ಈರುಳ್ಳಿ ಬೆಳೆದ ರೈತನ ಕಣ್ಣಲ್ಲೇ ನೀರು; ಕಾರಣ ಏನು?
ಧಾರವಾಡ, ಅಕ್ಟೋಬರ್ 12: ಪ್ರವಾಹ ಜನರ ಬದುಕನ್ನೇ ಮೂರಾಬಟ್ಟೆ ಮಾಡಿದೆ. ಇದಕ್ಕೆ ಉದಾಹರಣೆಯಾಗಿ ಕಾಣುತ್ತಿವೆ ಧಾರವಾಡದ ನವಲಗುಂದ ತಲೂಕಿನ ತಲೆಮೊರಬ ಗ್ರಾಮದ ರೈತರ ಈರುಳ್ಳಿ ಹೊಲಗಳು.
ಒಳ್ಳೆ ಬೆಲೆಯ ನಿರೀಕ್ಷೆಯಲ್ಲಿ ಧಾರವಾಡದ ತಲೆಮೊರಬ ಗ್ರಾಮದಲ್ಲಿ ಈ ಬಾರಿ ರೈತರು ಈರುಳ್ಳಿ ಬೆಳೆದಿದ್ದರು. ಈರುಳ್ಳಿಗೆ ಉತ್ತಮ ಬೆಲೆ ಸಿಗಬಹುದು ಎಂದು ಅಂದಾಜು ಹಾಕಿಕೊಂಡಿದ್ದರು. ಆದರೆ ಆ ಲೆಕ್ಕಾಚಾರವೆಲ್ಲಾ ತಲೆ ಕೆಳಗಾಗಿದೆ. ಈ ಬಾರಿ ಸುರಿದ ಭಾರೀ ಮಳೆಗೆ ಬೆಳೆದ ಈರುಳ್ಳಿ ಹಾನಿಯಾಗಿದೆ.ಪ್ರವಾಹದಲ್ಲಿ ಸಾಕಷ್ಟು ಈರುಳ್ಳಿ ಬೆಳೆ ಕೊಚ್ಚಿ ಹೋಗಿದ್ದು, ಕೆಲವೆಡೆ ತಿರುಗು ರೋಗ ಶುರುವಾಗಿದೆ.

ರೈತರು ಸಾಲಸೋಲ ಮಾಡಿದ ಬೆಳೆದ 13 ಎಕರೆ ಈರುಳ್ಳಿ ಕೈಗೆ ಬರುವ ಹೊತ್ತಿನಲ್ಲಿ ಕೈ ಕೊಟ್ಟಿದೆ. 13 ಎಕರೆ ಜಮೀನಿನಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಗೆ ಪ್ರತಿ ಎಕರೆಗೆ 30 ಸಾವಿರ ರೂಪಾಯಿ ಖರ್ಚು ಮಾಡಲಾಗಿತ್ತು. ಅಲ್ಲದೇ ಈರುಳ್ಳಿಯ ಮೇಲೆ ವಿಮೆಯನ್ನು ಕೂಡ ಕಟ್ಟಲಾಗಿದೆ. ಆದರೆ ಈಗ ಬೆಳೆ ವಿಮೆಯ ಹಣವೂ ಸಿಗುತ್ತಿಲ್ಲ. ಅದರಲ್ಲೂ ಒಂದು ಎಡವಟ್ಟಾಗಿದೆ. ಈರುಳ್ಳಿ ಬೆಳೆಯುವ ಪ್ರದೇಶದಲ್ಲಿ ಮೆಣಸಿನಕಾಯಿಯ ಬೆಳೆ ವಿಮೆ ಕಟ್ಟಿಸಿಕೊಂಡಿದ್ದಾರೆ. ಮೆಣಸಿನಕಾಯಿ ಬೆಳೆಯುವ ಪ್ರದೇಶದಲ್ಲಿ ಈರುಳ್ಳಿ ಬೆಳೆ ವಿಮೆ ಕಟ್ಟಿಸಿಕೊಂಡಿದ್ದು, ಈ ಸಂಗತಿ ರೈತರನ್ನು ಆತಂಕಕ್ಕೆ ತಳ್ಳಿದೆ. ಇಷ್ಟೆಲ್ಲಾ ಕಷ್ಟಗಳ ನಡುವೆ ಗಾಯದ ಮೇಲೆ ಬರೆ ಎಳೆದಂತೆ ಈರುಳ್ಳಿಗೆ ತಿರುಗು ರೋಗ ಕಾಡುತ್ತಿದೆ.
ಪ್ರತಿ ಬಾರಿಯೂ ಒಂದಲ್ಲಾ ಒಂದು ಸಮಸ್ಯೆಯಿಂದ ಜಿಲ್ಲೆಯ ರೈತರು ಬಳಲುತ್ತಲೇ ಇರುತ್ತಾರೆ. ಈರುಳ್ಳಿಗೆ ಒಳ್ಳೆ ದರ ಬಂದಿದೆ ಅನ್ನುವಾಗಲೂ ಮಧ್ಯವರ್ತಿಗಳ ಕಾಟದಿಂದ ರೈತರು ಕಡಿಮೆ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ಹಲವಾರು ಬಾರಿ ನಿರ್ಮಾಣವಾಗಿದೆ. ಹೀಗಾಗಿ ರೈತರ ಸಂಕಷ್ಟಕ್ಕೆ ಕೂಡಲೇ ಜಿಲ್ಲಾಡಳಿತ ಸ್ಪಂದಿಸಬೇಕು ಅನ್ನುವ ಕೂಗು ಪ್ರತಿ ಬಾರಿಯೂ ಕೇಳಿಬರುತ್ತಲೇ ಇರುತ್ತದೆ. ಆದರೆ ಪರಿಸ್ಥಿತಿ ಕೈಮೀರಿ ಹೋಗುವವರೆಗೂ ಜಿಲ್ಲಾಡಳಿತ ಸುಮ್ಮನೆ ಕುಳಿತುಕೊಂಡು, ಬಳಿಕ ಎಚ್ಚೆತ್ತುಕೊಂಡಂತೆ ಆಟವಾಡುವುದು ಮಾಮೂಲಾಗಿದೆ. ಈ ಬಾರಿಯೂ ಹಾಗೆ ಆಗದಿರಲಿ ಅನ್ನುವುದೇ ಇಲ್ಲಿನ ರೈತರ ಮನವಿ.
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ












Click it and Unblock the Notifications