ಪಿಎಂ ಕುಸುಮ ಯೋಜನೆ ಫಲಾನುಭವಿಗಳಾಗಲು ಇಲ್ಲಿದೆ ಮಾಹಿತಿ..
ಬೆಂಗಳೂರು ಜೂ. 17: ಕೃಷಿ ವಲಯದ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ 'ಪಿಎಂ ಕುಸುಮ ಯೋಜನೆ' ಅಡಿಯಲ್ಲಿ ಜಮೀನಿನಲ್ಲಿ ಸೋಲಾರ್ ಪಂಪ್ ಅಳವಡಿಸುವ ರೈತರಿಗೆ ಶೇ. 90ರಷ್ಟು ಸಹಾಯಧನ ದೊರೆಯಲಿದೆ.
ರೈತರ ಆದಾಯ ಹೆಚ್ಚಿಸಲು ಹಾಗೂ ವ್ಯವಸಾಯದ ವೆಚ್ಚ ತಗ್ಗಿಸಲು ಸರ್ಕಾರಗಳು ಅನೇಕ ಯೋಜನೆ ರೂಪಿಸಿವೆ. ಇದರಲ್ಲಿ ರೈತರಿಗೆ ವಿದ್ಯುತ್ ಮತ್ತು ನೀರಿನ ಪೂರೈಕೆ ಒದಗಿಸುವ ಉದ್ದೇಶದಿಂದ 2019ರಲ್ಲಿ ಜಾರಿಗೆ ಬಂದ 'ಪಿಎಂ ಕುಸುಮ ಯೋಜನೆ'ಯು ಒಂದಾಗಿದೆ.
ಈ ಯೋಜನೆಯಡಿ ಕೃಷಿಕರು ಸೋಲಾರ್ ಪಂಪ್ ಅಳವಡಿಸಿಕೊಂಡು ವಿದ್ಯುತ್ ಮತ್ತು ಕಾರ್ಮಿಕರಿಗೆ ತಗುಲುವ ವೆಚ್ಚವನ್ನು ಕಡಿಮೆ ಮಾಡಿಕೊಳ್ಳಬಹುದು. ಜತೆಗೆ ಕಡಿಮೆ ಖರ್ಚಿನಲ್ಲಿ ನೀರಾವರಿ ಕೃಷಿ ಮಾಡಬಹುದಾಗಿದೆ. ಸೋಲಾರ್ ಪಂಪ್ ಅಳವಡಿಕೆಗೆ ಸರ್ಕಾರ ಶೇ. 90ರಷ್ಟು ಆರ್ಥಿಕ ನೆರವು ನೀಡುವುದಾಗಿ ತಿಳಿಸಿದೆ.

ಅರ್ಜಿ ಸಲ್ಲಿಕೆಗೆ ಬೇಕಾದ ಅರ್ಹತೆಗಳೇನು?
ಸಣ್ಣ ಹಾಗೂ ಬೃಹತ್ ಮಟ್ಟದಲ್ಲಿ ವ್ಯವಸಾಯ ಮಾಡುವ ರೈತರಿಗೆ ಆದಾಯ ತರುವ ನಿಟ್ಟಿನಲ್ಲಿ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಈ ಎರಡು ವರ್ಗದ ರೈತರು ಸಹಾಯಧನ ಪಡೆಯಲು ಕೆಲವು ಮಾನದಂಡಗಳನ್ನು ಸೂಚಿಸಲಾಗಿದೆ.
ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು. ಅರ್ಜಿ ಸಲ್ಲಿಕೆಗೆ ಬೇಕಾದ ಎಲ್ ಅಗತ್ಯ ದಾಖಲೆಗಳನ್ನು ಹೊಂದಿರಬೇಕಿದ್ದು, ಇಂತವರು ಯೋಜನೆಯ ಅರ್ಜಿ ಹಾಕಬಹುದು. ಪುರಸ್ಕೃತ ಅರ್ಜಿದಾರರಿಗೆ ಸರ್ಕಾರ 0.5mw ನಿಂದ 2mw ಸಾಮರ್ಥ್ಯದ ವಿದ್ಯುತ್ ಸ್ಥಾವರ ಖರೀದಿಸಲು ಸರ್ಕಾರ ನೆರವು ಒದಗಿಸುತ್ತದೆ.
ರೈತರ ತಮ್ಮ ಕೃಷಿ ಅಗತ್ಯತೆಗಳು ಎಷ್ಟಿದೆ ಎಂಬುದು ಹಾಗೂ ವಿತರಣಾ ನಿಗಮ ತಿಳಿಸಿದ ಸಾಮರ್ಥ್ಯದ ಆಧಾರದಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಜತೆಗೆ ರೈತರು ತಮ್ಮ ಆಧಾರ್, ಪಡಿತರ ಚೀಟಿ ನಕಲು ಪ್ರತಿ ಸಹಿತ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

'ಪಿಎಂ ಕುಸುಮ ಯೋಜನೆ' ಲಾಭಗಳೇನು:
* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆಯಡಿ ಸೋಲಾರ್ ಪಂಪ್ ಸ್ಥಾಪಿಸಲು ರೈತರಿಗೆ 30-30% ದರದಲ್ಲಿ ಸಹಾಯಧನ ನೀಡುತ್ತವೆ.
* ಸರ್ಕಾರಗಳು ನೀಡುವ ಸಹಾಯಧನ ಪೈಕಿ 40%ರಷ್ಟು ಹಣದಲ್ಲಿ ಸೋಲಾರ್ ಪವರ್ ಪಂಪ್ ನಿರ್ಮಿಸಿಕೊಳ್ಳಬಹುದು.
* ರೈತರಿಗೆ ಬಾಕಿ ಮೊತ್ತ ಭರಿಸಲು ಸಾಧ್ಯವಾಗದಿದ್ದರೆ ಬ್ಯಾಂಕ್ ಮತ್ತಿತರ ಹಣಕಾಸು ಸಂಸ್ಥೆಗಳೂ ಮತ್ತು ನಬಾರ್ಡನಿಂದ 30 % ಸಾಲ ಪಡೆಯಲು ಅವಕಾಶ ವಿದೆ. ಬಾಕಿ 10%ರಷ್ಟು ಹಣ ರೈತನೆ ಪಾವತಿಸಬೇಕಾಗುತ್ತದೆ.
* ನೀರಾವರಿಗಾಗಿ ಖರ್ಚಾಗುತ್ತಿದ್ದ ವಿದ್ಯುತ್ ಉಳಿತಾಯವಾಗಲಿದೆ.
* ಒಮ್ಮೆ ಸೋಲಾರ್ ಪವರ್ ಪಂಪ್ ಅಳವಡಿಸಿಕೊಂಡರೆ ಸುಮಾರು ಭವಿಷ್ಯ 25ವರ್ಷ ನಿಶ್ಚಿಂತೆಯಿಂದ ರೈತರು ಕೃಷಿಯಲ್ಲಿ ತೊಡಗಿಕೊಳ್ಳಬಹುದು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications