ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ ವಿರುದ್ಧ ರೈತರ ಆಕ್ರೋಶವೇಕೆ?
ಬೆಂಗಳೂರು, ಮೇ 31: ಇಡೀ ದೇಶ ಮತ್ತು ಜಗತ್ತು ಕೋವಿಡ್ -19 ರ ವಿರುದ್ದ ಎಲ್ಲ ಭೇದಗಳನ್ನು ಮರೆತು ಹೋರಾಟದಲ್ಲಿ ತೊಡಗಿರುವಾಗ, ಸದರಿ ಸಂದರ್ಭವನ್ನು ಕೇಂದ್ರ ಸರಕಾರ ದುರುಪಯೋಗ ಪಡಿಸಿಕೊಂಡು ಒಕ್ಕೂಟವಾದಿ ಸ್ವರೂಪವನ್ನು ಧಿಕ್ಕರಿಸಿದೆ ಕರ್ನಾಟಕ ಪ್ರಾಂತ ರೈತ ಸಂಘ ಆರೋಪಿಸಿದೆ.
Recommended Video
ದೇಶದ ರೈತರು ಹಾಗೂ ಕೂಲಿಕಾರರು, ಕಾರ್ಮಿಕರು, ಸಣ್ಣ ಕೈಗಾರಿಕೆಗಳು ಹಾಗೂ ವಿದ್ಯುತ್ ಗ್ರಾಹಕರ ಮೇಲೆ ಕಾರ್ಪೊರೇಟ್ ಕಂಪನಿಗಳ ಲೂಟಿಗಾಗಿ, ಮತ್ತೊಂದು ಗಂಭೀರ ಧಾಳಿ ಮಾಡಲು, ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ -2020 ನ್ನು ಜಾರಿಗೊಳಿಸಲು ಕ್ರಮವಹಿಸಿದೆ ಎಂದು ಕರ್ನಾಟಕ ಪ್ರಾಂತೀಯ ರೈತ ಸಂಘ ಆರೋಪ ಮಾಡಿದೆ.
ಎಲ್ಲಾ ರಾಜ್ಯ ಸರಕಾರಗಳು ಕೂಡಲೇ ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ -2020 ಜಾರಿಗೆ ಸೂಕ್ತ ಕ್ರಮ ವಹಿಸುವಂತೆ ಒತ್ತಡವನ್ನು ಹೇರಲಾಗುತ್ತಿದೆ. ಈ ಮಸೂದೆ ಜಾರಿ ಮಾಡದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ರೈತ ಸಂಘ ಆಗ್ರಹಿಸಿದೆ.

ಇದು ಜಾರಿಯಾದರೇ, ವಿದ್ಯುತ್ ಉತ್ಪಾದನೆ, ಸರಬರಾಜು ಮತ್ತು ವಿತರಣೆಗಳ ಕಂಪನಿಗಳು ಹಾಗೂ ಅವುಗಳ ಲಕ್ಷಾಂತರ ಕೋಟಿ ರೂಗಳ ಆಸ್ತಿ- ಪಾಸ್ತಿಗಳು, ಖಾಸಗೀ ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಕೈ ವಶವಾಗಲಿವೆ.
ಉಚಿತ ವಿದ್ಯುತ್ ಯೋಜನೆಗೆ ಸಂಪೂರ್ಣ ಕತ್ತರಿ
ಅದೇ ರೀತಿ, ರೈತರ ದಶಲಕ್ಷಾಂತರ ಕೃಷಿ ಪಂಪ್ ಸೆಟ್ ಗಳಿಗೆ ಮತ್ತು ಭಾಗ್ಯ ಜ್ಯೋತಿ, ಕುಠೀರ ಜ್ಯೋತಿ ಗಳಿಗೆ ಹಾಗೂ ಸಣ್ಣ ಕೈಗಾರಿಕೆಗಳಿಗೆ ಒದಗಿಸಲಾಗುತ್ತಿರುವ ಉಚಿತ/ ಸಹಾಯ ಧನದ ವಿದ್ಯುತ್ ಗೆ ಸಂಪೂರ್ಣ ಕತ್ತರಿ ಬೀಳಲಿದೆ.
ಕಾರ್ಪೊರೇಟ್ ಕಂಪನಿಗಳ ಕೈ ವಶವಾದ ಕೂಡಲೇ, ರಾಜ್ಯದ ಕೋಟ್ಯಾಂತರ ಗ್ರಾಹಕರ ವ್ಯಾಪಕ ಲೂಟಿಗೂ ಇದು ಅನುಕೂಲ ಮಾಡಿಕೊಡಲಿದೆ. ಆದ್ದರಿಂದ, ಈ ಮಸೂದೆಯು ಸ್ಪಷ್ಟವಾಗಿ, ರಾಜ್ಯದ ಅಭಿವೃದ್ದಿ ಹಾಗೂ ಬಡವರ ವಿರೋಧಿಯಾಗಿದೆ.

ಕರ್ನಾಟಕ ಸರಕಾರ ಸದರಿ ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ - 2020 ನ್ನು ಯಾವುದೇ ಕಾರಣಕ್ಕೆ ರಾಜ್ಯದಲ್ಲಿ ಜಾರಿಗೆ ತರಬಾರದು ಮತ್ತು ವಿದ್ಯುತ್ ರಂಗವನ್ನು ಖಾಸಗೀಕರಣ ಮಾಡಲು ಕ್ರಮವಹಿಸಬಾರದೆಂದು ಕರ್ನಾಟಕ ಪ್ರಾಂತ ರೈತ ಸಂಘ ಮುಖ್ಯಮಂತ್ರಿಗಳನ್ನು ಬಲವಾಗಿ ಒತ್ತಾಯಿಸುತ್ತದೆ. ಅದೇ ರೀತಿ, ಕಾರ್ಪೊರೇಟ್ ಕಂಪನಿಗಳ ಪರವಾಗಿ ರೂಪಿಸಲಾಗಿರುವ ಸದರಿ ಮಸೂದೆಯನ್ನು ಕೇಂದ್ರ ಸರಕಾರ ತಕ್ಷಣವೇ ವಾಪಾಸು ಪಡೆಯಬೇಕೆಂದು ರೈತ ಸಂಘ ಒತ್ತಾಯಿಸಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications