ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ನೋಂದಣಿ ಆರಂಭ
ಬೆಂಗಳೂರು, ಜೂನ್ 18 : 2020ನೇ ಸಾಲಿನ ಮುಂಗಾರು ಹಂಗಾಮು ಆರಂಭಗೊಂಡಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆವಿಮೆ ನೋಂದಣಿಯೂ ಪ್ರಾರಂಭವಾಗಿದೆ.
Recommended Video
ಮುಂಗಾರು ಹಂಗಾಮಿನಲ್ಲಿ ಹತ್ತಿ (ನೀರಾವರಿ) & ಹೆಸರು (ಮಳೆಯಾಶ್ರಿತ) ಬೆಳೆಗಳ ವಿಮೆಗಾಗಿ ನೋಂದಾವಣೆ ಮಾಡಲು ಜುಲೈ 15 ಕೊನೆಯ ದಿನವಾಗಿದೆ. ಭತ್ತ (ಮಳೆಯಾಶ್ರಿತ/ನೀರಾವರಿ), ಜೋಳ (ಮಳೆಯಾಶ್ರಿತ/ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ / ನೀರಾವರಿ), ಸಜ್ಜೆ (ಮಳೆಯಾಶ್ರಿತ / ನೀರಾವರಿ)ಗೆ ನೋಂದಣಿ ಮಾಡಬಹುದು.
ಕಲ್ಲು ಭೂಮಿಯಲ್ಲಿ ಅಂಜದೆ ಅಂಜೂರ ಬೆಳೆದ ಕೊಪ್ಪಳ ರೈತ!
ಸೂರ್ಯಕಾಂತಿ (ಮಳೆಯಾಶ್ರಿತ/ನೀರಾವರಿ), ಅಲಸಂದಿ (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ/ನೀರಾವರಿ), ಹುರಳಿ (ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ನಲೆಗಡಲೆ (ಶೇಂಗಾ) (ಮಳೆಯಾಶ್ರಿತ/ನೀರಾವರಿ), ಹತ್ತಿ (ಮಳೆಯಾಶ್ರಿತ), ಈರುಳ್ಳಿ (ನೀರಾವರಿ/ ಮಳೆಯಾಶ್ರಿತ), ಟೊಮೆಟೊ ಬೆಳೆಗಳ ವಿಮೆಗಾಗಿ ನೋಂದಾಯಿಸಲು ಜುಲೈ 31 ಕೊನೆ ದಿನ.
ಬಿಟಿ ಬಗ್ಗೆ ವಕಾಲತ್ತು ವಹಿಸಿರುವ ರೈತ ಮುಖಂಡರ ಆಸ್ತಿ ಲೆಕ್ಕ ಕೇಳಿ!
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಎಲ್ಲಾ ವರ್ಗದ ರೈತರು ಸಂಬಂಧಿಸಿದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಅಥವಾ ಬ್ಯಾಂಕ್ ಶಾಖೆಯಲ್ಲಿ ಬೆಳೆ ವಿಮೆ ಪ್ರೀಮಿಯಮ್ ತುಂಬಿ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.
ಗುಂಡ್ಲುಪೇಟೆಯಲ್ಲಿ ನಷ್ಟಕ್ಕೆ ಕಂಗೆಟ್ಟು ಈರುಳ್ಳಿ ಹೊಲವನ್ನು ಟ್ರ್ಯಾಕ್ಟರ್ ನಿಂದ ಉಳುಮೆ ಮಾಡಿದ ರೈತ
ಹೆಚ್ಚಿನ ವಿವರಗಳಿಗಾಗಿ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಾಮಾನ್ಯ ಸೇವಾ ಕೇಂದ್ರ, ಸಹಕಾರಿ ಇಲಾಖೆ, ಸ್ಥಳೀಯ ವಾಣಿಜ್ಯ, ಗ್ರಾಮೀಣ ಬ್ಯಾಂಕ್ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.