ಮೋದಿ ಮನ್ ಕಿ ಬಾತ್ ನಲ್ಲಿ ಇಸ್ರೋ, ಕ್ಷಿಪಣಿ, ಡಿಜಿಟಲ್ ಮನಿ, ಕೃಷಿ
ಪ್ರಧಾನಿ ನರೇಂದ್ರ ಮೋದಿ ಅವರ 29ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭಾನುವಾರದಂದು ಇಸ್ರೋ, ಕ್ಷಿಪಣಿ, ಡಿಜಿಟಲ್ ಮನಿ, ಕೃಷಿ, ಆಹಾರ ಉತ್ಪಾದನೆ ಬಗ್ಗೆ ಮಾತನಾಡಿದರು.
ನವದೆಹಲಿ, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ ಭಾನುವಾರ(ಫೆಬ್ರವರಿ 26)ದಂದು ತಮ್ಮ 29ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಇಸ್ರೋ ಸಾಧನೆ, ಕ್ಷಿಪಣಿಗಳ ಪರೀಕ್ಷೆ ಯಶಸ್ವಿ, ಡಿಜಿಟಲ್ ಮನಿ ವ್ಯವಸ್ಥೆ, ಕೃಷಿ ಮಹತ್ವ, ಆಹಾರ ಉತ್ಪಾದನೆ ಬಗ್ಗೆ ಮಾತನಾಡಿದರು.
ಲಕ್ಕಿ ಗ್ರಾಹಜ ಯೋಜನೆಯಡಿಯಲ್ಲಿ ಪುರಸ್ಕಾರ ಪಡೆದ ಮೈಸೂರಿನ ಸಂತೋಷ್, ದೆಹಲಿಯ ಶಬೀರ್ ಅವರ ಬಗ್ಗೆ ಉಲ್ಲೇಖಿಸಿದ ಮೋದಿ ಅವರು ಡಿಜಿಟಲ್ ವ್ಯವಹಾರ ಮೂಲಕ ಲಕ್ಷ ರುಪಾಯಿ ಬಹುಮಾನ ನೀಡಲಾಗಿದೆ.
ಆದರೆ, ಬಹುಮಾನಕ್ಕಿಂತ ಈ ವ್ಯವಸ್ಥೆ ಪ್ರಯೋಜನ ಎಲ್ಲರಿಗೂ ಸಿಗಬೇಕಿದೆ. ಡಿಜಿಧನ್ ಯೋಜನೆಯಲ್ಲಿ ಬಹುಮಾನ ಗೆದ್ದವರು ಯೋಜನೆಯ ಕುರಿತು ಪ್ರಚಾರ ಮಾಡಬೇಕು. ಪ್ರತಿಯೊಬ್ಬ ವ್ಯಕ್ತಿ ಕನಿಷ್ಠ 125 ಜನರಿಗೆ ಡಿಜಿಟಲ್ ಪಾವತಿಯ ಕುರಿತು ಅರಿವು ಮೂಡಿಸುವ ಮೂಲಕ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮೋದಿ ಕರೆ ನೀಡಿದರು.

ಡಿಜಿಧನ್ ಯೋಜನೆಯ ಭಾಗವಾಗಿ ಭೀಮ್ ಆಪ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ಅತ್ಯಲ್ಪ ಅವಧಿಯಲ್ಲೇ ಈ ಆಪ್ಅನ್ನು 1.7 ಕೋಟಿ ಜನರು ಡೌನ್ಲೋಡ್ ಮಾಡಿಕೊಂಡಿದ್ದಾರೆ ಎಂದು ಮೋದಿ ತಿಳಿಸಿದರು.
ಫೆಬ್ರವರಿ 15 ರಂದು ಏಕಕಾಲಕ್ಕೆ 104 ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಇಸ್ರೋ ಇತಿಹಾಸ ನಿರ್ಮಿಸಿದೆ. ನಮ್ಮ ವಿಜ್ಞಾನಿಗಳು ದೇಶದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ್ದಾರೆ.
ಇದೇ ಸಂದರ್ಭದಲ್ಲಿ ಭಾರತ ಖಂಡಾಂತರ ಕ್ಷಿಪಣಿ ಪ್ರತಿಬಂಧಕ ಕ್ಷಿಪಣಿಯ ಪರೀಕ್ಷೆಯನ್ನೂ ಸಹ ಯಶಸ್ವಿಯಾಗಿ ನಡೆಸುವ ಮೂಲಕ ರಕ್ಷಣಾ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ ಎಂದರು.
ಇಸ್ರೋ ಸಾಧನೆ:
* ಫೆಬ್ರವರಿ 15, 2017 ರಂದು ಭಾರತದ ಹೆಮ್ಮೆಯ ದಿನ ಎನ್ನಬಹುದು.
* ಮಂಗಳಯಾನದ ಯಶಸ್ಸಿನ ನಂತರ, 104 ಉಪಗ್ರಹದ ಉಡಾವಣೆ ಒಂದೇ ರಾಕೆಟ್ ಮೂಲಕ ಆಗಿದ್ದು, ಇಸ್ರೋ ಗರಿಮೆಯ ಸಾಕ್ಷಿ.
* ಪಿಎಸ್ ಎಲ್ ವಿಯ 38ನೇ ಯೋಜನೆ ಯಶಸ್ವಿಯಾಗಿದ್ದು, ವಿಶ್ವದಾಖಲೆಯಾಗಿದೆ.
* ಕಾರ್ಟೋ ಸ್ಯಾಟ್ 2ಡಿ ಉಪಗ್ರಹ ಕಾರ್ಯಾರಂಭ ಮಾಡಲು ಆರಂಭಿಸುತ್ತಿದ್ದಂತೆ ರೈತರ ಮಿತ್ರನಾಗಲಿದೆ.
ಖಂಡಾಂತರ ಕ್ಷಿಪಣಿ:
ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದ್ದು ಮತ್ತೊಂದು ಸಂತಸದ ವಿಚಾರ. ಕೇವಲ ಐದಾರು ರಾಷ್ಟ್ರಗಳು ಈ ಮಾದರಿ ಕ್ಷಿಪಣಿ ಹೊಂದಿದ್ದು, ವೈರಿಯ ಕ್ಷಿಪಣಿಯನ್ನು ಆಗಸದಲ್ಲೇ ತುಂಡರಿಸುವ ಸಾಮರ್ಥ್ಯ ಹೊಂದಿದೆ.
ವಿಜ್ಞಾನ:
ಯುವ ಜನಾಂಗದಲ್ಲಿ ಹೆಚ್ಚೆಚ್ಚು ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಗಾಂಧೀಜಿ ಹೇಳಿದಂತೆ, ವಿಜ್ಞಾನ ಏನೋ ಆಕಾಶದಿಂದ ಉದುರಿಲ್ಲ, ಎಲ್ಲವೂ ಅನುಭವ ಹಾಗೂ ಪ್ರಯೋಗದಿಂದ ಬೆಳೆದಿದೆ.
ಮನುಷ್ಯರ ಅಗತ್ಯಕ್ಕೆ ತಕ್ಕಂತೆ ವಿಜ್ಞಾನ ಕೂಡಾ ಬೆಳೆಯುತ್ತಿದೆ.
ಮುಂಬೈನ ಜಲ ಪ್ರಳಯದಿಂದ ಮನೆ ಕಳೆದುಕೊಂಡವರ ನೆರವಿಗಾಗಿ ವಿಶಿಷ್ಟವಾದ ಮನೆ ನಿರ್ಮಾಣ ಸಾಧ್ಯವಾಗಿದ್ದು ತಂತ್ರಜ್ಞಾನದ ನೆರವಿನಿಂದ ಎಂಬುದನ್ನು ಮರೆಯುವಂತಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications