ಗೋಧಿ, ನುಚ್ಚಕ್ಕಿ ರಫ್ತು ನಿರ್ಬಂಧ ತೆಗೆಯಿರಿ, ದೇಶಿ ಕೃಷಿ ಉತ್ಪಾದನೆಗೆ ಆದ್ಯತೆ ನೀಡಿ: ಕೇಂದ್ರಕ್ಕೆ ರೈತರ ಮನವಿ
ನವದೆಹಲಿ, ನವೆಂಬರ್ 23: ಸರ್ಕಾರ ಗೋಧಿ ರಫ್ತು ಮೇಲಿನ ನಿಷೇಧ ತೆರವುಗೊಳಿಸಬೇಕು. ಎಣ್ಣೆಕಾಳುಗಳು ಸೇರಿದಂತೆ ದೇಶೀಯ ಕೃಷಿ ಉತ್ಪಾದನೆ ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ಕೇಂದ್ರ ಹಣಕಾಸು ಸಚಿವಾಲಯಕ್ಕೆ ವಿವಿಧ ರೈತಪರ ಸಂಘಟನೆಗಳು ಮನವಿ ಮಾಡಿಕೊಂಡಿವೆ.
ಮಂಗಳವಾರ ವರ್ಚವಲ್ನಲ್ಲಿ ನಡೆದ ಕೇಂದ್ರ ಆಯವ್ಯಯ ಪೂರ್ವ ಸಮಾಲೋಚನೆ ಮೂರನೇ ಸಭೆಯಲ್ಲಿ ರೈತ ಸಂಘಟನೆಗಳ ಮುಖಂಡರು, ಕೃಷಿ ತಜ್ಞರು ಹಾಗೂ ಕೃಷಿ ಸಂಸ್ಕರಣಾ ಉದ್ಯಮದ ಪ್ರತಿನಿಧಿಗಳೊಂದಿಗೆ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಚರ್ಚಿಸಿದರು.
ಈ ವೇಳೆ ಮಾತನಾಡಿದ ರೈತ ಮುಖಂಡರು ಗೋಧಿಯಂತಹ ಕೃಷಿ ಉತ್ಪನ್ನಗಳ ರಫ್ತು ಮೇಲೆ ಹೇರಲಾಗಿರುವ ನಿಷೇಧವನ್ನು ಹಿಂಪಡೆಬೇಕು. ಮುಖ್ಯವಾಗಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಗಿಂತ ಕಡಿಮೆ ಬೆಲೆಯ ಉತ್ಪನ್ನಗಳ ಆಮದ ಮಾಡಿಕೊಳ್ಳುವುದನ್ನು ನಿರ್ಬಂಧಿಸಬೇಕು. ಇನ್ನು ಎಣ್ಣೆಕಾಳುಗಳಾದ ಸೋಯಾಬೀನ್, ಸಾಸಿವೆ, ಕಡಲೆಕಾಯಿ ಮತ್ತು ಸೂರ್ಯಕಾಂತಿ ಎಣ್ಣೆಯಂತಹ ದೇಶೀಯ ಉತ್ಪಾದನೆ ಆದ್ಯತೆ ಕೊಡಬೇಕು ಎಂದು ಒತ್ತಾಯಿಸಿದರು.

ಕೃಷಿ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಗೊಳಿಸಿ
ಭಾರತ್ ಕೃಷಿಕ್ ಸಮಾಜದ ಅಧ್ಯಕ್ಷ ಅಜಯ್ ವೀರ್ ಮಾತನಾಡಿ, 2023-24ರ ಕೇಂದ್ರ ಬಜೆಟ್ ಪಟ್ಟಿಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಗಿಂತ ಕೆಳಗಿರುವ ಉತ್ಪನ್ನಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಬಾರದು. ಕೃಷಿ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಪಡಿಸಲು, ನಿರುದ್ಯೋಗಿಗಳನ್ನು ಕೃಷಿ ಕ್ಷೇತ್ರದತ್ತ ಸೆಳೆಯಲು ಕ್ರಮ ವಹಿಸಬೇಕು ಎಂದರು.

ಗೋಧಿ, ನುಚ್ಚಕ್ಕಿ ರಫ್ತುನಿಂದ ರೈತರ ಆದಾಯಕ್ಕೆ ಕುತ್ತು
ಭಾರತೀಯ ರೈತ ಸಂಘ ಒಕ್ಕೂಟದ ಅಧ್ಯಕ್ಷ ರಘುನಾಥ್ ದಾದಾ ಪಾಟೀಲ್ ಮಾತನಾಡಿ, ರೈತರು ಹೆಚ್ಚಿನ ಆದಾಯ ಹೊಂದುವ ಜೊತೆಗೆ ಅವರು ಜಾಗತಿಕವಾಗಿ ವ್ಯಾಪಾರದಲ್ಲಿ ತೊಡಗಿಕೊಳ್ಳುವಂತೆ ವಾತಾವರಣ ನಿರ್ಮಿಸಬೇಕು. ಗೋಧಿ ಮತ್ತು ನುಚ್ಚಕ್ಕಿ ಇತರ ಕೃಷಿ ಉತ್ಪನ್ನಗಳ ರಫ್ತಿನ ಮೇಲಿನ ನಿರ್ಬಂಧದ ನಿರ್ಧಾರದಿಂದ ರೈತರ ಆದಾಯಕ್ಕೆ ಹೊಡೆತ ಬಿದ್ದಿದೆ.
ಕೃಷಿ ಉತ್ಪನ್ನಗಳ ರಫ್ತಿಗೆ ಸರ್ಕಾರ ನಿರ್ಬಂಧ ಹೇರಬಾರದು. ದೇಶೀಯ ಪೂರೈಕೆಯನ್ನು ಹೆಚ್ಚಿಸಲು ಮತ್ತು ಹಣದುಬ್ಬರವನ್ನು ನಿಯಂತ್ರಿಸಲು ಭಾರತ ಸರ್ಕಾರ ಗೋಧಿ ಮತ್ತು ನುಚ್ಚಕ್ಕಿ ರಫ್ತುಗಳನ್ನು ನಿರ್ಬಂಧಿಸಿದೆ. ಇದರಿಂದಾದ ಪ್ರಯೋಜನ ಕುರಿತು ಅರಿಯಬೇಕು ಎಂದು ವಿವರಿಸಿದರು.

ದೇಶಿಯ ಎಣ್ಣೆ ಉತ್ಪನ್ನಗಳಿಗೆ ಆದ್ಯತೆ ನೀಡಿ
ಸೋಯಾಬೀನ್, ಸೂರ್ಯಕಾಂತಿ ಮತ್ತು ಕಡಲೆಕಾಯಿಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ಖಾದ್ಯ ತೈಲಗಳ ಆಮದಿನ ಮೇಲೆ ಭಾರತದ ಅವಲಂಬನೆ ಕಡಿಮೆ ಆಗುತ್ತದೆ ಪಾಟೀಲ್ ಸಲಹೆ ನೀಡಿದರು. ರೈತರ ಸಂಘಟನೆಗಳ ಮುಖಂಡರು ಹಾಗೂ ಉದ್ಯಮಿಗಳ ಸಲಹೆಗಳನ್ನು ವಿತ್ತ ಸಚಿವೆ ಆಲಿಸಿದರು. ಅವರು 2023ರ ಫೆಬ್ರುವರಿ 1ರಂದು ಆಯವ್ಯಯ ಮಂಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ದೇಶದ ಅನೇಕ ಸಂಘ ಸಂಸ್ಥೆ ಸಭೆಯಲ್ಲಿ ಭಾಗಿ
ಬಜೆಟ್ ಪೂರ್ವಭಾವಿ ಸಮಾಲೋಚನೆ ಸಭೆಯಲ್ಲಿ ಕೇರಳದ ಅಖಿಲ ಭಾರತ ಮಸಾಲೆ ರಫ್ತುದಾರರ ವೇದಿಕೆಯ ಕಾರ್ಯದರ್ಶಿ ವೀರೇನ್ ಕೆ ಖೋನಾ, ಉತ್ತರಾಖಂಡನ ಗೋವಿಂದ್ ಬಲ್ಲಭ್ ಪಂತ್ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ನಿರ್ದೇಶಕರು ಎ ಎಸ್ ನೈನ್, ಹಿಮಾಚಲದ ರಾಜ್ಯ ಹಣ್ಣು ತರಕಾರಿಗಳು ಮತ್ತು ಹೂವುಗಳ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹರೀಶ್ ಚೌಹಾಣ್, ತಮಿಳುನಾಡಿನ ಯುಪಿಎಎಸ್ಐ ಅಧ್ಯಕ್ಷ ಜೆಫ್ರಿ ರೆಬೆಲ್ಲೊ ಮತ್ತಿತರರು ರೈತರು ಅನುಭವಿಸುತ್ತಿರುವ ಕಷ್ಟ ನಷ್ಟಗಳನ್ನು ವಿತ್ತ ಸಚಿವೆ ಗಮನಕ್ಕೆ ತಂದರು.
ಭಾರತೀಯ ರೈತರ ರಸಗೊಬ್ಬರ ಸಹಕಾರಿ ಸಂಸ್ಥೆ, ಭಾರತೀಯ ಕಿಸಾನ್ ಸಂಘ ಮತ್ತು ದಕ್ಷಿಣ ಭಾರತೀಯ ಕಬ್ಬು ರೈತರ ಸಂಘ ಹಣ್ಣುಗಳು ಮತ್ತು ತರಕಾರಿಗಳ ಸಂಸ್ಕರಣೆ ಹಾಗೂ ಇಂಟಿಗ್ರೇಟೆಡ್ ಕೋಲ್ಡ್ ಚೈನ್ ಅಸೋಸಿಯೇಷನ್, ಅಸೋಸಿಯೇಟೆಡ್ ಟೀ ಮತ್ತು ಅಗ್ರೋ ಮ್ಯಾನೇಜ್ಮೆಂಟ್ ಸರ್ವಿಸಸ್ (ಅಸ್ಸಾಂ)ಸೇರಿದಂತೆ ಅನೇಕ ಸಂಘ, ಸಂಸ್ಥೆಗಳು ಸಭೆಯಲ್ಲಿ ಪಾಲ್ಗೊಂಡು ಕೇಂದ್ರಕ್ಕೆ ಕೆಲವು ಸಲಹೆಗಳನ್ನು ನೀಡಿದವು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications