ಧಾರವಾಡ; ಎಂಎಸ್ಪಿ ಅಡಿ ಭತ್ತ, ಬಿಳಿಜೋಳ ಖರೀದಿ ಆರಂಭ
ಧಾರವಾಡ, ಡಿಸೆಂಬರ್ 21; ಧಾರವಾಡ ಜಿಲ್ಲೆಯ ರೈತರಿಗೆ ಜಿಲ್ಲಾಡಳಿತ ಸಿಹಿಸುದ್ದಿ ನೀಡಿದೆ. ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿಜೋಳ ಖರೀದಿ ಆರಂಭಿಸಲಾಗಿದೆ.
2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಸದರಿ ತಾಲ್ಲೂಕುಗಳ ಸುತ್ತಮುತ್ತಲೂ ಭತ್ತ ಮತ್ತು ಬಿಳಿಜೋಳ ಬೆಳೆದ ರೈತರು ತಮ್ಮ ವ್ಯಾಪ್ತಿಗೆ ಬರುವ ಖರೀದಿ ಕೇಂದ್ರಗಳಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಕರೆ ನೀಡಿದೆ.
ಕೃಷಿ ಇಲಾಖೆಯಿಂದ ನೀಡಿದ FRUITS ನೋಂದಣಿ ಸಂಖ್ಯೆಯನ್ನು ಒದಗಿಸಿ ರೈತರು ನೋಂದಣಿ ಆಗಬೇಕು. ರೈತರು ಬೆಳೆದಿರುವ ಬೆಳೆಯ ಮಾಹಿತಿ ಪ್ರೂಟ್ಸ್ ದತ್ತಾಂಶದಲ್ಲಿ ಲಭ್ಯವಿಲ್ಲದಿದ್ದರೆ ರೈತರು ತಕ್ಷಣ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಬೆಳೆ ಮಾಹಿತಿಯನ್ನು ದತ್ತಾಂಶದಲ್ಲಿ ಸೇರ್ಪಡೆ ಮಾಡಿ, ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ನೋಂದಾಯಿಸತಕ್ಕದ್ಧು.

ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಲ್ ಹಾಗೂ ಗರಿಷ್ಟ 40 ಕ್ವಿಂಟಲ್ ಮೀರದಂತೆ ಭತ್ತ ಹಾಗೂ ಬಿಳಿಜೋಳ 10 ಕ್ವಿಂಟಲ್ ಕನಿಷ್ಟ & 20 ಕ್ವಿಂಟಲ್ ಗರಿಷ್ಟ ಖರೀದಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.
ರೈತರು ತಮ್ಮ ಪ್ರೂಟ್ಸ್ ಗುರುತಿನ ಸಂಖ್ಯೆಯೊಂದಿಗೆ ನೋಂದಾಯಿಸಿದ ನಂತರ ತಾವು ಬೆಳೆದ ಭತ್ತದ ಮಾದರಿಯೊಂದಿಗೆ ಬಂದು ತಾವು ಖರೀದಿಗೆ ನೀಡಬಹುದಾದ ದಿನಾಂಕದ ವಿವರಗಳನ್ನು ಖರೀದಿ ಕೇಂದ್ರಗಳಲ್ಲಿ ಪಡೆಯಬೇಕು. ನಿಗದಿಪಡಿಸುವ ದಿನಾಂಕದಂದು ರೈತರ ಭತ್ತವನ್ನು ಖರೀದಿ ಕೇಂದ್ರಕ್ಕೆ ನೀಡಿ, ಖರೀದಿಯ ಪ್ರಮಾಣದ ಸ್ವೀಕೃತಿಯನ್ನು ಪಡೆದುಕೊಳ್ಳಬೇಕು.
ಭತ್ತದ ಮಾದರಿಯನ್ನು ನೇಮಕ ಮಾಡುವ ಗುಣಮಟ್ಟ ಪರಿಶೀಲನಾ ಅಧಿಕಾರಿಯ ಮೂಲಕ ಗುಣಮಟ್ಟ ದೃಢೀಕರಣ ಪಡೆದ ನಂತರವೇ ಭತ್ತವನ್ನು ಖರೀದಿಸಿ ಸಂಗ್ರಹಣೆ ಮಾಡಲಾಗುವುದು. ಕೇಂದ್ರ ಸರ್ಕಾರ ನಿಗದಿಪಡಿಸಿ ಮಾನದಂಡಗಳನ್ವಯ ಎಫ್ಎಕ್ಯೂ ಗುಣಮಟ್ಟವನ್ನು ಗ್ರೇಡರ್ಗಳೊಂದಿಗೆ ದೃಢೀಕರಿಸಬೇಕು.

ಬ್ಯಾಂಕ್ ಖಾತೆಗೆ ಜಮೆ; ಖರೀದಿ ಏಜೆನ್ಸಿಯಾದ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಳ ರೈತರಿಗೆ ಖರೀದಿ ಬಾಬ್ತು ಬಿಲ್ಲುಗಳನ್ನು ಸಿದ್ದಪಡಿಸುತ್ತಾರೆ ಮತ್ತು ಖರೀದಿ ಬಾಬ್ತು ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಸಂದಾಯ ಮಾಡಲು ಕ್ರಮವನ್ನು ಕೈಗೊಳ್ಳುತ್ತಾರೆ.
ರೈತರಿಂದ ಖರೀದಿ ಮಾಡುವ ಭತ್ತ ಪ್ರಮುಖ ಅಂಶಗಳ ಗುಣಮಟ್ಟದ ಮಿತಿಯಲ್ಲಿರುವ ಭತ್ತವನ್ನು ಹಾಗೂ ಎಫ್ಎಕ್ಯೂ ಗುಣಮಟ್ಟದ ಬಿಳಿಜೋಳ ಮಾತ್ರ ಖರೀದಿಸಲಾಗುವುದು. ರೈತರು ಮಾರಾಟ ಮಾಡುವ ಪದಾರ್ಥದ ಗುಣಮಟ್ಟವು ಈ ಮಿತಿಯಲ್ಲಿಲ್ಲದಿದ್ದಲ್ಲಿ ಅಂತಹ ಪ್ರಮಾಣವನ್ನು ಖರೀದಿ ಕೇಂದ್ರಗಳಲ್ಲಿ ತಿರಸ್ಕರಿಸಲಾಗುತ್ತದೆ.
ರೈತರಿಂದ ಖರೀದಿ ಕೇಂದ್ರಗಳಿಗೆ ತರುವ ಭತ್ತ, ಬಿಳಿಜೋಳದ ಚೀಲಗಳನ್ನು ಖರೀದಿ ಕೇಂದ್ರಗಳಲ್ಲಿ ತೆರೆದು, ತಂದಿರುವ ಎಲ್ಲಾ ಪ್ರಮಾಣವನ್ನು ಒಂದಾಗಿ ಪರಿಶೀಲಿಸುವುದರಿಂದಾಗಿ ರೈತರು ತಾವು ತರುವ ಪದಾರ್ಥಗಳು ಒಂದೇ ತರಹದ್ದಾಗಿರಬೇಕು. ಒಂದು ವೇಳೆ ಗುಣಮಟ್ಟದಲ್ಲಿ ಯಾವುದೇ ನ್ಯೂನತೆ ಕಂಡುಬಂದಲ್ಲಿ ಸಂಪೂರ್ಣ ಪ್ರಮಾಣವನ್ನು ತಿರಸ್ಕರಿಸಲಾಗುತ್ತದೆ.
ಎಷ್ಟು ಬೆಂಬಲ ಬೆಲೆ; ಸರ್ಕಾರವು ಘೋಷಿಸಿರುವ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಭತ್ತ ಸಾಮಾನ್ಯ 2040, ಭತ್ತ ಗ್ರೇಡ್ 'ಎ' 2060, ಬಿಳಿಜೋಳ ಹೈಬ್ರಿಡ್ 2970, ಬಿಳಿಜೋಳ ಮಾಲ್ದಂಡಿ 2990 ರೂ. ಇರುತ್ತದೆ.
ರೈತರು ತಾವು ಬೆಳೆದ ಭತ್ತ ಮತ್ತು ಬಿಳಿಜೋಳವನ್ನು ದಿನಾಂಕ 01/01/2023 ರಿಂದ 31/03/2023ರ ಒಳಗಾಗಿ ಈಗಾಗಲೇ ಸ್ಥಾಪಿಸಲಾದ ಖರೀದಿ ಕೇಂದ್ರಗಳಿಗೆ ಒದಗಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಮನವಿ ಮಾಡಲಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications