ಕೃಷಿ ಹೊಂಡ , ಕೆರೆ ಕಟ್ಟೆಗಳು ಭರ್ತಿ, ಅಂತರ್ಜಲ ಹೆಚ್ಚಿಸಲು ಸಹಕಾರಿಯಾದ ನರೇಗಾ
ರಾಯಚೂರು ಸೆಪ್ಟೆಂಬರ್ 11: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನಿರ್ಮಿಸಿದ ಕೃಷಿ ಹೊಂಡ ಮತ್ತು ಕೆರೆ ಕಟ್ಟೆಗಳು ಭರ್ತಿಯಾಗಿದ್ದು, ಜಿಲ್ಲೆಯಲ್ಲಿನ ಅಂತರ್ಜಲ ಮಟ್ಟ ಹೆಚ್ಚಾಗಲು ಸಹಕಾರಿಯಾಗಿವೆ.
ರೈತರ ಕೃಷಿ ಚಟುವಟಿಕೆಗೆ ಮತ್ತು ನೀರಿನ ಅಭಾವ ನೀಗಿಸಲು ಮಳೆಯ ನೀರನ್ನು ಸಂಗ್ರಹಿಸಿ ಅದನ್ನುವ್ಯವಸಾಯಕ್ಕೆ ಬಳಸಿಕೊಳ್ಳುವುದು ಇದರ ಉದ್ದೇಶವಾಗಿದೆ. ರಾಯಚೂರು ತಾಲೂಕಿನಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಯೋಜನೆಯಡಿ ಅಂತರ್ಜಲ ಅಭಿವೃದ್ಧಿ ಮಾಡುವುದಕ್ಕೆ ಹಾಗೂ ಮಣ್ಣು ಮತ್ತು ನೀರು ಸಂರಕ್ಷಣೆಯ ಕಾಮಗಾರಿಗಳನ್ನು ಕೈಕೊಳ್ಳಲಾಗಿದೆ.
ರೈತರು ತಮ್ಮ ಹೊಲದಲ್ಲಿ ಬದು ನಿರ್ಮಾಣ ಮಾಡಿ, ತೆಗೆದ ಗುಂಡಿಗಳಲ್ಲಿ ಮಳೆ ಬಂದಾಗ ನೀರು ಶೇಖರಣೆಯಾಗಿ ಅಂತರ್ಜಲ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ. ಈ ಯೋಜನೆಯನ್ನು ಸರಕಾರ ಸಮರ್ಪಕವಾಗಿ ಅನುಷ್ಠಾನ ಮಾಡುವುದರಿಂದ ರೈತರಿಗೆ ಸಾಕಷ್ಟು ಪ್ರಯೋಜನ ಲಭಿಸಲಿದೆ.

ಒಟ್ಟು 13 ಸಾವಿರ ಸಹಾಯಧನ
ತಮ್ಮ ಹೊಲಗಳಲ್ಲಿ ಕಂದಕ ಬದು ನಿರ್ಮಿಸಲು ಅರ್ಥಿಕ ತೊಂದರೆ ಅನುಭವಿಸುತ್ತಿರುವ ರೈತರು , ನರೇಗಾ ಯೋಜನೆಯಿಂದ ಅನುದಾನ ಕೂಡ ಸಿಗಲಿದೆ. ಒಂದು ಎಕರೆಯಲ್ಲಿ 13 ಕಂದಕ ಬದುಗಳನ್ನು ತೆಗೆಯಲು ರೂ 10,000 ಸಾವಿರ ರೂ ಕೂಲಿ ಹಣ ಹಾಗೂ ರೂ 3,000 ಸಾವಿರ ಸಾಮಾಗ್ರಿ ವೆಚ್ಚ ನೀಡುವ ಮೂಲಕ ಉದ್ಯೋಗ ಚೀಟಿದಾರರು ರೈತರ ಜಮೀನಿನನಲ್ಲಿ ಉದ್ಯೋಗಗಳನ್ನು ಕಲ್ಪಿಸಲಾಗುತ್ತದೆ. ಇನ್ನು ಒಂದು ಗುಂಡಿ ನಿರ್ಮಿಸಲು 16.5 ಅಡಿ ಉದ್ದ, 3 ಅಡಿ ಆಗಲ, 2 ಅಡಿ ಎತ್ತರದ ಗುಂಡಿ ತೆಗೆಯಬೇಕು. ಒಂದು ಎಕೆರೆಯಲ್ಲಿ 13 ಗುಂಡಿಗಳನ್ನು ನಿರ್ಮಿಸಬಹುದಾಗಿದೆ.

ಅಂತರ್ಜಲ ಮಟ್ಟ ಏರಿಕೆ
ಮಣ್ಣಿನ ಸವಕಳಿ ನಿಯಂತ್ರಣ, ತೇವಾಂಶ ಹೆಚ್ಚಾಗುವುದರಿಂದ ಶೇ.10 ರಿಂದ 15 ರಷ್ಟು ಬೆಳೆ ಇಳುವರಿ, ಒಂದು ಕಂದಕ ಬದುವಿನಲ್ಲಿ ಸುಮಾರು 3 ಸಾವಿರ ಲೀಟರ್ನಂತೆ ಒಟ್ಟು 39,000 ಲೀಟರ್ ಭೂಮಿಯಲ್ಲಿ ಇಂಗುವ ಮೂಲಕ ಅಂತರ್ಜಲ ಮಟ್ಟ ಏರಿಕೆಯಾಗುತ್ತದೆ. ಮುಂದುವರೆದು ಬದು ಬೇಸಾಯಕ್ಕಾಗಿ ರೈತರು ಬದುಗಳ ಮೇಲೆ ತೋಟಗಾರಿಕೆ, ಅರಣ್ಯ ಸಸಿಗಳನ್ನು ನಾಟಿ ಮಾಡಿದಲ್ಲಿ ತಮ್ಮ ಅದಾಯ ಹೆಚ್ಚಿಸಿಕೊಳ್ಳಬಹುದು.

ರೈತರ ಕೃಷಿ ಚಟುವಟಿಕೆಗೂ ನೀರು ಬಳಕೆ
ಈಗಾಗಲೆ ಮಳೆಯಿಂದ ಕೃಷಿಹೊಂಡ, ಗೋಕಟ್ಟೆ, ಹಳ್ಳ, ಕಾಲುವೆ, ಕೆರೆಗಳಲ್ಲಿ ನೀರು ಸಂಗ್ರಹವಾಗಿದೆ. ಇದರಿಂದಾಗಿ ದನಕರುಗಳಿಗೆ ನೀರಿನ ದಾಹ ನೀಗಿಸುತ್ತದೆ. ಇನ್ನು ಈ ನರೇಗ ಯೋಜನೆಯಡಿ ನಿರ್ಮಿತಗೊಳ್ಳುವ 10 ಮೀಟರ್ ಉದ್ದ, 10 ಮೀಟರ್ ಆಗಲ, 3 ಮೀಟರ್ ಆಳದ ಕೃಷಿಹೊಂಡದಲ್ಲಿ ಶೇಖರಣೆಯಾದ ನೀರಿನಿಂದ ರೈತರು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಅನುಕೂಲವಾಗುತ್ತದೆ.

ಅರ್ಥಿಕವಾಗಿ ಸಹಕಾರಿ
ನರೇಗಾ ಯೋಜನೆಯ ಅಭಿಯಾನದಡಿ, ನೀರು ಮತ್ತು ಮಣ್ಣು ಸಂರಕ್ಷಣೆ ಕಾಮಗಾರಿಗಳನ್ನು ಅನುಷ್ಠಾನ ಮಾಡುವುದರೊಂದಿಗೆ ಗ್ರಾಮದ ಕೂಲಿಕಾರರಿಗೆ ಕೆಲಸ ಒದಗಿಸಿ, ಕುಟುಂಬ ನಿರ್ವಹಣೆ ಅರ್ಥಿಕ ಸಹಕಾರಿಯಾಗಲಿದೆ. ಜೊತೆಗೆ ಮಳೆಯ ನೀರು ವ್ಯರ್ಥವಾಗದಂತೆ ತಡೆಯುವುದರಿಂದ ಅಂತರ್ಜಲ ಪ್ರಮಾಣ ಕೂಡ ಹೆಚ್ಚಾಗಲಿದೆ ಎಂದು ತಾಲ್ಲೂಕು ನರೇಗಾ ಸಂಯೋಜಕರು ಧನಂಜಯ ತಿಳಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications