ರೈತರ ಪರ, ಕೇಂದ್ರದ ವಿರುದ್ಧ ಮತ್ತೆ ಒಟ್ಟುಗೂಡಿದ ವಿಪಕ್ಷಗಳು
ನವದೆಹಲಿ, ನವೆಂಬರ್ 30: ನಿನ್ನೆಯಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆಯಲ್ಲಿ ಇಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಸೇರಿದಂತೆ ಹಲವು ವಿಪಕ್ಷಗಳ ನಾಯಕರು ಹಾಜರಾಗಿ ರೈತರಿಗೆ ಬೆಂಬಲ ಸೂಚಿಸಿದರು.
ಎಎಪಿಯ ಅರವಿಂದ ಕೇಜ್ರಿವಾಲ್, ಕಮ್ಯೂನಿಸ್ಟ್ ಪಕ್ಷದ ಸೀತಾರಾಮ್ ಯೆಚೂರಿ, ಎಲ್ಜೆಡಿಯ ಶರದ್ ಯಾದವ್, ಜಿಗ್ನೇಶ್ ಮೆವಾನಿ, ನ್ಯಾಷನಲ್ ಕಾನ್ಫರೆನ್ಸ್ನ ಫಾರೂಕ್ ಅಬ್ದುಲ್ಲಾ, ಎನ್ಸಿಪಿಯ ಶರದ್ ಪವಾರ್, ಯೋಗೇಂದ್ರ ಯಾದವ್, ಯುವ ನಾಯಕ ಕನ್ಹಯ್ಯಾ ಕುಮಾರ್ ಹಲವು ವಿಪಕ್ಷಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಎಲ್ಲರೂ ಪರಸ್ಪರ ಕೈಹಿಡಿದು, ಕೇಂದ್ರ ಸರ್ಕಾರದ ವಿರುದ್ಧ ರೈತರ ಹೋರಾಟಕ್ಕೆ ಒಗ್ಗಟ್ಟಾಗಿ ರೈತರಿಗೆ ಬೆಂಬಲ ನೀಡುವುದಾಗಿ ಹೇಳಿದರು.

ಲಂಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದ ರೈತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ನಾವು ರೈತರೊಂದಿಗೆ ಇದ್ದೇವೆ ಎಂದು ಭರವಸೆ ನೀಡಿದರು. ಜೊತೆಗೆ ಮೋದಿ ರೈತರಿಗೆ ನೀಡಿದ ಮಾತು ಮರೆತಿದ್ದಾರೆ ಎಂದು ಹೇಳಿದರು.
ರೈತರು ಉತ್ತಮ ಭವಿಷ್ಯಕ್ಕಾಗಿ ವಿರೋಧಪಕ್ಷಗಳೆಲ್ಲವೂ ಒಗ್ಗಟ್ಟಾಗುತ್ತದೆ ಎಂದ ರಾಹುಲ್ ಗಾಂಧಿ, ರೈತ ಮತ್ತು ಯುವಕರ ಧ್ವನಿಯನ್ನು ಯಾರೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರ ರೈತರನ್ನು ಅವಮಾನಿಸಿದೆ, ಅದಕ್ಕೆ ಪ್ರತಿಕಾರವಾಗಿ ರೈತರು ಬಿಜೆಪಿಯನ್ನು ಬೇರು ಸಹಿತ ಕಿತ್ತುಹಾಕಲಿದ್ದಾರೆ. ರೈತರು ಸಾಲಮನ್ನಾದ ಉಚಿತ ಉಡುಗೊರೆಯನ್ನು ಕೇಳಲಿಲ್ಲ ಬದಲಾಗಿ ತಮಗೆ ನೀಡಬೇಕಾದ ಬಾಕಿಯನ್ನಷ್ಟೆ ಕೇಳಿದ್ದಾರೆ ಎಂದು ರಾಹುಲ್ ಕೇಂದ್ರದ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications