ಬಾಗಲಕೋಟೆಯಲ್ಲಿ ರಾತ್ರಿ ಮತ್ತೆ ಮಳೆ; ನೀರು ಪಾಲಾದ ಬೆಳೆ

ಬಾಗಲಕೋಟೆ, ನವೆಂಬರ್ 7: ಮಳೆ ತಣ್ಣಗಾಯಿತು ಎಂದು ನಿಟ್ಟುಸಿರುಬಿಡುವಷ್ಟರಲ್ಲಿ ಮತ್ತೆ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದ ಬೀದಿಗಳು ಜಲಾವೃತವಾಗಿವೆ. ರಸ್ತೆಗಳ ಮೇಲೆ ನೀರು ತುಂಬಿ ಹರಿಯುತ್ತಿವೆ.

ಚಾಲುಕ್ಯರ ಕಾಲದ ಅಗಸ್ತ್ಯ ತೀರ್ಥ ಹೊಂಡ ಸಂಪೂರ್ಣ ಭರ್ತಿಯಾಗಿ ಮೇಣಬಸದಿ ರಸ್ತೆ, ಉಳ್ಳಾಗಡ್ಡಿ ಗಲ್ಲಿ, ಕಳ್ಳಿಪೇಟೆ ರಸ್ತೆ ಬೀದಿಯಲ್ಲಿ ನೀರು ನದಿಯಂತೆ ಹರಿಯುತ್ತಿದ್ದು, ಸಂಚರಿಸಲು ಹರಸಾಹಸ ಪಡಬೇಕಾಗಿದೆ.

ಮಳೆಯಿಂದಾಗಿ ಜಿಲ್ಲೆಯ ಉಗಲವಾಟ ಗ್ರಾಮದ ಶಿವಾನಂದ ಬಸರಿ ಎಂಬುವರ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗೋವಿನಜೋಳ ಆಹುತಿಯಾಗಿದೆ. ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಗೋವಿನ ಜೋಳ ಸಂಪೂರ್ಣ ನಾಶವಾಗಿದೆ. ಮಳೆ ನೀರಿನಿಂದ ಜಮೀನು ಕೆರೆಯಂತಾಗಿದ್ದು, ಗೋವಿನಜೋಳದ ತೆನೆಗಳು ನೀರಿನಲ್ಲಿ ತೇಲಾಡುತ್ತಿವೆ.

Rain Collapsed Crops In Bagalakot

ದಾವಣಗೆರೆಯಲ್ಲೂ ಮಳೆ: ಕಳೆದ ರಾತ್ರಿ ದಾವಣಗೆರೆಯಲ್ಲೂ ಮಳೆ ಬಿರುಸಿನಿಂದ ಸುರಿದಿದೆ. ದಾವಣಗೆರೆ ತಾಲೂಕಿನ ಸುತ್ತಮುತ್ತಲಿರುವ ಕಡ್ಲೇಬಾಳು, ಅವರಗೊಳ್ಳ, ಬೇತೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಳೆದ ರಾತ್ರಿ ಸುಮಾರು ಒಂದು ಗಂಟೆಗಿಂತ ಹೆಚ್ಚುಕಾಲ ಬಿರುಗಾಳಿ ಬೀಸಿದ್ದರಿಂದ ನೂರಾರು ಎಕರೆ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

Rain Collapsed Crops In Bagalakot

ಇನ್ನೇನು 15 ದಿನಗಳಲ್ಲಿ ಭತ್ತ ಕಟಾವಿಗೆ ಬರುತ್ತಿದ್ದು, ಫಸಲು ಕೂಡ ಉತ್ತಮವಾಗಿದ್ದರಿಂದ ಈ ಬಾರಿ ಹೆಚ್ಚು ಲಾಭ ಗಳಿಸಬಹುದು ಎನ್ನುವ ನಿರೀಕ್ಷೆಯಲ್ಲಿದ್ದ ರೈತರಿಗೆ ಮಳೆ ನಿರಾಸೆಯುಂಟು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+