ಕೊಪ್ಪಳ ರೈತನ ಸಾಧನೆ; ಪಪ್ಪಾಯ ಬೆಳೆದು ಒಳ್ಳೆಯ ಆದಾಯ!
ಕೊಪ್ಪಳ, ನವೆಂಬರ್ 09: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೊಪ್ಪಳ ಜಿಲ್ಲೆಯ ರೈತರೊಬ್ಬರು ಪಪ್ಪಾಯ ಬೆಳೆದು ಆರ್ಥಿಕ ಅಭಿವೃದ್ಧಿ ಹೊಂದಿದ್ದಾರೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಸೂಕ್ತ ಸಮಯದಲ್ಲಿ ಸಲಹೆಗಳನ್ನು ನೀಡಿ ಸಹಕಾರ ಕೊಟ್ಟಿದ್ದಾರೆ.
ಕೊಪ್ಪಳ ತಾಲೂಕಿನ ಕಾಮನೂರು ಗ್ರಾಮದ ರೈತ ನೀಲಪ್ಪ ಕಾಮನೂರು ಪಪ್ಪಾಯ ಬೆಳೆದು ಆರ್ಥಿಕ ಅಭಿವೃದ್ಧಿ ಹೊಂದಿ ಇತರ ರೈತರಿಗೆ ಮಾದರಿಯಾಗಿದ್ದಾರೆ. ಮೊದಲು ಇವರು ಮಳೆಯಾಶ್ರಿತ ಕೃಷಿ ಬೆಳೆಗಳಾದ ಸಜ್ಜೆ, ಮೆಕ್ಕೆಜೋಳ ಬೆಳೆಯುತ್ತಿದ್ದರು.
ಹಲವು ರೈತರು ತೋಟಗಾರಿಕೆ ಇಲಾಖೆಯ ಸಲಹೆಯಂತೆ ಪಪ್ಪಾಯ ಬೆಳೆದು ಉತ್ತಮ ಆದಾಯ ಪಡೆಯುತ್ತಿರುವುದನ್ನು ಕಂಡು ನೀಲಪ್ಪ ಸಹ ಪಪ್ಪಾಯ ಬೆಳೆಯಲು 2019-20ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿದ್ದರು.

ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ನಜೀರ ಅಹ್ಮದ್ ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ತಮ್ಮ 4 ಎಕರೆ ಜಮೀನಿನಲ್ಲಿ ಪಪ್ಪಾಯ ಬೆಳೆದರು.
ನೀಲಪ್ಪ ಅವರು 2019ರ ಜುಲೈ ತಿಂಗಳಲ್ಲಿ ಬೆಂಗಳೂರಿನಿಂದ ಪಪ್ಪಾಯ ಸಸಿ ತರಿಸಿ ಹನಿ ನೀರಾವರಿ ಅಳವಡಿಸಿ 7x5 ಅಡಿ ಅಂತರದಲ್ಲಿ ಸುಮಾರು 5,000 ಸಸಿಗಳನ್ನು ನಾಟಿ ಮಾಡಿದ್ದರು. ನಾಟಿ ಮಾಡುವ ಸಮಯದಲ್ಲಿ ತಜ್ಞರ ಸಲಹೆಯಂತೆ ಕೊಟ್ಟಿಗೆ ಗೊಬ್ಬರ, ಜೈವಿಕ ಗೊಬ್ಬರಗಳನ್ನು ಬೆರೆಸಿ 1.1/2 ಘನ ಅಡಿ ಗುಂಡಿಗಳನ್ನು ಮಾಡಿ ನಾಟಿ ಮಾಡಿದರು.
ಅಧಿಕಾರಿಗಳ ಸಲಹೆಯಂತೆ ಕಾಲಕಾಲಕ್ಕೆ ಪೋಷಕಾಂಶಗಳು ಮತ್ತು ನೀರಿನ ನಿರ್ವಹಣೆ ಮಾಡಿದರು. ಮಾರ್ಚ್ ತಿಂಗಳಿನಿಂದಲೇ ಉತ್ತಮ ಫಸಲು ಆರಂಭವಾಗಿದ್ದು, ಕಳೆದ ರಂಜಾನ್ ಹಬ್ಬದಲ್ಲಿ ಉತ್ತಮ ಬೆಲೆ ಸಿಕ್ಕಿದೆ.
"ಭೂಮಿ ಸಿದ್ಧತೆ, ಗೊಬ್ಬರ, ಆಳುಗಳ ಖರ್ಚು, ಸಸ್ಯ ಸಂರಕ್ಷಣೆಗೆ ಸುಮಾರು 3 ಲಕ್ಷ ಖರ್ಚಾಗಿದೆ, ಇದುವರೆಗೂ ನನಗೆ ಸುಮಾರು 10 ಲಕ್ಷ ಆದಾಯ ಬಂದಿದೆ. ಇನ್ನೂ ಫಸಲು ಬರುತ್ತಾ ಇದ್ದು, ದೀಪಾವಳಿ ಹಬ್ಬ ಮುಗಿಯುವವರೆಗೂ ಇನ್ನೂ ರೂ. 5 ರಿಂದ 6 ಲಕ್ಷ ಆದಾಯ ಬರುವ ನಿರೀಕ್ಷೆಯಲ್ಲಿದ್ದೇನೆ" ಎಂದು ರೈತ ನೀಲಪ್ಪ ಹೇಳಿದರು.
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ನೀಲಪ್ಪರನ್ನು ಆಯ್ಕೆ ಮಾಡಿ ಪಪ್ಪಾಯ ಬೆಳೆಯ ತಾಂತ್ರಿಕತೆ ಬಗ್ಗೆ ಸಲಹೆಯನ್ನು ಇಲಾಖೆ ನೀಡಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಒಗ್ಗೂಡಿಸಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇ.90ರಷ್ಟು ಸಹಾಯಧನ ನೀಡಲಾಗಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications