ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆ: ರೈತರ ಹೋರಾಟ ಬೆಂಬಲಿಸಿ ಪ್ರತಿಭಟನಾ ಮೆರವಣಿಗೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಡಿಸೆಂಬರ್ 4: ದೆಹಲಿಯಲ್ಲಿನ ರೈತರ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಸಿಯುಸಿ) ಜಿಲ್ಲಾ ಸಮಿತಿಯಿಂದ ದಾವಣಗೆರೆ ನಗರದಲ್ಲಿಂದು ಪ್ರತಿಭಟನೆ ನಡೆಸಿದರು.

ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು, ಪ್ರತಿಭಟನಾ ಮೆರವಣಿಗೆ ಮುಖಾಂತರ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ, ಅವರ ಮುಖೇನ ರಾಷ್ಟ್ರಪತಿ ಅವರಿಗೆ ದೆಹಲಿಯಲ್ಲಿನ ರೈತರ ಹೋರಾಟ ಬೆಂಬಲಿಸಿ ಮನವಿ ಸಲ್ಲಿಸಿದರು.

ಕೂಡಲೇ ರೈತರ ಬೇಡಿಕೆಗಳಾದ ನೂತನ ಕೃಷಿ ಕಾಯ್ದೆ ಅಡಿಯಲ್ಲಿ ಜಾರಿಗೆ ತಂದಿರುವ ಎಪಿಎಂಸಿ ಕಾಯ್ದೆ, ವಿದೇಶಿ ಬೀಜ ಕಾಯ್ದೆ, ಭೂ ಸುಧಾರಣಾ ಹೆಸರಿನಲ್ಲಿ ರೈತಾಪಿ ಜನರನ್ನು ಬೀದಿಗೆ ತಳ್ಳುವ ಕಾಯ್ದೆ, ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

Protests In Davanagere In Support Of Farmers Struggle Of Delhi

ಶೀಘ್ರವಾಗಿ ಕೇಂದ್ರ ಸರ್ಕಾರವು ರೈತ ವಿರೋಧಿ ನೀತಿಗಳನ್ನು ಕೈಬಿಟ್ಟು ರೈತ ಪರ ಕಾಯ್ದೆಗಳನ್ನು ರೂಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದರು.

Recommended Video

Jadeja ಅಷ್ಟು ಒಳ್ಳೆ Batting ಮಾಡಿ Bowling ಮಾಡಲಿಲ್ಲ | Oneindia Kannada

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಎಂ.ಬಿ. ಶಾರದಮ್ಮ, ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಮಲ್ಲಮ್ಮ, ಖಜಾಂಚಿ ವಿಶಾಲಾಕ್ಷಿ ಮೃತ್ಯುಂಜಯ, ರೇಣುಕಮ್ಮ, ಸಿ.ಬಿ. ಕಾಳಮ್ಮ, ಕೆ. ಸುಧಾ, ಅಂಬುಜ, ಜ್ಯೋತಿ, ರಾಧಾ, ಮಂಗಳ, ಭಾಗ್ಯಲಕ್ಷ್ಮಿ, ಅಂಜಿನಮ್ಮ ಸೇರಿದಂತೆ ಇತರರು ಭಾಗವಹಿಸಿದ್ದರು.

English summary
The Karnataka State Anganwadi Workers and Auxiliary Federation District Committee held a protest in Davanagere city in support of the Farmers struggle
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X