ಬೆಂಗಳೂರಿನಲ್ಲಿ ತರಕಾರಿ ದುಬಾರಿ, ಜೇಬಿಗೆ ಕತ್ತರಿ
ಬೆಂಗಳೂರು, ಮೇ 20 : ಬೆಂಗಳೂರಿನಲ್ಲಿ ತರಕಾರಿ ದರ ಮತ್ತೊಮ್ಮೆ ಹೆಚ್ಚಾಗಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಿದೆ. ನಗರಕ್ಕೆ ತರಕಾರಿ ಪೂರೈಕೆಯಾಗುವ ಪ್ರದೇಶಗಳಲ್ಲಿ ನೀರಿನ ಕೊರತೆಯಿಂದ ಬೆಳೆ ಕಡಿಮೆಯಾಗಿದ್ದು ತರಕಾರಿ ದರ ಶೇ 20ರಷ್ಟು ಹೆಚ್ಚಾಗಿದೆ. ಮಳೆ ಬರುವವರೆಗೂ ಬೆಲೆ ಕಡಿಮೆ ಆಗುವುದಿಲ್ಲ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ.
ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ, ಈ ವಾರ ತರಕಾರಿ ಬೆಲೆ ಶೇ 20ರಷ್ಟು ಹೆಚ್ಚಾಗಿದ್ದು, ಬೆಂಗಳೂರಿನ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಕಡಿಮೆ ಬೆಲೆಗೆ ದೊರೆಯುತ್ತಿದ್ದ ಮೂಲಂಗಿಯಂತಹ ತಕರಾರಿಗಳು ಕೆಜಿಗೆ 39ರೂ.ಗಳಾಗಿದ್ದು, ಮಾರುಕಟ್ಟೆಗೆ ಹೋದ ಗ್ರಾಹಕರನ್ನು ಕಂಗೆಡಿಸಿದೆ.

ಬೆಂಗಳೂರು ನಗರಕ್ಕೆ ಆನೇಕಲ್, ಹೊಸಕೋಟೆ, ಕೋಲಾರ, ಮಾಲೂರು, ನಂದಗುಡಿ, ಹಿಂಡಿಗನಾಳ ಕ್ರಾಸ್ ಮುಂತಾದ ಪ್ರದೇಶಗಳಿಂದ ತರಕಾರಿ ಸರಬರಾಜು ಆಗುತ್ತಿತ್ತು. ಆದರೆ, ಈ ಪ್ರದೇಶಗಳಲ್ಲಿ ನೀರಿನ ಕೊರತೆ ಉಂಟಾದ ಕಾರಣ ತರಕಾರಿ ಬೆಳೆ ಕಡಿಮೆಯಾಗಿದೆ. ಆದ್ದರಿಂದ ಪೂರೈಕೆ ಕಡಿಮೆಯಾಗಿ ಬೆಲೆ ಏರಿಕೆಯಾಗಿದೆ.
ತರಕಾರಿ ಬೆಳೆಯುವ ಜನರು ಮಳೆಗಾಗಿ ಕಾದು ಕುಳಿತಿದ್ದಾರೆ. ಅತ್ತ ಮಳೆಯೂ ಇಲ್ಲ, ಇತ್ತ ಕೊಳವೆ ಬಾವಿಗಳಲ್ಲೂ ನೀರಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ತರಕಾರಿ ಬೆಲೆ ಏರಿಕೆಯಾಗಿದೆ ಎನ್ನುತ್ತಾರೆ. ಜಯಗನರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ತರಕಾರಿ ಮಾರಾಟ ಮಾಡುವ ಸುಬ್ಬಣ್ಣ. ಸರಿಯಾಗಿ ಮಳೆ ಬೀಳುವ ತನಕ ಬೆಲೆ ಕಡಿಮೆಯಾಗುವುದಿಲ್ಲ ಎಂದು ಸುಬ್ಬಣ್ಣ ಹೇಳುತ್ತಾರೆ.
ಯಾವ ಬೆಲೆ ಎಷ್ಟಾಗಿದೆ : ಈರುಳ್ಳಿ, ಟೊಮೆಟೋ ಸೇರಿದಂತೆ ಎಲ್ಲಾ ತರಕಾರಿಗಳ ಬೆಲೆ 30ರ ಗಡಿದಾಟುವತ್ತ ಸಾಗಿದೆ. ಹೂಕೋಸು ಕೆಜಿಗೆ 59ರೂ., ಡಬ್ಬಲ್ ಬೀನ್ಸ್ 138, ಈರುಳ್ಳಿ 29, ಮೂಲಂಗಿ 39, ಟೊಮೆಟೋ 24, ಹುರಳಿಕಾಯಿ 80, ಕ್ಯಾಪ್ಸಿಕಂ 42 ರೂಗೆ ಏರಿಕೆಯಾಗಿದೆ. [ತರಕಾರಿ ಬೆಲೆ ನೋಡಿ]
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications