'ರೈತರ ಮನೆ ಬಾಗಿಲಿಗೆ ಸೇವೆ ನೀಡುವ ವೆಬ್ ಸೈಟ್'
ಬೆಂಗಳೂರು, ಮಾ. 4: ಕೃಷಿ ಇಲಾಖೆಯು ರೈತರ ಮನೆ ಬಾಗಿಲಿಗೆ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಆಧುನಿಕ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದಿಂದ ಕೂಡಿರುವ 'ರೈತ ಮಿತ್ರ' ವೆಬ್ ಸೈಟ್ ಅನ್ನು ಲೋಕಾರ್ಪಣೆ ಮಾಡಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಕೃಷಿ ಇಲಾಖೆಯ ನವೀಕೃತ ರೈತ ಸ್ನೇಹಿ ವೆಬ್ ಸೈಟ್ (http://raitamitra.kar.nic.in/KAN/index.asp)ಅನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಕೃಷ್ಣ ಭೈರೇಗೌಡ, ಮುಂದಿನ ದಿನಗಳಲ್ಲಿ ರೈತರೇ ತಮ್ಮ ಯಶೋಗಾಥೆಗಳನ್ನು ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬಹುದು. ರೈತ ಸ್ನೇಹಿ- ಪ್ರಶ್ನೋತ್ತರಗಳಿಗೆ ಇ-ವೇದಿಕೆ, ರೈತರು ಎದುರಿಸುವ ತಾಂತ್ರಿಕ ಸಮಸ್ಯೆಗಳಿಗೆ ಪ್ರಗತಿಪರ ರೈತರಲ್ಲೇ ಲಭ್ಯವಿರುವ ಪರಿಹಾರಗಳನ್ನು ವೆಬ್ ಸೈಟ್ ನಲ್ಲಿ ಹಂಚಿಕೊಳ್ಳಲು ಅವಕಾಶ ಕಲ್ಪಿಸುವಂತೆ ಸೂಚಿಸಿದರು.
ರಾಜ್ಯದಲ್ಲಿ ಪ್ರಗತಿಪರ ರೈತರು ಅನೇಕ ನೂತನ ಪದ್ಧತಿಗಳನ್ನು ಆವಿಷ್ಕರಿಸಿ ಅನುಸರಿಸುತ್ತಿದ್ದಾರೆ. ಇವುಗಳ ಲಾಭದಾಯಕತೆ ಯನ್ನು ಇತರ ರೈತರಿಗೂ ವಿಸ್ತರಿಸಲು ಈ ವೆಬ್ ಸೈಟ್ ಅತ್ಯಂತ ಸೂಕ್ತ ಸಾಧನ ಎಂದು ಕೃಷ್ಣಭೈರೇಗೌಡ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ರೈತ ಮಿತ್ರ ವೆಬ್ ಸೈಟ್ ನಲ್ಲಿ ಮಾರುಕಟ್ಟೆ ಮಾಹಿತಿ, ತಾಂತ್ರಿಕತೆ, ಹವಾಮಾನ ಮುನ್ಸೂಚನೆ, ಪೀಡೆ ಸರ್ವೇಕ್ಷಣೆ, ಕುಂದುಕೊರತೆಗಳ ನಿರ್ವಹಣೆ, ಟೆಂಡರ್ ಅಧಿಸೂಚನೆ ಇತ್ಯಾದಿಗಳ ಮಾಹಿತಿಯನ್ನು ಅತ್ಯಂತ ವೇಗದಲ್ಲಿ, ಸಕಾಲದಲ್ಲಿ ರೈತ ಸಮುದಾಯಕ್ಕೆ ದೊರೆಯಲಿದೆ.ರೈತಸ್ನೇಹಿ ಪ್ರಶ್ನೋತ್ತರ ಮಾಲಿಕೆ ಮೂಲಕ ತಮ್ಮ ಸಮಸ್ಯೆಗಳನ್ನು ಪ್ರಶ್ನೆಗಳನ್ನು ಕೇಳಬಹುದಾಗಿದೆ. ಜತೆಗೆ ರೈತರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ: 1800 425 3553 ಸಹಕಾರಿಯಾಗಿದೆ.
ಕೃಷಿ ಸಂಬಂಧಿತ ಪ್ರಶ್ನೆಗಳಿಗೆ ಇ- ವೇದಿಕೆಯನ್ನು ಕಲ್ಪಿಸಲಾಗಿದೆ. ಈ ವೇದಿಕೆಯಲ್ಲಿ ಕನ್ನಡ-ಆಂಗ್ಲ ಭಾಷೆಯಲ್ಲಿ, ರೈತರು, ಸಾರ್ವಜನಿಕರು ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಲು ಹಾಗೂ ಸೂಕ್ತ ಉತ್ತರಗಳನ್ನು ಸಂಚಾರಿ ದೂರವಾಣಿ ಮತ್ತು ಇ-ಮೇಲ್ ಮುಖಾಂತರ ಪಡೆಯಲು ವೇದಿಕೆ ರೂಪಿಸಲಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications