ಕರ್ನಾಟಕದ ಸಾಲಮನ್ನಾಕ್ಕೆ ನೆರವು ನೀಡಲು ಮೋದಿಗೆ ಎಂಇಪಿ ಆಗ್ರಹ
ಬೆಂಗಳೂರು, ಮೇ 31: ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮಿಶ್ರ ಸರ್ಕಾರ ತನ್ನ ಇತಿಮಿತಿಯಲ್ಲಿ ರೈತರ ಸಾಲಮನ್ನಾ ಮಾಡಲು ದಿಟ್ಟ ನಿರ್ಧಾರ ತೆಗೆದುಕೊಂಡಿರುವುದನ್ನು ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾಶೇಕ್ ಸ್ವಾಗತಿಸಿದ್ದಾರೆ.
ಎಂಇಪಿ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ಈ ಭರವಸೆ ರೈತರ ಸಾಲವನ್ನು ಮನ್ನಾ ಮಾಡುವ ಭರವಸೆ ನೀಡಿತ್ತು. ರಾಜ್ಯದ ಹಣಕಾಸು ಪರಿಸ್ಥಿತಿಯ ಇತಿಮಿತಿಯಲ್ಲಿ ಹಂತ ಹಂತವಾಗಿ ಎಲ್ಲ ರೈತರ ಸಾಲ ಮನ್ನಾ ಮಾಡುವ ಹಾಗೂ ಅವರನ್ನು ಆತ್ಮಹತ್ಯೆ ಗಳಿಂದ ಪಾರು ಮಾಡುವ ಅಗತ್ಯವಿದೆ. ವೈಜ್ಞಾನಿಕ, ಆಧುನಿಕ ಹಾಗೂ ಪರ್ಯಾಯ ಕೃಷಿ ಪದ್ದತಿಗಳ ಮೂಲಕ ರೈತರಲ್ಲಿ ಆತ್ಮಸ್ಥೈರ್ಯ ಹಾಗೂ ಸ್ವಾವಲಂಬಿ ಬದುಕಿಗೆ ನಾಂದಿ ಹಾಡಬೇಕಿದೆ ಎಂದು ಅವರು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರವೂ ಕರ್ನಾಟಕದ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ತನ್ನ ಬದ್ಧತೆ ಪ್ರದರ್ಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇನ್ನು ರಾಜ್ಯ ಸರ್ಕಾರವೂ ಹಂತ-ಹಂತವಾಗಿ ಅನ್ನದಾತ ರೈತರ ಸಾಲ ಮನ್ನಾ ಮಾಡಲು ರೂಪುರೇಷೆ ಸಿದ್ದಪಡಿಸಲು ತೆಗೆದುಕೊಂಡಿರುವ ಕ್ರಮಗಳು ಆಶಾಯದಾಯಕ ಬೆಳವಣಿಗೆ ಆಗಿವೆ.

ರೈತರ ಸಾಲಮನ್ನಾ ನಿಜವಾದ ಬಡವರಿಗೆ ಮತ್ತು ಅರ್ಹ ರೈತರಿಗೆ ಮುಟ್ಟಬೇಕು, ತಲುಪಬೇಕು ಎಂಬುದರಲ್ಲಿ ಎರಡನೇ ಮಾತಿಲ್ಲ. ಈ ಸುವರ್ಣ ಅವಕಾಶವನ್ನು ನಾಡಿನ ರೈತ ಸಮುದಾಯ ಸದುಪಯೋಗ ಪಡಿಸಿಕೊಳ್ಳಬೇಕು ಕೂಡಲೇ ನೋಡಲ್ ಅಧಿಕಾರಿಗಳಿಗೆ ಸಾಲದ ದಾಖಲಾತಿಗಳನ್ನು ಸಲ್ಲಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ರೈತರ ಸಾಲಮನ್ನಾದ ವಿಚಾರ ನಿಜಕ್ಕೂ ಜಟಿಲ ಸಮಸ್ಯೆ ಎಂಬುದರಲ್ಲಿ ಬೇರೆ ಮಾತೆಯಿಲ್ಲ ನಾಡಿನ ಬುದ್ಧಿಜೀವಿಗಳು, ಪ್ರಗತಿಪರ ರೈತರು, ಆರ್ಥಿಕ ಕ್ಷೇತ್ರದ ಪರಿಣಿತರು, ಬ್ಯಾಂಕಿಂಗ್ ಕ್ಷೇತ್ರದ ತಜ್ಞರು ಎಲ್ಲರು ಒಟ್ಟಾಗಿ ಸೇರಿ ಈ ಸಮಸ್ಯೆಗೆ ಪರಿಹಾರ ಹುಡುಕಿ ಅನ್ನದಾತನನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ.
ರೈತರ ಸಾಲಮನ್ನಾ ಮಾಡುವುದು ಎಷ್ಟರ ಮಟ್ಟಿಗೆ ಸರಿ: ಈ ಪ್ರಶ್ನೆಗಳು ಹಲವು ದಿನಗಳಿಂದ ಕೇಳಿ ಬರುತ್ತಲೇ ಇವೆ ಬರಿ ಚರ್ಚೆ ಮಾಡಿಕೊಂಡು ಕಾಲಹರಣ ಮಾಡುವುದು ಸರಿಯಲ್ಲ ಅನ್ನದಾತ ತೀರ ಕಷ್ಟದಲ್ಲಿದ್ದಾನೆ. ಮುಂಗಾರು ಹೊಸ ಭರವಸೆ ಹುಟ್ಟಿಸಿದೆ ಇದಕ್ಕೆ ತಕ್ಕಂತೆ ಸಮಿಶ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಅದಕ್ಕೆ ರೈತರ ಹಿತ ರಕ್ಷಣೆ ದೃಷ್ಟಿಯಿಂದ ಪಕ್ಷಾತೀತವಾಗಿ ಎಲ್ಲರ ಸಹಕಾರವು ತುಂಬ ಅಗತ್ಯವಾಗಿದೆ.
ಇನ್ನು ಮುಂದೆ ರೈತರಿಗೆ ಬೆಳೆನಷ್ಟವಾದ ಸಮಯದಲ್ಲೇ ಸೂಕ್ತ ವಿಮಾ ಸೌಲಭ್ಯ ಕಲ್ಪಿಸುವುದು ಹಾಗೂ ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ ಮುಂದೆ ಸಾಲಮನ್ನಾ ಮಾಡಬೇಕಾದ ಪ್ರಮೇಯವೇ ಬರುವುದಿಲ್ಲ ಈ ನಿಟ್ಟಿನಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಗಮನಹರಿಸಿ ಕಾರ್ಯಕ್ರಮ ರೂಪಿಸಬೇಕೆಂದು ಡಾ.ನೌಹೀರಾ ಶೇಕ್ ಮನವಿ ಮಾಡಿಕೊಂಡಿದ್ದಾರೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications