ರಾಷ್ಟ್ರಮಟ್ಟದಲ್ಲಿ ರೈತಕ್ರಾಂತಿ ಯಾತ್ರೆ ನಡೆಸಲು ರೈತ ಸಂಘ, ಹಸಿರು ಸೇನೆ ನಿರ್ಧಾರ
ಮೈಸೂರು, ಸೆಪ್ಟೆಂಬರ್ 17 : ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ, ಉದ್ಯೋಗ, ಶಿಕ್ಷಣ ಖಾತರಿ ಯೋಜನೆ ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೆ.23ರಿಂದ ಅ.2ರವರೆಗೆ ರಾಷ್ಟ್ರಮಟ್ಟದಲ್ಲಿ ರೈತಕ್ರಾಂತಿ ಯಾತ್ರೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನಿರ್ಧರಿಸಿವೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೆ.ಟಿ.ಗಂಗಾಧರ್ ಅವರು, ರೈತರ ಬೆಳೆಗಳಿಗೆ ಮಿನಿಮಮ್ ಸಪೋರ್ಟ್ ಪ್ರೈಸ್(ಕನಿಷ್ಠ ಬೆಂಬಲ ಬೆಲೆ), ಸಿಟುಸಿ ಸೂತ ಜಾರಿ, ಮುಖ್ಯವಾಗಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಸೆ.23ರಿಂದ ಅ.2ರವರೆಗೆ ಬೃಹತ್ ರೈತಕ್ರಾಂತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ, ಹರಿಯಾಣ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ವಿವಿಧ ರೈತ ಸಂಘಟನೆಗಳೆಲ್ಲವೂ ಒಟ್ಟಾಗಿ ನಡೆಸುತ್ತಿರುವ ಈ ಯಾತ್ರೆ ಹರಿದ್ವಾರದಿಂದ ದಿಲ್ಲಿಯ ಕಿಸಾನ್ ಘಾಟ್ ವರೆಗೂ ನಡೆಯಲಿದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಪ್ಪು ನೀತಿಯಿಂದಾಗಿ ರೈತರು ಸಾಲಕ್ಕೆ ಸಿಲುಕಬೇಕಿದೆಯೇ ವಿನಃ, ರೈತರು ಯಾವುದೇ ಕಾರಣಕ್ಕೂ ಸಾಲಗಾರರಾಗುವುದಿಲ್ಲ. ಈಗ ಜಾರಿಗೊಳಿಸಿರುವ ಬೆಳೆವಿಮೆ ಪದ್ಧತಿ ಖಾಸಗಿ ನಿರ್ವಹಣೆಯಲ್ಲಿರುವುದರಿಂದ ಪರಿಹಾರ ದೊರೆಯುವುದು ವಿಳಂಬವಾಗುತ್ತಿದೆ. ಸರ್ಕಾರವೇ ಇದರ ಹೊಣೆ ಹೊರಬೇಕು ಎಂದರು.
ರಾಜ್ಯ ಸರ್ಕಾರ ಸಾಲ ಮನ್ನಾ ಘೋಷಿಸಿದ್ದರೂ ಬ್ಯಾಂಕ್ ಗಳು ರೈತರಿಗೆ ನೋಟಿಸ್ ನೀಡುತ್ತಿವೆ. ಪರಿಣಾಮ ಮಂಡ್ಯದಲ್ಲಿಯೇ ಕಳೆದ 3 ದಿನಗಳಿಂದ ಮೂವರು ರೈತರು ಸಾವನ್ನಪ್ಪಿದ್ದಾರೆ. ರೈತರಿಗೆ ನೋಟಿಸ್ ನೀಡದಂತೆ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟ್ಟಪ್ಪಣೆ ಮಾಡಬೇಕಿದೆ.
ಆ ಮೂಲಕ ತಮ್ಮದು ಗಾಳಿ ಮಾತಲ್ಲ ಎಂಬುದನ್ನು ತೋರಿಸಿಕೊಡಬೇಕಿದೆ ಎಂದು ಒತ್ತಾಯಿಸಿದರು.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications