ತೊಗರಿ ಬೆಳೆಗೆ ನೆಟೆರೋಗ, ರಾಯಚೂರು ಜಿಲ್ಲೆ ರೈತರಲ್ಲಿ ಮನೆ ಮಾಡಿದ ಆತಂಕ
ರಾಯಚೂರು, ಅಕ್ಟೋಬರ್, 11: ಜಿಲ್ಲೆಯ ಮಸ್ಕಿ ತಾಲೂಕಿನ ವಟಗಲ್ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಬೆಳೆದ ತೊಗರಿ ಬೆಳೆಗೆ ಅಲ್ಲಲ್ಲಿ ನೆಟೆರೋಗ ಕಾಣಿಸಿಕೊಂಡಿದ್ದು, ಇದರಿಂದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಬೇರುಗಳು ಕೊಳೆತು ಬಿಳಿ ಬಣ್ಣಕ್ಕೆ ತಿರುಗಿ, ಗಿಡಗಳು ಒಣಗಿ ನೆಲಕ್ಕೆ ಬೀಳುತ್ತಿದ್ದು, ಇಡೀ ಜಮೀನಿಗೆ ರೋಗ ಹರಡುವ ಭೀತಿ ರೈತರನ್ನು ಕಾಡುತ್ತಿದೆ. "4.8 ಎಕರೆ ಜಮೀನಿನಲ್ಲಿ ತೊಗರಿ ಬಿತ್ತನೆ ಮಾಡಿದ್ದು, ಬಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮತ್ತು ಕೂಲಿ ಕಾರ್ಮಿಕರು ಸೇರಿದಂತೆ ಇದುವರೆಗೂ ಅಂದಾಜು ₹60 ಸಾವಿರ ಖರ್ಚು ಮಾಡಿದ್ದೇನೆ. ಇದೀಗ ಬೆಳೆ ಕೈಕೊಡುತ್ತಿರುವ ಪರಿಣಾಮ ದಿಕ್ಕು ತೋಚದಂತಾಗಿದೆ" ಎಂದು ರೈತ ವಿಜಯ ಕಡತಲ್ ಆತಂಕ ವ್ಯಕ್ತಪಡಿಸಿದರು.

"ಇರುವ 4.22 ಎಕರೆ ಜಮೀನಿನಲ್ಲಿ ಸಂಪೂರ್ಣ ತೊಗರಿ ಬಿತ್ತನೆ ಮಾಡಿದ್ದು, ಮಳೆ ಕೊರತೆಯಿಂದ ಮೂರು ತಿಂಗಳಿಂದ ಬೆಳೆ ಕಾಪಾಡಿಕೊಳ್ಳಲು ಹೆಣಗಿದ್ದೇವೆ. ಇದೀಗ ಬೆಳೆಗೆ ರೋಗ ಹರಡುತ್ತಿರುವುದು ಸಮಸ್ಯೆ ತಂದೊಡ್ಡಿದೆ. ರೈತ ಸಂಪರ್ಕ ಕೇಂದ್ರದಲ್ಲಿಯೇ ಬಿತ್ತನೆ ಬೀಜ ಖರೀದಿಸಿ ಕೃಷಿ ಅಧಿಕಾರಿಗಳ ಸಲಹೆಯಂತೆ ಸಕಾಲದಲ್ಲಿ ರಸಗೊಬ್ಬರ ಮತ್ತು ಕ್ರಿಮಿನಾಶಕ ಸಿಂಪಡಣೆ ಮಾಡಿದ್ದರೂ ರೋಗ ನಿಯಂತ್ರಣ ಆಗುತ್ತಿಲ್ಲ. ಅಧಿಕಾರಿಗಳು ಬೆಳೆ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಲು ಕ್ರಮ ಜರುಗಿಸಬೇಕು" ಎಂದು ರೈತ ಯಾಕೂಬ್ ಒತ್ತಾಯಿಸಿದರು.
"ಪ್ರತಿ ವರ್ಷ ತೊಗರಿ ಒಂದೇ ಬೆಳೆಯನ್ನು ಬಿತ್ತನೆ ಮಾಡುವುದರಿಂದ ಕೆಲವು ಕಡೆ ನೆಟೆರೋಗ ಕಾಣಿಸಿಕೊಂಡಿದೆ. ಬೇರು, ಕಾಂಡ ಕೊಳೆಯುವುದರಿಂದ ಗಿಡ ಒಣಗುತ್ತಿದೆ. ಆರಂಭಿಕ ಹಂತದಲ್ಲಿ ರೋಗ ಪತ್ತೆಯಾದರೆ ನಿಯಂತ್ರಣ ಸಾಧ್ಯ. ಈ ಹಂತದಲ್ಲಿ ಬೆಳೆ ಕಾಪಾಡುವುದು ಕಷ್ಟಕರ" ಎಂದು ಪಾಮನಕಲ್ಲೂರು ರೈತ ಸಂಪರ್ಕ ಕೇಂದ್ರ ಸಹಾಯಕ ಕೃಷಿ ಅಧಿಕಾರಿ ಬಸವರಾಜ ಹೇಳಿದರು.
ಮಳೆ ಕೊರತೆಯಿಂದ ಬೇರೆ ಬೆಳೆಗಳು ಕೈ ಕೊಟ್ಟಿವೆ. ಇದೀಗ ತೊಗರಿ ಬೆಳೆಯೂ ಬಾರದಿದ್ದರೆ ತೀವ್ರ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ರೈತ ವಿಜಯ ಕಡತಲ್ ಹೇಳಿದರು. ಹಾಗೆಯೇ ಬಿತ್ತನೆಗೆ ಮುಂಚೆ ಜಮೀನು ಹದಗೊಳಿಸುವ ಸಮಯದಲ್ಲಿ ತಿಪ್ಪೆ ಗೊಬ್ಬರದ ಜೊತೆ ಟ್ರೈಕೋಡರ್ಮಾ ಶಿಲೀಂಧ್ರ ನಾಶಕ ಬಳಸುವುದು ಮತ್ತು ಪ್ರತಿ ವರ್ಷ ಬೆಳೆ ಪುನರಾವರ್ತನೆ ಆಗದಂತೆ ಬೇರೆ ಬೆಳೆ ಬೆಳೆಯಬೇಕು ಎಂದು ಕೃಷಿ ಅಧಿಕಾರಿ ಬಸವರಾಜ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications