ಚಿತ್ರದುರ್ಗದ ಸುಮಂಗಲಮ್ಮನವರಿಗೆ ಕೃಷಿ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ
ಚಿತ್ರದುರ್ಗ, ಅಕ್ಟೋಬರ್ 28: 2020ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ಈ ಬಾರಿ 65 ಮಂದಿ ಸಾಧಕರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ಕ್ಷೇತ್ರದಿಂದ ಚಿತ್ರದುರ್ಗದ ಎಸ್.ವಿ. ಸುಮಂಗಲಮ್ಮ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ. ಕೆರೆ ಗ್ರಾಮದ 68 ವರ್ಷದ ಸುಮಂಗಲಮ್ಮ ಅವರ 40 ವರ್ಷದ ಕೃಷಿ ಕ್ಷೇತ್ರದ ಸಾಧನೆ ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಇದೇ ನವೆಂಬರ್ 7ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಬಳ್ಳಾರಿಯಿಂದ ಬೆಂಗಳೂರಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಮೀಪ ಈ ಬರಪೀಡಿತ ಪ್ರದೇಶವಾದ ಬಿಜಿ ಕೆರೆ ಗ್ರಾಮವಿದೆ. ಇಲ್ಲೇ ಸುಮಂಗಲಮ್ಮ ಅವರ "ವಸುಂಧರ ಕೃಷಿ ಕ್ಷೇತ್ರವು" ತೆರೆದುಕೊಂಡಿದೆ. ಸುಮಾರು 80 ಎಕರೆ ಕೃಷಿ ಪ್ರದೇಶದಲ್ಲಿ 20 ರೀತಿಯ ವಿವಿಧ ಸಸ್ಯ ವರ್ಗದ ತಳಿಗಳಿದ್ದು, ತೆಂಗು, ಹುಣಸೆ ಮರಗಳು, ರೇಷ್ಮೆ ಮತ್ತು ರೇಷ್ಮೆ ಹುಳುಗಳ ಸಾಕಾಣಿಕೆ ಹಾಗೂ ಕೃಷಿ ಅರಣ್ಯ ಬೆಳೆಗಳಾದ ಗ್ಲೈರಿಸಿಡಿಯಾ, ಸೂಬಾಬುಲ್, ಹೆಬ್ಬೆವು, ಶ್ರೀಗಂಧ, ಬಿದಿರು, ಮುಂತಾದ ಬೆಳೆಗಳನ್ನು ಸುಮಂಗಲಮ್ಮ ಅವರು ಬೆಳೆಸಿದ್ದಾರೆ.

ಅಷ್ಟೇ ಅಲ್ಲ, 60ಕ್ಕೂ ಹೆಚ್ಚು ಸ್ಥಳೀಯ ಕೃಷಿ ಕಾರ್ಮಿಕರಿಗೆ ಕೆಲಸ ನೀಡಿದ್ದಾರೆ. ಕಳೆದ 40 ವರ್ಷಗಳಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು "ಕರ್ನಾಟಕ ರಾಜ್ಯದಲ್ಲಿ ಟ್ರ್ಯಾಕ್ಟರ್ ಚಾಲನೆಯಲ್ಲಿ ಪರವಾನಗಿ ಪಡೆದ ಪ್ರಥಮ ಮಹಿಳೆ" ಎಂಬ ಹೆಗ್ಗಳಿಕೆಯೂ ಇವರಿಗಿದೆ.
ಎಲ್.ಎಮ್. ಪಟೇಲ್ ಸಂಸ್ಥೆಯಿಂದ 2010ನೇ ಸಾಲಿನ "ಅತ್ಯುತ್ತಮ ರೇಷ್ಮೆ ಬೆಳೆಗಾರ" ರಾಷ್ಟ್ರೀಯ ಪ್ರಶಸ್ತಿ, 1995-96ನೇ ಸಾಲಿನ ರೇಷ್ಮೆ ಬೆಳೆ ಅಭಿವೃದ್ಧಿಯಲ್ಲಿ ಉತ್ತಮ ಮಹಿಳಾ ಉದ್ಯಮಶೀಲತೆ ರಾಷ್ಟ್ರೀಯ ಪ್ರಶಸ್ತಿ, ಕೇಂದ್ರೀಯ ರೇಷ್ಮೆ ಮಂಡಳಿ ಪ್ರಶಸ್ತಿಯೂ ಲಭಿಸಿದೆ. 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃಷಿ ಸಮುದಾಯಕ್ಕೆ ಉತ್ತಮ ಪ್ರೇರಕರಾಗಿ ಆಯ್ಕೆಯಾಗಿದ್ದರು. 2007-08 ನೇ ಸಾಲಿನ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ಸಂಸ್ಥೆಯಿಂದ ರೈತರ ಒಕ್ಕೂಟದ ಅಭಿವೃದ್ಧಿಗೆ ಉತ್ತಮ ಸಾಧನೆ ಪ್ರಶಸ್ತಿಯನ್ನೂ ಪಡೆದಿದ್ದಾರೆ.

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರು ಸುಮಂಗಲಮ್ಮ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications