ಟ್ರ್ಯಾಕ್ಟರ್ ಮೂಲಕ ಬಲವಂತವಾಗಿ ಗಡಿ ದಾಟುವ ರೈತರ ಪ್ರಯತ್ನಕ್ಕೆ ಪೊಲೀಸರ ತಡೆ
ನವದೆಹಲಿ, ಜನವರಿ 26: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ಗಣರಾಜ್ಯೋತ್ಸವ ದಿನದಂದು ಬೃಹತ್ ಟ್ರ್ಯಾಕ್ಟರ್ ಮೆರವಣಿಗೆಗೆ ಕರೆ ನೀಡಿದ್ದು, ಲೋನಿ ಗಡಿ ಮೂಲಕ ಸೋಮವಾರ ಬಲವಂತವಾಗಿ ದೆಹಲಿ ಪ್ರವೇಶಿಸಲು ಕೆಲವು ಟ್ರ್ಯಾಕ್ಟರ್ಗಳು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ದೆಹಲಿಯ ಐತಿಹಾಸಿಕ ಸಿಗ್ನೇಚರ್ ಸೇತುವೆಯನ್ನು ಪೊಲೀಸರು ಬಂದ್ ಮಾಡಿದ್ದಾರೆ.
ರೈತರು ಬ್ಯಾರೇಕೇಡ್ಗಳನ್ನು ಮುರಿದು ಟ್ರ್ಯಾಕ್ಟರ್ನಲ್ಲಿ ದೆಹಲಿ ಒಳಗೆ ಪ್ರವೇಶಿಸಲು ಯತ್ನಿಸಿದರು. ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಲ್ಪ ಪ್ರಮಾಣದಲ್ಲಿ ಬಲ ಪ್ರಯೋಗಿಸಿದ್ದರಿಂದ ಸ್ಥಳದಲ್ಲಿ ಗದ್ದಲದ ವಾತಾವರಣ ನಿರ್ಮಾನವಾಗಿತ್ತು.

ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿಗಳಿಂದ ಮಾತ್ರವೇ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ದೆಹಲಿ ಪೊಲೀಸರು ರೈತರಿಗೆ ಅನುಮತಿ ನೀಡಿದ್ದಾರೆ. ಇಂದು ಕರೆ ನೀಡಿರುವ ಟ್ರ್ಯಾಕ್ಟರ್ ಮೆರವಣಿಗೆಗೆ ಭಾರಿ ಪ್ರಮಾಣದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ದೆಹಲಿ ಪೊಲೀಸರು ಎಲ್ಲ ಸ್ಥಳಗಳಲ್ಲಿಯೂ ಭದ್ರತೆಯನ್ನು ಸಾಕಷ್ಟು ಬಿಗಿಗೊಳಿಸಿದ್ದಾರೆ. ಸಿಮೆಂಟ್ ಬ್ಲಾಕ್ಗಳು, ಕ್ರೇನ್ಗಳನ್ನು ಪ್ರಮುಖ ಸ್ಥಳಗಳಲ್ಲಿ ಇರಿಸಲಾಗಿದೆ. ಪ್ರತಿ ಗಡಿ ಭಾಗದಲ್ಲಿಯೂ ಸೀಮಿತ ಸಂಖ್ಯೆಯ ಟ್ರ್ಯಾಕ್ಟರ್ಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
Signature bridge closed for traffic by @DelhiPolice after farmers force fully try to enter #Delhi through Loni border#FarmersProstests pic.twitter.com/GrXo6WKSdf
— Gautam Aggarwal (@gauaggbjp) January 25, 2021
ರೈತರು ಶಾಂತಿಯುತವಾಗಿ ಮೆರವಣಿಗೆ ನಡೆಸಲು ಉದ್ದೇಶಿಸಿದ್ದಾರೆ. ಆದರೆ ಇಲ್ಲಿ ಅನಗತ್ಯ ಗೊಂದಲಗಳನ್ನು ಸೃಷ್ಟಿಸುವ ಮೂಲಕ ಸಂಘರ್ಷ ಉಂಟುಮಾಡುವ ಪ್ರಯತ್ನಗಳು ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಬಂದಿದೆ. ಈ ಕಾರಣದಿಂದ ದೆಹಲಿ ಪೊಲೀಸರು ಎಲ್ಲ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ.
ಯಾವ ರಸ್ತೆಗಳು ಬಂದ್ ಆಗಿವೆ ಮತ್ತು ವಾಹನ ಸವಾರರು ಯಾವ ಮಾರ್ಗದ ಮೂಲಕ ಸಂಚರಿಸಬೇಕು ಎಂಬ ಬಗ್ಗೆ ಸಂಚಾರ ಪೊಲೀಸರು ವಿವರವಾದ ಮಾಹಿತಿ ನೀಡಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications