ಬಳ್ಳಾರಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ಮುಂಗಾರು ಮಳೆ
ಬಳ್ಳಾರಿ, ಜೂನ್ 07: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಕಳೆದ ವರ್ಷ ಬರದಿಂದ ತತ್ತರಿಸಿದ್ದ ರೈತರು ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯು ರೈತರ ಮೊಗದಲ್ಲಿ ನೆಮ್ಮದಿ ಮತ್ತು ಸಂತಸ ಮೂಡಿಸಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಅತ್ಯಂತ ಬಿರುಸಿನಿಂದ ನಡೆಯುತ್ತಿದೆ.

ಜಿಲ್ಲೆಯಲ್ಲಿ 67,478 ಮೆಟ್ರಿಕ್ ಟನ್ ರಸಗೊಬ್ಬರ ಹಾಗೂ 16,223 ಕ್ವಿಂಟಲ್ ಬಿತ್ತನೆ ಬೀಜದ ದಾಸ್ತಾನು ಮಾಡಲಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರದ ವಿತರಣೆ ಕಾರ್ಯವು ಸುಗಮವಾಗಿ ನಡೆಯುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ವಾರ್ಷಿಕ ಮಳೆಯು 599.9 ಮಿ. ಮೀ. ಇದೆ. 2024ರ ಜನವರಿಯಿಂದ ಜೂನ್ 1ರವರೆಗೆ 81.5 ಮಿ. ಮೀ. ವಾಡಿಕೆ ಮಳೆಯಾಗಬೇಕಿದ್ದು, ವಾಸ್ತವವಾಗಿ 119.9 ಮಿ. ಮೀ. (ಶೇ.47.1) ಮಳೆ ಸುರಿದಿತ್ತು. ಬಳಿಕ ಮೇ 28ರಿಂದ ಜೂ.6ರ ವರೆಗಿನ 7 ದಿನಗಳಲ್ಲಿ 14.3 ಮಿ. ಮೀ. ವಾಡಿಕೆ ಮಳೆಗಿಂತ 48.0 ಮಿ. ಮೀ. ಮಳೆ (ಶೇ.235.7) ಸುರಿದಿದೆ. ಇದರಿಂದಾಗಿ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಹೆಚ್ಚು ಭರದಿಂದ ನಡೆಯುತ್ತಿವೆ.
ಬಿತ್ತನೆ ಬೀಜದ ಸಂಗ್ರಹ: ಬಳ್ಳಾರಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಭತ್ತ, ಜೋಳ, ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ, ತೊಗರಿ, ರಾಗಿ ಸೇರಿ ಒಟ್ಟು 16,223 ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, ಕೆ.ಎಸ್.ಎಸ್.ಸಿ., ಎನ್.ಎಸ್.ಸಿ., ಕೆ.ಓ.ಎಫ್ ಸಂಸ್ಥೆಗಳು ಹಾಗೂ ಖಾಸಗಿ ಬಿತ್ತನೆ ಬೀಜ ಸರಬರಾಜುದಾರ ಸಂಸ್ಥೆಗಳಲ್ಲಿ 32,789 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನಿದೆ.
ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ವಿತರಣೆ ಕಾರ್ಯ ಪ್ರಾರಂಭವಾಗಿದ್ದು, 299 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆಯಾಗಿದೆ. ಜಿಲ್ಲೆಯಲ್ಲಿ 4,00,043 ಹೆಕ್ಟೇರ್ ಭೌಗೋಳಿಕ ಪ್ರದೇಶವಿದ್ದು, 2,78,227 ಹೆಕ್ಟೇರ್ ಸಾಗುವಳಿಗೆ ಸಜ್ಜಾಗಿದೆ. ಒಟ್ಟು 1,59,662 ರೈತರು ಸಾಗುವಳಿದಾರರಿದ್ದು, ಆ ಪೈಕಿ 69,825 ಅತೀ ಸಣ್ಣ ರೈತರು, 44,046 ಸಣ್ಣ ರೈತರು, 44,210 ಮಧ್ಯಮ ರೈತರು ಹಾಗೂ 1,581 ದೊಡ್ಡ ರೈತರಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತಕ ಸಾಲಿನ ಮುಂಗಾರಿಗೆ 1,73,897 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಇದ್ದು, ಇಲ್ಲಿಯವರೆಗೆ 366 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದ್ದು, ಶೇ.0.21 ರಷ್ಟು ಪ್ರಗತಿಯಾಗಿದೆ.
ಮುಂಗಾರು ಹಂಗಾಮಿಗೆ ಯೂರಿಯಾ, ಡಿ.ಎ.ಪಿ ಹಾಗೂ ಕಾಂಪ್ಲೆಕ್ಸ್ ಸೇರಿ ಒಟ್ಟು 1,13,167 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದ್ದು, ಖಾಸಗಿ ಡೀಲರ್ಸ್, ಕೆ.ಎಸ್.ಎಸ್.ಸಿ ಹಾಗೂ ಮಾರುಕಟ್ಟೆ ಫೆಡರಷನ್ ಮೂಲಕ 70,243 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜಾಗಿದೆ ಮತ್ತು 2,765 ಮೆಟ್ರಿಕ್ ಟನ್ ವಿತರಣೆಯಾಗಿದ್ದು, 67,478 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ.
ಜಿಲ್ಲೆಯಲ್ಲಿ ಈ ವರ್ಷ ಉತ್ತಮ ಮಳೆಯಾಗುವ ಕುರಿತಂತೆ ಹವಾಮಾನ ಇಲಾಖೆಯ ಮುನ್ಸೂಚನೆಗಳು ಇದ್ದು, ಇದಕ್ಕೆ ಪೂರಕವಾಗಿ ಪೂರ್ವ ಮುಂಗಾರು ಉತ್ತಮವಾಗಿದೆ, ಕೃಷಿ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ. ಜಿಲ್ಲೆಯ ರೈತರಿಗೆ ಭಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದ್ದು, ರೈತರು ಯಾವುದೇ ರೀತಿಯ ಆತಂಕ, ಗೊಂದಲಪಡುವ ಅವಶ್ಯಕತೆಯಿಲ್ಲ. ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಣೆ ಮಾಡಲಾಗುತ್ತಿದೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications