ಮೋದಿ ಮನ್ ಕಿ ಬಾತ್ ನಲ್ಲಿ ಇಸ್ರೋ, ಕ್ಷಿಪಣಿ, ಡಿಜಿಟಲ್ ಮನಿ, ಕೃಷಿ
ಪ್ರಧಾನಿ ನರೇಂದ್ರ ಮೋದಿ ಅವರ 29ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭಾನುವಾರದಂದು ಇಸ್ರೋ, ಕ್ಷಿಪಣಿ, ಡಿಜಿಟಲ್ ಮನಿ, ಕೃಷಿ, ಆಹಾರ ಉತ್ಪಾದನೆ ಬಗ್ಗೆ ಮಾತನಾಡಿದರು.
ನವದೆಹಲಿ, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ ಭಾನುವಾರ(ಫೆಬ್ರವರಿ 26)ದಂದು ತಮ್ಮ 29ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಇಸ್ರೋ ಸಾಧನೆ, ಕ್ಷಿಪಣಿಗಳ ಪರೀಕ್ಷೆ ಯಶಸ್ವಿ, ಡಿಜಿಟಲ್ ಮನಿ ವ್ಯವಸ್ಥೆ, ಕೃಷಿ ಮಹತ್ವ, ಆಹಾರ ಉತ್ಪಾದನೆ ಬಗ್ಗೆ ಮಾತನಾಡಿದರು.
ಲಕ್ಕಿ ಗ್ರಾಹಜ ಯೋಜನೆಯಡಿಯಲ್ಲಿ ಪುರಸ್ಕಾರ ಪಡೆದ ಮೈಸೂರಿನ ಸಂತೋಷ್, ದೆಹಲಿಯ ಶಬೀರ್ ಅವರ ಬಗ್ಗೆ ಉಲ್ಲೇಖಿಸಿದ ಮೋದಿ ಅವರು ಡಿಜಿಟಲ್ ವ್ಯವಹಾರ ಮೂಲಕ ಲಕ್ಷ ರುಪಾಯಿ ಬಹುಮಾನ ನೀಡಲಾಗಿದೆ.
ಆದರೆ, ಬಹುಮಾನಕ್ಕಿಂತ ಈ ವ್ಯವಸ್ಥೆ ಪ್ರಯೋಜನ ಎಲ್ಲರಿಗೂ ಸಿಗಬೇಕಿದೆ. ಡಿಜಿಧನ್ ಯೋಜನೆಯಲ್ಲಿ ಬಹುಮಾನ ಗೆದ್ದವರು ಯೋಜನೆಯ ಕುರಿತು ಪ್ರಚಾರ ಮಾಡಬೇಕು. ಪ್ರತಿಯೊಬ್ಬ ವ್ಯಕ್ತಿ ಕನಿಷ್ಠ 125 ಜನರಿಗೆ ಡಿಜಿಟಲ್ ಪಾವತಿಯ ಕುರಿತು ಅರಿವು ಮೂಡಿಸುವ ಮೂಲಕ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮೋದಿ ಕರೆ ನೀಡಿದರು.

ಡಿಜಿಧನ್ ಯೋಜನೆಯ ಭಾಗವಾಗಿ ಭೀಮ್ ಆಪ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ಅತ್ಯಲ್ಪ ಅವಧಿಯಲ್ಲೇ ಈ ಆಪ್ಅನ್ನು 1.7 ಕೋಟಿ ಜನರು ಡೌನ್ಲೋಡ್ ಮಾಡಿಕೊಂಡಿದ್ದಾರೆ ಎಂದು ಮೋದಿ ತಿಳಿಸಿದರು.
ಫೆಬ್ರವರಿ 15 ರಂದು ಏಕಕಾಲಕ್ಕೆ 104 ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಇಸ್ರೋ ಇತಿಹಾಸ ನಿರ್ಮಿಸಿದೆ. ನಮ್ಮ ವಿಜ್ಞಾನಿಗಳು ದೇಶದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ್ದಾರೆ.
ಇದೇ ಸಂದರ್ಭದಲ್ಲಿ ಭಾರತ ಖಂಡಾಂತರ ಕ್ಷಿಪಣಿ ಪ್ರತಿಬಂಧಕ ಕ್ಷಿಪಣಿಯ ಪರೀಕ್ಷೆಯನ್ನೂ ಸಹ ಯಶಸ್ವಿಯಾಗಿ ನಡೆಸುವ ಮೂಲಕ ರಕ್ಷಣಾ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ ಎಂದರು.
ಇಸ್ರೋ ಸಾಧನೆ:
* ಫೆಬ್ರವರಿ 15, 2017 ರಂದು ಭಾರತದ ಹೆಮ್ಮೆಯ ದಿನ ಎನ್ನಬಹುದು.
* ಮಂಗಳಯಾನದ ಯಶಸ್ಸಿನ ನಂತರ, 104 ಉಪಗ್ರಹದ ಉಡಾವಣೆ ಒಂದೇ ರಾಕೆಟ್ ಮೂಲಕ ಆಗಿದ್ದು, ಇಸ್ರೋ ಗರಿಮೆಯ ಸಾಕ್ಷಿ.
* ಪಿಎಸ್ ಎಲ್ ವಿಯ 38ನೇ ಯೋಜನೆ ಯಶಸ್ವಿಯಾಗಿದ್ದು, ವಿಶ್ವದಾಖಲೆಯಾಗಿದೆ.
* ಕಾರ್ಟೋ ಸ್ಯಾಟ್ 2ಡಿ ಉಪಗ್ರಹ ಕಾರ್ಯಾರಂಭ ಮಾಡಲು ಆರಂಭಿಸುತ್ತಿದ್ದಂತೆ ರೈತರ ಮಿತ್ರನಾಗಲಿದೆ.
ಖಂಡಾಂತರ ಕ್ಷಿಪಣಿ:
ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದ್ದು ಮತ್ತೊಂದು ಸಂತಸದ ವಿಚಾರ. ಕೇವಲ ಐದಾರು ರಾಷ್ಟ್ರಗಳು ಈ ಮಾದರಿ ಕ್ಷಿಪಣಿ ಹೊಂದಿದ್ದು, ವೈರಿಯ ಕ್ಷಿಪಣಿಯನ್ನು ಆಗಸದಲ್ಲೇ ತುಂಡರಿಸುವ ಸಾಮರ್ಥ್ಯ ಹೊಂದಿದೆ.
ವಿಜ್ಞಾನ:
ಯುವ ಜನಾಂಗದಲ್ಲಿ ಹೆಚ್ಚೆಚ್ಚು ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಗಾಂಧೀಜಿ ಹೇಳಿದಂತೆ, ವಿಜ್ಞಾನ ಏನೋ ಆಕಾಶದಿಂದ ಉದುರಿಲ್ಲ, ಎಲ್ಲವೂ ಅನುಭವ ಹಾಗೂ ಪ್ರಯೋಗದಿಂದ ಬೆಳೆದಿದೆ.
ಮನುಷ್ಯರ ಅಗತ್ಯಕ್ಕೆ ತಕ್ಕಂತೆ ವಿಜ್ಞಾನ ಕೂಡಾ ಬೆಳೆಯುತ್ತಿದೆ.
ಮುಂಬೈನ ಜಲ ಪ್ರಳಯದಿಂದ ಮನೆ ಕಳೆದುಕೊಂಡವರ ನೆರವಿಗಾಗಿ ವಿಶಿಷ್ಟವಾದ ಮನೆ ನಿರ್ಮಾಣ ಸಾಧ್ಯವಾಗಿದ್ದು ತಂತ್ರಜ್ಞಾನದ ನೆರವಿನಿಂದ ಎಂಬುದನ್ನು ಮರೆಯುವಂತಿಲ್ಲ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications