೊಗರಿ ಬೇಳೆ ಲಭ್ಯ
ಬೆಂಗಳೂರು, ಜುಲೈ 07 : ಗಗನಮುಖಿಯಾಗಿರುವ ತೊಗರಿ ಬೇಳೆ ಬೆಲೆ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಜುಲೈ 8ರಿಂದ ಎಪಿಎಂಸಿಗಳಲ್ಲಿ 130 ರೂ.ಗಳಿಗೆ ತೊಗರಿ ಬೇಳೆ ದೊರೆಯಲಿದೆ. ಮೂರು ತಿಂಗಳ ತನಕ ಇದೇ ಬೆಲೆಯಲ್ಲಿ ಬೇಳೆ ಗ್ರಾಹಕರಿಗೆ ಲಭ್ಯವಾಗಲಿದೆ.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಆಹಾರ ಧಾನ್ಯಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ. ಇದರಿಂದ ಬೆಲೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ' ಎಂದು ಅವರು ಹೇಳಿದ್ದಾರೆ. [ಗಮನಿಸಿ, 120 ರು.ಗಿಂತ ಹೆಚ್ಚಿನ ದರಕ್ಕೆ ಬೇಳೆಕಾಳು ಮಾರುವಂತಿಲ್ಲ]

ರಾಜ್ಯದ 144 ಎಪಿಎಂಸಿಗಳಲ್ಲಿ ಗ್ರೇಡ್ - 1 ಬೇಳೆ ಪ್ರತಿ ಕೆಜಿಗೆ ರೂ. 145 ಮತ್ತು ಗ್ರೇಡ್ -2 ಬೇಳೆ ಪ್ರತಿ ಕೆಜಿಗೆ ರೂ. 130 ದರದಲ್ಲಿ ಮಾರಾಟ ಮಾಡಲಾಗುತ್ತದೆ. ಈ ದರದಲ್ಲೇ ಮುಂದಿನ ಮೂರು ತಿಂಗಳ ಕಾಲ ತೊಗರಿ ಬೇಳೆ ಮಾರಾಟ ಮಾಡುತ್ತದೆ. ಜುಲೈ 8ರಿಂದ ಎಪಿಎಂಸಿಗಳಲ್ಲಿ ಈ ಬೆಲೆಯಲ್ಲಿ ಬೇಳೆ ಖರೀದಿ ಮಾಡಬಹುದು. [ಬೇಳೆಕಾಳು ಖರೀದಿಗೆ ಟೆಂಡರ್ ಆಹ್ವಾನಿಸಿದ ರಾಜ್ಯ ಸರ್ಕಾರ]
ಮೋರ್ ಮೇಲೆ ದಾಳಿ ನಡೆದಿತ್ತು : ಕಳೆದ ವಾರ ಬೆಂಗಳೂರು ನಗರದಲ್ಲಿನ ಹಲವು ಮೋರ್ ಮಳಿಗೆಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿತ್ತು. 300 ಮತ್ತು 315 ರೂ.ಗಳಿಗೆ ಬೇಳೆಯನ್ನು ಮಾರಾಟ ಮಾಡುತ್ತಿರುವುದು ಈ ಸಮಯದಲ್ಲಿ ಬೆಳಕಿಗೆ ಬಂದಿತ್ತು. ಇಂತಹ ಮಳಿಗೆಳಿಗೆ ನೋಟಿಸ್ ಜಾರಿ ಮಾಡಲಾಗಿತ್ತು. [ಅಬ್ಬಾ...ದ್ವಿಶತಕದ ಗಡಿಬಿಟ್ಟು ಕೆಳಗಿಳಿದ ಬೇಳೆ ಕಾಳು]
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications