ಧಾರವಾಡ; ಎಂಎಸ್ಪಿ ಅಡಿ ಭತ್ತ, ಬಿಳಿಜೋಳ ಖರೀದಿ ಆರಂಭ
ಧಾರವಾಡ, ಡಿಸೆಂಬರ್ 21; ಧಾರವಾಡ ಜಿಲ್ಲೆಯ ರೈತರಿಗೆ ಜಿಲ್ಲಾಡಳಿತ ಸಿಹಿಸುದ್ದಿ ನೀಡಿದೆ. ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿಜೋಳ ಖರೀದಿ ಆರಂಭಿಸಲಾಗಿದೆ.
2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಸದರಿ ತಾಲ್ಲೂಕುಗಳ ಸುತ್ತಮುತ್ತಲೂ ಭತ್ತ ಮತ್ತು ಬಿಳಿಜೋಳ ಬೆಳೆದ ರೈತರು ತಮ್ಮ ವ್ಯಾಪ್ತಿಗೆ ಬರುವ ಖರೀದಿ ಕೇಂದ್ರಗಳಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಕರೆ ನೀಡಿದೆ.
ಕೃಷಿ ಇಲಾಖೆಯಿಂದ ನೀಡಿದ FRUITS ನೋಂದಣಿ ಸಂಖ್ಯೆಯನ್ನು ಒದಗಿಸಿ ರೈತರು ನೋಂದಣಿ ಆಗಬೇಕು. ರೈತರು ಬೆಳೆದಿರುವ ಬೆಳೆಯ ಮಾಹಿತಿ ಪ್ರೂಟ್ಸ್ ದತ್ತಾಂಶದಲ್ಲಿ ಲಭ್ಯವಿಲ್ಲದಿದ್ದರೆ ರೈತರು ತಕ್ಷಣ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಬೆಳೆ ಮಾಹಿತಿಯನ್ನು ದತ್ತಾಂಶದಲ್ಲಿ ಸೇರ್ಪಡೆ ಮಾಡಿ, ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ನೋಂದಾಯಿಸತಕ್ಕದ್ಧು.

ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಲ್ ಹಾಗೂ ಗರಿಷ್ಟ 40 ಕ್ವಿಂಟಲ್ ಮೀರದಂತೆ ಭತ್ತ ಹಾಗೂ ಬಿಳಿಜೋಳ 10 ಕ್ವಿಂಟಲ್ ಕನಿಷ್ಟ & 20 ಕ್ವಿಂಟಲ್ ಗರಿಷ್ಟ ಖರೀದಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.
ರೈತರು ತಮ್ಮ ಪ್ರೂಟ್ಸ್ ಗುರುತಿನ ಸಂಖ್ಯೆಯೊಂದಿಗೆ ನೋಂದಾಯಿಸಿದ ನಂತರ ತಾವು ಬೆಳೆದ ಭತ್ತದ ಮಾದರಿಯೊಂದಿಗೆ ಬಂದು ತಾವು ಖರೀದಿಗೆ ನೀಡಬಹುದಾದ ದಿನಾಂಕದ ವಿವರಗಳನ್ನು ಖರೀದಿ ಕೇಂದ್ರಗಳಲ್ಲಿ ಪಡೆಯಬೇಕು. ನಿಗದಿಪಡಿಸುವ ದಿನಾಂಕದಂದು ರೈತರ ಭತ್ತವನ್ನು ಖರೀದಿ ಕೇಂದ್ರಕ್ಕೆ ನೀಡಿ, ಖರೀದಿಯ ಪ್ರಮಾಣದ ಸ್ವೀಕೃತಿಯನ್ನು ಪಡೆದುಕೊಳ್ಳಬೇಕು.
ಭತ್ತದ ಮಾದರಿಯನ್ನು ನೇಮಕ ಮಾಡುವ ಗುಣಮಟ್ಟ ಪರಿಶೀಲನಾ ಅಧಿಕಾರಿಯ ಮೂಲಕ ಗುಣಮಟ್ಟ ದೃಢೀಕರಣ ಪಡೆದ ನಂತರವೇ ಭತ್ತವನ್ನು ಖರೀದಿಸಿ ಸಂಗ್ರಹಣೆ ಮಾಡಲಾಗುವುದು. ಕೇಂದ್ರ ಸರ್ಕಾರ ನಿಗದಿಪಡಿಸಿ ಮಾನದಂಡಗಳನ್ವಯ ಎಫ್ಎಕ್ಯೂ ಗುಣಮಟ್ಟವನ್ನು ಗ್ರೇಡರ್ಗಳೊಂದಿಗೆ ದೃಢೀಕರಿಸಬೇಕು.

ಬ್ಯಾಂಕ್ ಖಾತೆಗೆ ಜಮೆ; ಖರೀದಿ ಏಜೆನ್ಸಿಯಾದ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಳ ರೈತರಿಗೆ ಖರೀದಿ ಬಾಬ್ತು ಬಿಲ್ಲುಗಳನ್ನು ಸಿದ್ದಪಡಿಸುತ್ತಾರೆ ಮತ್ತು ಖರೀದಿ ಬಾಬ್ತು ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಸಂದಾಯ ಮಾಡಲು ಕ್ರಮವನ್ನು ಕೈಗೊಳ್ಳುತ್ತಾರೆ.
ರೈತರಿಂದ ಖರೀದಿ ಮಾಡುವ ಭತ್ತ ಪ್ರಮುಖ ಅಂಶಗಳ ಗುಣಮಟ್ಟದ ಮಿತಿಯಲ್ಲಿರುವ ಭತ್ತವನ್ನು ಹಾಗೂ ಎಫ್ಎಕ್ಯೂ ಗುಣಮಟ್ಟದ ಬಿಳಿಜೋಳ ಮಾತ್ರ ಖರೀದಿಸಲಾಗುವುದು. ರೈತರು ಮಾರಾಟ ಮಾಡುವ ಪದಾರ್ಥದ ಗುಣಮಟ್ಟವು ಈ ಮಿತಿಯಲ್ಲಿಲ್ಲದಿದ್ದಲ್ಲಿ ಅಂತಹ ಪ್ರಮಾಣವನ್ನು ಖರೀದಿ ಕೇಂದ್ರಗಳಲ್ಲಿ ತಿರಸ್ಕರಿಸಲಾಗುತ್ತದೆ.
ರೈತರಿಂದ ಖರೀದಿ ಕೇಂದ್ರಗಳಿಗೆ ತರುವ ಭತ್ತ, ಬಿಳಿಜೋಳದ ಚೀಲಗಳನ್ನು ಖರೀದಿ ಕೇಂದ್ರಗಳಲ್ಲಿ ತೆರೆದು, ತಂದಿರುವ ಎಲ್ಲಾ ಪ್ರಮಾಣವನ್ನು ಒಂದಾಗಿ ಪರಿಶೀಲಿಸುವುದರಿಂದಾಗಿ ರೈತರು ತಾವು ತರುವ ಪದಾರ್ಥಗಳು ಒಂದೇ ತರಹದ್ದಾಗಿರಬೇಕು. ಒಂದು ವೇಳೆ ಗುಣಮಟ್ಟದಲ್ಲಿ ಯಾವುದೇ ನ್ಯೂನತೆ ಕಂಡುಬಂದಲ್ಲಿ ಸಂಪೂರ್ಣ ಪ್ರಮಾಣವನ್ನು ತಿರಸ್ಕರಿಸಲಾಗುತ್ತದೆ.
ಎಷ್ಟು ಬೆಂಬಲ ಬೆಲೆ; ಸರ್ಕಾರವು ಘೋಷಿಸಿರುವ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಭತ್ತ ಸಾಮಾನ್ಯ 2040, ಭತ್ತ ಗ್ರೇಡ್ 'ಎ' 2060, ಬಿಳಿಜೋಳ ಹೈಬ್ರಿಡ್ 2970, ಬಿಳಿಜೋಳ ಮಾಲ್ದಂಡಿ 2990 ರೂ. ಇರುತ್ತದೆ.
ರೈತರು ತಾವು ಬೆಳೆದ ಭತ್ತ ಮತ್ತು ಬಿಳಿಜೋಳವನ್ನು ದಿನಾಂಕ 01/01/2023 ರಿಂದ 31/03/2023ರ ಒಳಗಾಗಿ ಈಗಾಗಲೇ ಸ್ಥಾಪಿಸಲಾದ ಖರೀದಿ ಕೇಂದ್ರಗಳಿಗೆ ಒದಗಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಮನವಿ ಮಾಡಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications