ರಾಷ್ಟ್ರಮಟ್ಟದಲ್ಲಿ ರೈತಕ್ರಾಂತಿ ಯಾತ್ರೆ ನಡೆಸಲು ರೈತ ಸಂಘ, ಹಸಿರು ಸೇನೆ ನಿರ್ಧಾರ
ಮೈಸೂರು, ಸೆಪ್ಟೆಂಬರ್ 17 : ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ, ಉದ್ಯೋಗ, ಶಿಕ್ಷಣ ಖಾತರಿ ಯೋಜನೆ ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೆ.23ರಿಂದ ಅ.2ರವರೆಗೆ ರಾಷ್ಟ್ರಮಟ್ಟದಲ್ಲಿ ರೈತಕ್ರಾಂತಿ ಯಾತ್ರೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನಿರ್ಧರಿಸಿವೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೆ.ಟಿ.ಗಂಗಾಧರ್ ಅವರು, ರೈತರ ಬೆಳೆಗಳಿಗೆ ಮಿನಿಮಮ್ ಸಪೋರ್ಟ್ ಪ್ರೈಸ್(ಕನಿಷ್ಠ ಬೆಂಬಲ ಬೆಲೆ), ಸಿಟುಸಿ ಸೂತ ಜಾರಿ, ಮುಖ್ಯವಾಗಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಸೆ.23ರಿಂದ ಅ.2ರವರೆಗೆ ಬೃಹತ್ ರೈತಕ್ರಾಂತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ, ಹರಿಯಾಣ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ವಿವಿಧ ರೈತ ಸಂಘಟನೆಗಳೆಲ್ಲವೂ ಒಟ್ಟಾಗಿ ನಡೆಸುತ್ತಿರುವ ಈ ಯಾತ್ರೆ ಹರಿದ್ವಾರದಿಂದ ದಿಲ್ಲಿಯ ಕಿಸಾನ್ ಘಾಟ್ ವರೆಗೂ ನಡೆಯಲಿದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಪ್ಪು ನೀತಿಯಿಂದಾಗಿ ರೈತರು ಸಾಲಕ್ಕೆ ಸಿಲುಕಬೇಕಿದೆಯೇ ವಿನಃ, ರೈತರು ಯಾವುದೇ ಕಾರಣಕ್ಕೂ ಸಾಲಗಾರರಾಗುವುದಿಲ್ಲ. ಈಗ ಜಾರಿಗೊಳಿಸಿರುವ ಬೆಳೆವಿಮೆ ಪದ್ಧತಿ ಖಾಸಗಿ ನಿರ್ವಹಣೆಯಲ್ಲಿರುವುದರಿಂದ ಪರಿಹಾರ ದೊರೆಯುವುದು ವಿಳಂಬವಾಗುತ್ತಿದೆ. ಸರ್ಕಾರವೇ ಇದರ ಹೊಣೆ ಹೊರಬೇಕು ಎಂದರು.
ರಾಜ್ಯ ಸರ್ಕಾರ ಸಾಲ ಮನ್ನಾ ಘೋಷಿಸಿದ್ದರೂ ಬ್ಯಾಂಕ್ ಗಳು ರೈತರಿಗೆ ನೋಟಿಸ್ ನೀಡುತ್ತಿವೆ. ಪರಿಣಾಮ ಮಂಡ್ಯದಲ್ಲಿಯೇ ಕಳೆದ 3 ದಿನಗಳಿಂದ ಮೂವರು ರೈತರು ಸಾವನ್ನಪ್ಪಿದ್ದಾರೆ. ರೈತರಿಗೆ ನೋಟಿಸ್ ನೀಡದಂತೆ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟ್ಟಪ್ಪಣೆ ಮಾಡಬೇಕಿದೆ.
ಆ ಮೂಲಕ ತಮ್ಮದು ಗಾಳಿ ಮಾತಲ್ಲ ಎಂಬುದನ್ನು ತೋರಿಸಿಕೊಡಬೇಕಿದೆ ಎಂದು ಒತ್ತಾಯಿಸಿದರು.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ











Click it and Unblock the Notifications