ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಲ್ಲಿ ರೈತರ ಪ್ರತಿಭಟನೆ; 40 ರೈತರು ಪೊಲೀಸರ ವಶಕ್ಕೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 25: ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕದಲ್ಲಿ ರೈತರು ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಶುಕ್ರವಾರ ಬೆಂಗಳೂರಿನಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ, ಜೈಲ್ ಭರೋ ನಡೆಸಲಿದ್ದಾರೆ. ಈಗಾಗಲೇ ಕಳೆದ ಐದು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ರೈತ ಸಂಘಟನೆಗಳ ಜೊತೆ ಇತರ ಹಲವು ಸಂಘಟನೆಗಳು ಪ್ರತಿಭಟನೆಗೆ ಕೈ ಜೋಡಿಸಿವೆ.

ರೈತರ ಬೃಹತ್ ಪ್ರತಿಭಟನೆ; ಬಾರುಕೋಲು ಬೀಸಿ ಆಕ್ರೋಶ ರೈತರ ಬೃಹತ್ ಪ್ರತಿಭಟನೆ; ಬಾರುಕೋಲು ಬೀಸಿ ಆಕ್ರೋಶ

ಬೆಂಗಳೂರು-ತುಮಕೂರು ರಸ್ತೆಯ ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆಯಲು ಪ್ರಯತ್ನ ನಡೆಸಿದ 40ಕ್ಕೂ ಅಧಿಕ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರಸ್ತುತ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ.

ಕರ್ನಾಟಕ ಬಂದ್‌ಗೆ ಸಿದ್ಧತೆ ಮಾಡುತ್ತಿದ್ದೇವೆ; ಕೋಡಿಹಳ್ಳಿ ಚಂದ್ರಶೇಖರ್ ಕರ್ನಾಟಕ ಬಂದ್‌ಗೆ ಸಿದ್ಧತೆ ಮಾಡುತ್ತಿದ್ದೇವೆ; ಕೋಡಿಹಳ್ಳಿ ಚಂದ್ರಶೇಖರ್

Protesting Farmers Detained In Goraguntepalya Bengaluru

ರೈತರ ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಪ್ರತಿಭಟನೆ ಉಗ್ರ ಸ್ವರೂಪ ಪಡೆದರೆ ರೈತರನ್ನು ವಶಕ್ಕೆ ಪಡೆಯಲಿದ್ದಾರೆ. ರೈತರನ್ನು ಕರೆದೊಯ್ಯಲು 10 ಬಿಎಂಟಿಸಿ ಬಸ್‌ಗಳನ್ನು ಸಹ ಸಿದ್ಧಪಡಿಸಲಾಗಿದೆ.

ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್; ಕೋಡಿಹಳ್ಳಿ ಚಂದ್ರಶೇಖರ್ ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್; ಕೋಡಿಹಳ್ಳಿ ಚಂದ್ರಶೇಖರ್

Recommended Video

ಸಿದ್ದು ಹೊಸ ತಂತ್ರಗಾರಿಕೆ | Siddaramaiah | Oneindia Kannada

ಕುರುಬೂರು ಶಾಂತಕುಮಾರ್ ನೇತೃತ್ವದ ಬಣ, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ಮತ್ತೊಂದು ಬಣ ಸಹ ಮೈಸೂರು ಬ್ಯಾಂಕ್ ವೃತ್ತಕ್ಕೆ ಬಂದು ಸೇರಿದೆ. ನಾಯಂಡಹಳ್ಳಿ ಬಳಿ ಮೈಸೂರು ರಸ್ತೆ ತಡೆಯಲು ಪ್ರಯತ್ನ ನಡೆಸಿದ ರೈತರನ್ನು ವಶಕ್ಕೆ ಪಡೆಯಲಾಯಿತು.

English summary
Bengaluru police detained more than 40 farmers who try to block Goraguntepalya junction. Farmers protesting against anti farmers move by union and state government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X