ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ; ಬೆಳೆಗಳ ವಿವರ

|
Google Oneindia Kannada News

ಶಿವಮೊಗ್ಗ, ನವೆಂಬರ್ 27 : ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಚರ್ ಇನ್‍ಶ್ಯೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ. ಸಂಸ್ಥೆ ಮೂಲಕ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ.

2020-21 ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು (PMFBY) ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ. ವಿವಿಧ ಬೆಳೆಗಳನ್ನು ಯೋಜನೆ ವ್ಯಾಪ್ತಿಗೆ ಸೇರಿಸಲಾಗಿದೆ.

ರೇಷ್ಮೆ ಸಚಿವರ ಕ್ಷೇತ್ರದಲ್ಲಿಯೇ ನೇಪಥ್ಯಕ್ಕೆ ಸರಿದ ರೇಷ್ಮೆ ಕೃಷಿ...ರೇಷ್ಮೆ ಸಚಿವರ ಕ್ಷೇತ್ರದಲ್ಲಿಯೇ ನೇಪಥ್ಯಕ್ಕೆ ಸರಿದ ರೇಷ್ಮೆ ಕೃಷಿ...

ಯೋಜನೆಯಡಿ ಬೆಳೆ ವಿಮೆಗಾಗಿ ನೋಂದಣಿ ಮಾಡಿಸಲು ಇರುವ ಅಂತಿಮ ದಿನಾಂಕದ ಒಳಗಾಗಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೂ ನೋಂದಾಯಿಸಲು ಅವಕಾಶವಿರುತ್ತದೆ.

ಫಸಲ್ ಭೀಮಾ ಯೋಜನೆ; ಆಲೂಗಡ್ಡೆ ಬೆಳೆ ನೋಂದಣಿಗೆ ಅವಕಾಶ ಫಸಲ್ ಭೀಮಾ ಯೋಜನೆ; ಆಲೂಗಡ್ಡೆ ಬೆಳೆ ನೋಂದಣಿಗೆ ಅವಕಾಶ

ರೈತರು ವಿಮೆ ಬಗ್ಗೆ ಹೆಚ್ಚಿನ ವಿವರ ಪಡೆಯಲು ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಸಮೀಪವಿರುವ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ವೆಬ್ ಸೈಟ್‍ನಲ್ಲಿಯೂ ವಿವರಗಳು ಇವೆ.

ಮೈಸೂರಿನ ಇಂಜಿನಿಯರಿಂಗ್ ಪದವೀಧರನ ಸಾವಯವ ಕೃಷಿ ಯಶೋಗಾಥೆಮೈಸೂರಿನ ಇಂಜಿನಿಯರಿಂಗ್ ಪದವೀಧರನ ಸಾವಯವ ಕೃಷಿ ಯಶೋಗಾಥೆ

ಹಿಂಗಾರು ಹಂಗಾಮು ಬೆಳೆಗಳು

ಹಿಂಗಾರು ಹಂಗಾಮು ಬೆಳೆಗಳು

2020-21ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಹೋಬಳಿ ಮಟ್ಟಕ್ಕೆ ಶಿಕಾರಿಪುರ ತಾಲೂಕಿನ ಹೊಸೂರು, ಉಡುಗಣಿ ಹೋಬಳಿಗಳಲ್ಲಿ ಮುಸುಕಿನ ಜೋಳ (ನೀರಾವರಿ) ಹಾಗೂ ಸೊರಬ ತಾಲೂಕಿನ ಜಡೆ ಹೋಬಳಿಯಲ್ಲಿ ಹೆಸರು (ಮಳೆ ಆಶ್ರಿತ) ಬೆಳೆಗಳು ಆಯ್ಕೆ ಆಗಿರುತ್ತವೆ. ಗ್ರಾಮ ಪಂಚಾಯತಿ ಮಟ್ಟಕ್ಕೆ ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿ, ಬಗನಕಟ್ಟೆ, ಮಾರವಳ್ಳಿ ಹಾಗೂ ಮತ್ತಿಕೋಟೆ ಗ್ರಾಮ ಪಂಚಾಯತಿಗಳಲ್ಲಿ ಸೂರ್ಯಕಾಂತಿ (ನೀರಾವರಿ) ಬೆಳೆಗಳು ಆಯ್ಕೆಯಾಗಿರುತ್ತವೆ.

ಬೇಸಿಗೆ ಹಂಗಾಮಿನ ಬೆಳೆ

ಬೇಸಿಗೆ ಹಂಗಾಮಿನ ಬೆಳೆ

2020-21 ನೇ ಸಾಲಿನ ಬೇಸಿಗೆ ಹಂಗಾಮಿನಲ್ಲಿ ಹೋಬಳಿ ಮಟ್ಟಕ್ಕೆ ಶಿಕಾರಿಪುರ ತಾಲೂಕಿನ ಹೊಸೂರು, ಉಡುಗಣಿ, ಶಿಕಾರಿಪುರ ಹಾಗೂ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಹೋಬಳಿಗಳಲ್ಲಿ ಸೂರ್ಯಕಾಂತಿ (ನೀರಾವರಿ) ಬೆಳೆಗಳು ಆಯ್ಕೆಯಾಗಿರುತ್ತವೆ. ಹಾಗೂ ಗ್ರಾಮ ಪಂಚಾಯತಿ ಮಟ್ಟಕ್ಕೆ ಭತ್ತ (ನೀರಾವರಿ) ಬೆಳೆಗೆ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕುಗಳಲ್ಲಿನ ಆಯ್ದ ಗ್ರಾಮ ಪಂಚಾಯತಿಗಳು ಆಯ್ಕೆಯಾಗಿರುತ್ತದೆ.

ಅಂತಿಮ ದಿನಾಂಕದ ವಿವರ

ಅಂತಿಮ ದಿನಾಂಕದ ವಿವರ

ಬೆಳೆ ವಿಮೆಗಾಗಿ ಬೆಳೆಸಾಲ ಪಡೆದ ಮತ್ತು ಪಡೆಯದ ರೈತರು ಈ ಯೋಜನೆಯಡಿ ನೋಂದಾಯಿಸಲು ಹಿಂಗಾರು ಹಂಗಾಮಿನ ಮುಸುಕಿನ ಜೋಳ (ನೀರಾವರಿ) ಮತ್ತು ಸೂರ್ಯಕಾಂತಿ (ನೀರಾವರಿ) ಬೆಳೆಗಳಿಗೆ ಅಂತಿಮ ದಿನಾಂಕ 30-11-2020 ಹಾಗೂ ಹೆಸರು (ಮಳೆ ಆಶ್ರಿತ) ಬೆಳೆಗೆ ದಿನಾಂಕ 31.12.2020 ಮತ್ತು ಬೇಸಿಗೆ ಹಂಗಾಮಿನ ಭತ್ತ (ನೀರಾವರಿ) ಮತ್ತು ಸೂರ್ಯಕಾಂತಿ (ನೀರಾವರಿ) ಬೆಳೆಗಳಿಗೆ ದಿನಾಂಕ 01.03.2021 ಅಂತಿಮ ದಿನಾಂಕವಾಗಿದೆ.

ಬೆಳೆಸಾಲ ಪಡೆಯುವ ರೈತರು

ಬೆಳೆಸಾಲ ಪಡೆಯುವ ರೈತರು

ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುತ್ತದೆ. ತದನಂತರ ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಬೆಳೆ ಸಾಲ ಪಡೆಯದ ರೈತರು ತಮಗೆ ಹತ್ತಿರವಿರುವ ಬ್ಯಾಂಕ್ / ಆರ್ಥಿಕ ಸಂಸ್ಥೆಗಳು/ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ (CSC ಕೇಂದ್ರಗಳು) ನೋಂದಣಿ ಮಾಡಿಕೊಳ್ಳಬಹುದು.

English summary
Pradhan Mantri Fasal Bima Yojana (PMFBY) will implement in Shivamogga for the year 2020-21. Here are the list of crops under the scheme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X