ಬೆಂಗಳೂರಿನಲ್ಲಿ ಜ.3 ರಂದು ಭಾರತೀಯ ವಿಜ್ಞಾನ ಕಾಂಗ್ರೆಸ್ ಗೆ ಪ್ರಧಾನಿ ಚಾಲನೆ.!
ವಿಜ್ಞಾನ, ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಯಶಸ್ಸು ಸಾಧಿಸುವ ಉದ್ದೇಶ ಹೊಂದಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಜನೆವರಿ 03 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯಯವರು ಚಾಲನೆ ನೀಡಲಿದ್ದಾರೆ.
ಬೆಂಗಳೂರು, ಡಿಸೆಂಬರ್ 19: ವಿಜ್ಞಾನ, ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಯಶಸ್ಸು ಸಾಧಿಸುವ ಉದ್ದೇಶ ಹೊಂದಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಜನೆವರಿ 03 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯಯವರು ಚಾಲನೆ ನೀಡಲಿದ್ದಾರೆ.
ಭಾರತೀಯ ವಿಜ್ಞಾನನ ಕಾಂಗ್ರೆಸ್ ಸಮ್ಮೇಳನ ಉದ್ಘಾಟನೆಗೊಳ್ಳುವ ದಿನವೇ ನಗರದಲ್ಲಿ ರೈತರ ಸಮಾವೇಶ ಕೂಡಾ ನಡಯಲಿದ್ದು, ಇದರಲ್ಲಿಯೂ ಪ್ರಧಾನಿ ಮೋದಿ ಪಾಲ್ಗೊಂಡು ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಜನೆವರಿ 03 ರಂದು ವಿಜ್ಞಾನ ಸಮ್ಮೇಳನ ಹಾಗೂ ರೈತ ಸಮಾವೇಶ ಹಿನ್ನೆಲೆಯಲ್ಲಿ ಜನೆವರಿ 02 ರಂದೇ ಪ್ರಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತುಮಕೂರು ನಗರದಲ್ಲಿ ರೈತ ಸಮಾವೇಶ ನಡೆಯಲಿದ್ದು, ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ ಕುರಿತು ಇನ್ನು ಚರ್ಚೆ ನಡೆಯುತ್ತಿದೆ. ಂತಿಮ ಮಾಹಿತಿಗಾಗಿ ಪ್ರಧಾನಮಂತ್ರಿ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದರು.
ರೈತ ಸಮಾವೇಶದಲ್ಲಿ ದೊಡ್ಡ ಮಟ್ಟದಲ್ಲಿ ರೈತರು ಪಾಲ್ಗೊಳ್ಳಲಿದ್ದಾರೆ, ಜನೆವರಿ 03 ರಂದು 5 ದಿನಗಳ ಕಾಲ 107 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಗೆ ಚಾಲನೆ ನೀಡಲಿದ್ದಾರೆ ಎಂದು ಸಿಎಂ ಹೇಳಿದರು.

ಈ ಬಾರಿಯ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಕೃಷಿ ಹಾಗೂ ವನ ವಿಜ್ಞಾನ, ಜಾನುವಾರು, ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನ, ಮಾನವ ಶಾಸ್ತ್ರ, ನಡವಳಿಕೆ ವಿಜ್ಞಾನ, ರಸಾಯನಿಕ ವಿಜ್ಞಾನ, ಭೂ ರಚನಾ ವ್ಯೆವಸ್ಥೆ, ಇಂಜನಿಯರಿಂಗ್, ಪರಿಸರ ವಿಜ್ಞಾನ, ಮಾಹಿತಿ ಸಂವಹನ, ವಿಜ್ಞಾನ-ತಂತ್ರಜ್ಞಾನ, ಗಣಿತ, ವೈದ್ಯಕೀಯ ವಿಜ್ಞಾನ, ಭೌತಿಕ ವಿಜ್ಞಾನ, ಸಸ್ಯ ಶಾಸ್ತ್ರಗಳು ಮುಖ್ಯ ವಿಷಯಗಳಾಗಿರಲಿವೆ ಎಂದು ತಿಳಿದು ಬಂದಿದೆ.
ಸಮ್ಮೇಳನದಲ್ಲಿ ವಿದೇಶಿ ಸಂಸ್ಥೆಗಳಿಂದ ನೊಬೆಲ್ ಪ್ರಶಸ್ತಿ ವಿಜೇತರು, ವಿದ್ವಾಂಸರು ಹಾಗೂ ಪ್ರಧಾನ ಉಪನ್ಯಾಸಕರು, ಕಾರ್ಯಕ್ರಮ ರಚಿಸುವವರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications