ಕೃಷಿ ಸುಧಾರಣೆ ಅವಶ್ಯಕ; ಕಾಯ್ದೆಗಳು ರೈತರಿಗೆ ಆಯ್ಕೆಯಾಗಲಿವೆ; ಮೋದಿ
ನವದೆಹಲಿ, ಫೆಬ್ರುವರಿ 10: ಕೃಷಿ ಸುಧಾರಣೆ ದೇಶಕ್ಕೆ ಅತ್ಯವಶ್ಯಕ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಈ ಹೊಸ ಕೃಷಿ ಕಾಯ್ದೆಗಳು ರೈತರಿಗೆ ಹೊಸ ಸವಾಲುಗಳನ್ನು ಎದುರಿಸಲು ಆಯ್ಕೆಯಾಗಲಿವೆ ಎಂದು ಕೃಷಿ ಕಾಯ್ದೆಗಳನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.
ಬುಧವಾರ ಲೋಕಸಭೆಯಲ್ಲಿ ಕೃಷಿ ಕಾಯ್ದೆಗಳ ಕುರಿತು ಪ್ರಸ್ತಾಪ ಮಾಡಿದ ಮೋದಿ, "ಕಾಯ್ದೆಗಳನ್ನು ಜಾರಿಗೊಳಿಸಿದ ನಂತರ ಮಂಡಿಗಳನ್ನು ಮುಚ್ಚುವುದಿಲ್ಲ ಹಾಗೂ ಕನಿಷ್ಠ ಬೆಂಬಲ ಬೆಲೆ ಮೇಲೂ ಯಾವುದೇ ಪರಿಣಾಮವಾಗುವುದಿಲ್ಲ. ಈ ಮೂರು ಕಾಯ್ದೆಗಳು ದೇಶದ ಕೃಷಿ ಕ್ಷೇತ್ರ ಸುಧಾರಣೆಗೆ ಸರ್ಕಾರದ ಪ್ರಾಮಾಣಿಕ ಪ್ರಯತ್ನವಾಗಿವೆ" ಎಂದು ಭರವಸೆ ನೀಡಿದ್ದಾರೆ.
ಕೃಷಿ ಕ್ಷೇತ್ರ ಬದಲಾಗುತ್ತಿದೆ. ಹೊಸ ಸವಾಲುಗಳೂ ಎದುರಾಗುತ್ತಿವೆ. ಈ ಸವಾಲುಗಳನ್ನು ಎದುರಿಸಲು ಪ್ರಯತ್ನ ಮಾಡಬೇಕಿದೆ. ಆದರೆ ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ ಎಂದು ಆರೋಪಿಸಿದ್ದಾರೆ. ಹೋರಾಟನಿರತ ರೈತರ ಭಾವನೆಗಳನ್ನು ಸರ್ಕಾರ ಗೌರವಿಸುತ್ತದೆ. ಆದ್ದರಿಂದಲೇ ಕೃಷಿ ಸಚಿವರು ರೈತರೊಂದಿಗೆ ಸರಣಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಕೃಷಿ ಕಾಯ್ದೆಗಳ ಕುರಿತು ಮೋದಿ ಮಾತು ಶುರು ಮಾಡುತ್ತಿದ್ದಂತೆಯೇ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಸಭೆಯಿಂದ ಹೊರನಡೆದ ಪ್ರಸಂಗವೂ ನಡೆಯಿತು. ಪದೇ ಪದೇ ಮೋದಿ ಮಾತಿಗೆ ಅಡ್ಡಿಪಡಿಸುತ್ತಿದ್ದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕುರಿತು ಮಾತನಾಡಿ, "ಅಧೀರ್ ರಂಜನ್ ಜೀ, ಇದು ಹೆಚ್ಚೆನಿಸುತ್ತಿದೆ. ನಾನು ನಿಮ್ಮನ್ನು ಗೌರವಿಸುತ್ತೇನೆ. ಬಂಗಾಳದಲ್ಲಿ ನಿಮಗೆ ಟಿಎಂಸಿಗಿಂತ ಹೆಚ್ಚಿನ ಪ್ರಚಾರ ಸಿಗುತ್ತದೆ ಯೋಚಿಸಬೇಡಿ. ಏಕೆ ಹೀಗೆ ಮಾಡುತ್ತಿದ್ದೀರ" ಎಂದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications