ಬೆಂಗಳೂರಿನ ಮಾಲ್ಗಳಲ್ಲಿ ಸಾವಯವ ಉತ್ಪನ್ನಗಳು ದೊರೆಯಲಿದೆ
ಬೆಂಗಳೂರು, ಜು.18: ಇನ್ನುಮುಂದೆ ನಗರದಲ್ಲಿರುವ ಮಾಲ್ಗಳಲ್ಲಿ ಕೂಡ ಸಾವಯವ ಉತ್ಪನ್ನಗಳು ದೊರೆಯಲಿದೆ. ಸಾವಯವ ಕೃಷಿ ಉತ್ಪನ್ನಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಕೃಷಿ ಇಲಾಖೆಯು ಎಲ್ಲಾ ಮಾಲ್ಗಳಲ್ಲೂ ಸಾವಯವ ಉತ್ಪನ್ನಗಳನ್ನು ಇರಿಸಲು ಮುಂದಾಗಿದೆ.
ಕೃಷಿ ಇಲಾಖೆ ಹಾಗೂ ಕೃಷಿಕರ ಒಕ್ಕೂಟನಗರ ಸೂಪರ್ ಮಾರ್ಕೆಟ್ ಜತೆ ಸಂಯೋಜನೆ ಮಾಡಲು ನಿರ್ಧರಿಸಿದೆ.ರಾಜ್ಯದಲ್ಲಿ ಸುಮಾರು 95 ಸಾವಿರಕ್ಕೂ ಹೆಚ್ಚು ನೋಂದಾಯಿತ ಸಾವಯವ ಕೃಷಿಕರಿದ್ದು, ಹಣ್ಣು, ತರಕಾರಿ, ಏಕದಳ, ದ್ವಿದಳ ಧಾನ್ಯ, ಎಣ್ಣೆಕಾಳುಗಳು ಸೇರಿದಂತೆ ಹಲವು ಬೆಳೆಗಳನ್ನು ಸಾವಯವ ಕೃಷಿ ಪದ್ಧತಿ ಮೂಲಕ ಬೆಳೆಯುತ್ತಿದ್ದಾರೆ.
ಆದರೆ ಈ ಪದಾರ್ಥಗಳಿಗೆ ಸೂಕ್ತ ಮಾರುಕಟ್ಟೆಯಿಲ್ಲದೆ ರೈತರು ಕಂಗಾಲಾಗಿದ್ದರು, ಹಾಗೂ ಬೆಳೆಗಳನ್ನು ಬೆಳೆಯಲು ಹಿಂದೇಟು ಹಾಕುತ್ತಿದ್ದರು. ಈಗಾಗಲೇ ಕೆಲವು ಮಾಲ್ಗಳ ಆಹಾರ ವಿಭಾಗದಲ್ಲಿ ಆಯ್ದ ಸಾವಯವ ಉತ್ಪನ್ನಗಳ ಮಾರಾಟ ನಡೆದಿದೆ.

ಆದರೆ ಎಲ್ಲ ಉತ್ಪನ್ನಗಳು ಸಿಗುತ್ತಿಲ್ಲ. ಜನರು ಖರೀದಿಸಲು ಬಯಸಿದರೂ ಲಭ್ಯವಿಲ್ಲ. ಈ ಹಿನ್ನೆಲೆಯಲ್ಲಿ ಬಿಗ್ ಬಜಾರ್, ಫುಡ್ ವರ್ಲ್ಡ್, ಮೋರ್, ಸ್ಟಾರ್ ಬಜಾರ್ ರಿಯಲಯನ್ಸ್ ಮಾರ್ಟ್ ಸೇರಿದಂತೆ ಅನೇಕ ಸೂಪರ್ ಮಾರ್ಕೆಟ್ಗಳಲ್ಲಿ ಲಭ್ಯವಿರಲಿದೆ.
ಗ್ರಾಮೀಣ ಕೃಷಿ ಪ್ರದೇಶದಲ್ಲಿ ಸಾವಯವ ಕೃಷಿ ಮಾಡುವ ರೈತರ ಒಕ್ಕೂಟಗಳನ್ನು ರಚಿಸಲಾಗಿದೆ. ಈ ಒಕ್ಕೂಟದಲ್ಲಿ ಸಾವಯವ ಕೃಷಿಕರನ್ನು ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ನೋಂದಣಿಯಾದ ರೈತರು ಸಾವಯವ ಕೃಷಿ ಕೃಷಿ ಪದ್ಧತಿಯನ್ನು ಅನುಸರಿಸುವುದು ಕಡ್ಡಾಯವಾಗಿದೆ ಈ ಒಕ್ಕೂಟದ ರೈತರು 5 ಅಥವಾ 10 ರೂ.ಗಳಷ್ಟು ಷೇರುಗಳನ್ನು ಹಾಕಿ ಸ್ಥಳೀಯವಾಗಿ ಮಾರುಕಟ್ಟೆಯನ್ನು ನಿರ್ಮಾಣ ಮಾಡಿಕೊಂಡು ವ್ಯವಹರಿಸುತ್ತಿದ್ದಾರೆ.
-
PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ -
Bengaluru PG: ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ: ಪಿಜಿಗಳಲ್ಲಿ ಊಟ ಬಂದ್, ವೈರಲ್ ಪೋಸ್ಟ್ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications