ಮಲ್ಟಿಪ್ಲೆಕ್ಸ್ ನಲ್ಲಿ ಎಳೆನೀರು ಮಾರಾಟಕ್ಕೆ ಬಿಜೆಪಿ ಆಗ್ರಹ
ಮಲ್ಟಿಪ್ಲೆಕ್ಸ್ ಹಾಗೂ ಚಲನಚಿತ್ರ ಮಂದಿರಗಳಲ್ಲಿ ಕೂಲ್ ಡ್ರಿಂಕ್ಸ್ ಬದಲಿಗೆ ಎಳೆನೀರು ಮಾರಾಟ ಮಾಡುವಂತೆ ಬಿಜೆಪಿ ಶಾಸಕ ಎಂಕೆ ಪ್ರಾಣೇಶ್ ಅವರು ವಿಧಾನಪರಿಷತ್ ನಲ್ಲಿ ಇಂದು (ಮಾರ್ಚ್ 16) ಆಗ್ರಹಿಸಿದ್ದಾರೆ.
ಬೆಂಗಳೂರು, ಮಾರ್ಚ್ 16: ಮಲ್ಟಿಪ್ಲೆಕ್ಸ್ ಹಾಗೂ ಚಲನಚಿತ್ರ ಮಂದಿರಗಳಲ್ಲಿ ಕೂಲ್ ಡ್ರಿಂಕ್ಸ್ ಬದಲಿಗೆ ಎಳೆನೀರು ಮಾರಾಟ ಮಾಡುವಂತೆ ಬಿಜೆಪಿ ಶಾಸಕ ಎಂಕೆ ಪ್ರಾಣೇಶ್ ಅವರು ವಿಧಾನಪರಿಷತ್ ನಲ್ಲಿ ಇಂದು (ಮಾರ್ಚ್ 16) ಆಗ್ರಹಿಸಿದ್ದಾರೆ.
ಇದಕ್ಕೆ ಸ್ಪಂದಿಸಿದ ಸಚಿವ ಈಶ್ವರ್ ಖಂಡ್ರೆ ರೈತರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅರ್ಹ ಪದಾರ್ಥಗಳ ಜೊತೆಗೆ ಎಳೆನೀರು ಮಾರಾಟ ಮಾಡಲು ಅವಕಾಶ ನೀಡುವ ಭರವಸೆ ನೀಡಿದ್ದಾರೆ.

ರಾಜ್ಯದ ತೆಂಗು ಬೆಳೆಗಾರರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮಲ್ಟಿಪ್ಲೆಕ್ಸ್ ಮತ್ತು ಚಲನಚಿತ್ರ ಮಂದಿರಗಳಲ್ಲಿ ಎಳನೀರು ಮಾರಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಲಾಗುವುದು ಎಂದು ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮಿಗಳ ರಾಜ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ತಿಳಿಸಿದರು.
ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಗುರುವಾರ ನಡೆದ ಅಧಿವೇಶನದಲ್ಲಿ ಶಾಸಕ ಎಂ.ಕೆ. ಪ್ರಾಣೇಶ್ ಅವರ ಪ್ರಶ್ನೆಗೆ ನಗರಾಭಿವೃದ್ಧಿ ಮತ್ತು ಹಜ್ ಸಚಿವ ಆರ್. ರೋಷನ್ ಬೇಗ್ ಅವರ ಅನುಪಸ್ಥಿತಿಯಲ್ಲಿ ಈಶ್ವರ ಖಂಡ್ರೆ ಅವರು ಉತ್ತರಿಸಿದರು.
ಮಲ್ಟಿಪ್ಲೆಕ್ಸ್ ಮತ್ತು ಚಲನಚಿತ್ರ ಮಂದಿರಗಳಲ್ಲಿ ಕೂಲ್ಡ್ ಡ್ರಿಂಕ್ಸ್ ಮಾರಾಟ ರದ್ದುಪಡಿಸಲು ಈಗಿನ ನಿಯಮಗಳಲ್ಲಿ ಅವಕಾಶವಿರುವುದಿಲ್ಲ, ಅರ್ಹ ಪದಾರ್ಥಗಳ ಜೊತೆಗೆ ಎಳನೀರನ್ನು ಮಾರಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
More From
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications