ಕೂಡಲಸಂಗಮದಲ್ಲಿ ರೈತನೇ ಮಹಾರಾಜ

ರಾಜ್ಯದ ಶ್ರೀಮಂತ ಕೃಷಿ ವೈವಿಧ್ಯತೆ, ಸಾವಯವ ಪರಿಕರಗಳು, ಸಂಪ್ರದಾಯಕ ಸಲಕರಣೆಗಳನ್ನು, ದೇಸಿ ಪಶು ತಳಿಗಳನ್ನು, ದೇಸಿ ಬೀಜಗಳನ್ನು ಪ್ರದರ್ಶಿಸುವ ಮತ್ತು ರೈತರ ಯಶೋಗಾಥೆಗಳನ್ನು ತಿಳಿಸುವ ಉದ್ದೇಶ ಹೊಂದಲಾಗಿದೆ. ರಾಜ್ಯದ ಎಲ್ಲ ತಾಲ್ಲೂಕುಗಳಿಂದ ಸುಮಾರು 2ಲಕ್ಷಕ್ಕೂ ಹೆಚ್ಚು ಕೃಷಿಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ, ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಜೈರಾಂ ರಮೇಶ್, ರಾಜ್ಯದ ಕೃಷಿ ಸಚಿವ ಎಸ್.ಎ. ರವೀಂದ್ರನಾಥ್ ಅವರು ಪಾಲ್ಗೊಳ್ಳಲಿದ್ದಾರೆ.
500 ಸಾವಯವ ಕೃಷಿ ಕುಟುಂಬಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು ಈ ರೈತರನ್ನು ತೇರು ಮೆರವಣಿಗೆಯಲ್ಲಿ ಬಸವಣ್ಣನವರ ಐಕ್ಯ ಸ್ಥಳ ಕೂಡಲಸಂಗಮದಿಂದ ಸಂಜೆ 4 ಗಂಟೆಯಿಂದ ಕರೆತರಲಿದ್ದು ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮವಿದೆ ಎಂದು ತಿಳಿಸಿದರು.
ಆಯ್ಕೆ ಮಾಡಲಾಗಿರುವ ಸಾವಯವ ಕೃಷಿಕರು 5 ಎಕರೆ ಒಳಗೆ ಜಮೀನು ಹೊಂದಿ ಸ್ವತ: ಕೃಷಿಕರಾಗಿದ್ದು, ಮಳೆಯಾಶ್ರಿತ ಬೇಸಾಯ ಅವಲಂಬಿಸಿದವರಾಗಿರಬೇಕು. ಜೊತೆಗೆ ಅವರ ಮಕ್ಕಳು ಸಹಾ ಕೃಷಿಯನ್ನು ಅವಲಂಬಿಸಿರಬೇಕು. ಇದರಲ್ಲಿ 83 ಪರಿಶಿಷ್ಟ ಜಾತಿ 32 ಪರಿಶಿಷ್ಟ ಪಂಗಡ ಸೇರಿದ ರೈತರನ್ನು ಆಯ್ಕೆ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಈಗ ಪ್ರತಿ ತಾಲ್ಲೂಕಿನಲ್ಲಿ 3 ಹೆಕ್ಟೇರ್ ಸಾವಯವ ಕೃಷಿ ಜಮೀನಿದ್ದು ಒಟ್ಟಾರೆ 70,000 ಹೆಕ್ಟೇರ್ನಲ್ಲಿ ಸಾವಯವ ಕೃಷಿಯನ್ನು ಜರುಗಿಸಲಾಗುತ್ತಿದೆ. ರಾಜ್ಯಾದ್ಯಂತ 40 ಔಟ್ಲೆಟ್ಗಳನ್ನು ತೆರೆದಿದ್ದು ಅಲ್ಲಿ ರೈತರು ನೇರವಾಗಿ ತಮ್ಮ ಸಾವಯವ ಕೃಷಿ ಉತ್ಪನ್ನಗಳ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಅವರು ಮಾಹಿತಿ ನೀಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications