ಬೆಂಗಳೂರಿನಲ್ಲಿ ತರಕಾರಿ ದುಬಾರಿ, ಜೇಬಿಗೆ ಕತ್ತರಿ
ಬೆಂಗಳೂರು, ಮೇ 20 : ಬೆಂಗಳೂರಿನಲ್ಲಿ ತರಕಾರಿ ದರ ಮತ್ತೊಮ್ಮೆ ಹೆಚ್ಚಾಗಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಿದೆ. ನಗರಕ್ಕೆ ತರಕಾರಿ ಪೂರೈಕೆಯಾಗುವ ಪ್ರದೇಶಗಳಲ್ಲಿ ನೀರಿನ ಕೊರತೆಯಿಂದ ಬೆಳೆ ಕಡಿಮೆಯಾಗಿದ್ದು ತರಕಾರಿ ದರ ಶೇ 20ರಷ್ಟು ಹೆಚ್ಚಾಗಿದೆ. ಮಳೆ ಬರುವವರೆಗೂ ಬೆಲೆ ಕಡಿಮೆ ಆಗುವುದಿಲ್ಲ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ.
ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ, ಈ ವಾರ ತರಕಾರಿ ಬೆಲೆ ಶೇ 20ರಷ್ಟು ಹೆಚ್ಚಾಗಿದ್ದು, ಬೆಂಗಳೂರಿನ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಕಡಿಮೆ ಬೆಲೆಗೆ ದೊರೆಯುತ್ತಿದ್ದ ಮೂಲಂಗಿಯಂತಹ ತಕರಾರಿಗಳು ಕೆಜಿಗೆ 39ರೂ.ಗಳಾಗಿದ್ದು, ಮಾರುಕಟ್ಟೆಗೆ ಹೋದ ಗ್ರಾಹಕರನ್ನು ಕಂಗೆಡಿಸಿದೆ.

ಬೆಂಗಳೂರು ನಗರಕ್ಕೆ ಆನೇಕಲ್, ಹೊಸಕೋಟೆ, ಕೋಲಾರ, ಮಾಲೂರು, ನಂದಗುಡಿ, ಹಿಂಡಿಗನಾಳ ಕ್ರಾಸ್ ಮುಂತಾದ ಪ್ರದೇಶಗಳಿಂದ ತರಕಾರಿ ಸರಬರಾಜು ಆಗುತ್ತಿತ್ತು. ಆದರೆ, ಈ ಪ್ರದೇಶಗಳಲ್ಲಿ ನೀರಿನ ಕೊರತೆ ಉಂಟಾದ ಕಾರಣ ತರಕಾರಿ ಬೆಳೆ ಕಡಿಮೆಯಾಗಿದೆ. ಆದ್ದರಿಂದ ಪೂರೈಕೆ ಕಡಿಮೆಯಾಗಿ ಬೆಲೆ ಏರಿಕೆಯಾಗಿದೆ.
ತರಕಾರಿ ಬೆಳೆಯುವ ಜನರು ಮಳೆಗಾಗಿ ಕಾದು ಕುಳಿತಿದ್ದಾರೆ. ಅತ್ತ ಮಳೆಯೂ ಇಲ್ಲ, ಇತ್ತ ಕೊಳವೆ ಬಾವಿಗಳಲ್ಲೂ ನೀರಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ತರಕಾರಿ ಬೆಲೆ ಏರಿಕೆಯಾಗಿದೆ ಎನ್ನುತ್ತಾರೆ. ಜಯಗನರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ತರಕಾರಿ ಮಾರಾಟ ಮಾಡುವ ಸುಬ್ಬಣ್ಣ. ಸರಿಯಾಗಿ ಮಳೆ ಬೀಳುವ ತನಕ ಬೆಲೆ ಕಡಿಮೆಯಾಗುವುದಿಲ್ಲ ಎಂದು ಸುಬ್ಬಣ್ಣ ಹೇಳುತ್ತಾರೆ.
ಯಾವ ಬೆಲೆ ಎಷ್ಟಾಗಿದೆ : ಈರುಳ್ಳಿ, ಟೊಮೆಟೋ ಸೇರಿದಂತೆ ಎಲ್ಲಾ ತರಕಾರಿಗಳ ಬೆಲೆ 30ರ ಗಡಿದಾಟುವತ್ತ ಸಾಗಿದೆ. ಹೂಕೋಸು ಕೆಜಿಗೆ 59ರೂ., ಡಬ್ಬಲ್ ಬೀನ್ಸ್ 138, ಈರುಳ್ಳಿ 29, ಮೂಲಂಗಿ 39, ಟೊಮೆಟೋ 24, ಹುರಳಿಕಾಯಿ 80, ಕ್ಯಾಪ್ಸಿಕಂ 42 ರೂಗೆ ಏರಿಕೆಯಾಗಿದೆ. [ತರಕಾರಿ ಬೆಲೆ ನೋಡಿ]
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications