ನದಿ ನೀರು ಯಾವ ಸರ್ಕಾರದ ಸ್ವತ್ತೂ ಅಲ್ಲ : ರಾಜ್ಯಪಾಲ ವಜುಭಾಯಿ ವಾಲಾ
ಬೆಂಗಳೂರು, ನವೆಂಬರ್ 15 : ಬೆಂಗಳೂರು ಕೃಷಿ ವಿವಿ ಇಂದು (ನವೆಂಬರ್ 16) ರಂದು ಜಿ.ಕೆ.ವಿ.ಕೆ ಯಲ್ಲಿ ಆಯೋಜಿಸಿದ್ದ ಕೃಷಿ ಮೇಳ -2017 ಉದ್ಘಾಟಿಸಿ ಮಾತನಾಡಿದ ವಜುಭಾಯಿ ವಾಲಾ ಅವರು ರೈತರ ಗುಣಗಾನ ಮಾಡುವ ಜೊತೆಗೆ 'ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀರಿನ ವಿಷಯದಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು' ಎಂದರು.
In Pics: ಜಿಕೆವಿಕೆಯಲ್ಲಿ ಕೃಷಿ ಮೇಳದಲ್ಲಿ ಹಳ್ಳಿ ಸೊಗಡು, ಸೊಬಗು
'ನದಿಗಳು ಆಡಳಿತಾತ್ಮಕವಾಗಿ ಕೇಂದ್ರ ಸರ್ಕಾರದ ಹಿಡಿದಲ್ಲಿರಬಹುದು ಆದರೆ ಸತ್ಯದಲ್ಲಿ ನದಿ ನೀರಿನ ಮೇಲೆ ಯಾರ ಹಕ್ಕೂ ಇಲ್ಲ, ಹಕ್ಕಿರುವುದು ರೈತರಿಗೆ ಮಾತ್ರ' ಎಂದರು. ವಜುಭಾಯಿ ವಾಲಾ ಅವರ ಈ ಮಾತಿಗೆ ಭಾರಿ ಕರತಾಡನ ಮಾಡುವ ಮೂಲಕ ನೆರದಿದ್ದವರು ಬೆಂಬಲ ಸೂಚಿಸಿದರು.

ಪ್ರತಿ ವರ್ಷ ದೇಶಾದ್ಯಂತ 2000 ಟಿ.ಎಂ.ಸಿ ನೀರು ಸಮುದ್ರ ಸೇರುತ್ತಿದೆ ಇದರಲ್ಲಿ ಕಾಲು ಭಾಗವನ್ನಾದರು ರೈತರಿಗಾಗಿ ಉಪಯೋಗಮಾಡಿಕೊಳ್ಳುವಂತೆ ಕೇಂದ್ರ ಯೋಜನೆ ರೂಪಿಸಬೇಕಿದೆ ಎಂದು ಅವರು ಪರೋಕ್ಷವಾಗಿ ಕೇಂದ್ರವು ನೀರಾವರಿ ಯೋಜನೆಗಳ ಬಗ್ಗೆ ತೋರುತ್ತಿರುವ ನಿರ್ಲಕ್ಷವನ್ನು ಟೀಕಿಸಿದರು. ಕೇಂದ್ರ ಸರ್ಕಾರ ಈ ಹಿಂದೆ ನದಿ ಜೋಡಣೆ ವಿಷಯ ಪ್ರಸ್ತಾಪಿಸಿತ್ತಾದರೆ ಆ ನಂತರ ಅದು ಮೂಲೆಗುಂಪಾದುದನ್ನು ಇಲ್ಲಿ ನೆನೆಯಬಹುದು.
ಕಾವೇರಿ ವಿವಾದವನ್ನೂ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಅವರು, ತಮಿಳುನಾಡು ಮತ್ತು ಕರ್ನಾಟಕದ ರೈತರಿಗೆ ಪ್ರತಿ ವರ್ಷ ನೀರಿನ ವಿಷಯದಲ್ಲಿ ವಿವಾದವಾಗುವುದು ನಡೆಯುತ್ತಲೆ ಬಂದಿದೆ. ಆದರೆ ಯಾವುದೇ ವಿಷಯವನ್ನಾಗಲಿ ಮಾತನಾಡಿಯೇ ಬಗೆಹರಿಸಿಕೊಳ್ಳಬೇಕು. ವಿವಾದಗಳಿಂದ ಉಪಯೋಗವಿಲ್ಲ ಎಂದು ಕಿವಿಮಾತು ಹೇಳಿದರು.

ಕರ್ನಾಟಕದ ರೈತನಾಗಲಿ ತಮಿಳುನಾಡಿದ ರೈತನಾಗಲಿ ಎಲ್ಲರೂ ಒಂದೆ. ಎಲ್ಲ ರೈತರೂ ದೇಶದ ರೈತರೆ ಅವರ ಬದುಕು ಮುಖ್ಯ ಎಂದು ಅವರು ಹೇಳಿದರು.
ಮಾತಿನ ಮಧ್ಯೆ ಇಸ್ರೇಲ್ ದೇಶದ ಉದಾಹರಣೆ ನೀಡಿದ ಅವರು, "ಇಸ್ರೇಲ್ ನಲ್ಲಿ ವರ್ಷಕ್ಕೆ ಕೆಲವೇ ಸೆಂಟಿಮೀಟರ್ ಮಳೆ ಆಗುತ್ತದೆ ಆದರೆ ಅದರಲ್ಲಿಯೇ ಅಲ್ಲಿನ ಜನ ಅತ್ಯುತ್ತಮವಾಗಿ ಕೃಷಿ ಮಾಡುತ್ತಾರೆ. ಅತ್ಯುತ್ತಮ ತಂತ್ರಜ್ಞಾನವನ್ನು ಅವರು ಕೃಷಿಯಲ್ಲಿ ಬಳಸಿಕೊಳ್ಳುತ್ತಾರೆ. ಬಿದ್ದ ಮಳೆ ನೀರನ್ನು ಪೋಲು ಮಾಡುವುದಿಲ್ಲ, ಹನಿ ನೀರಾವರಿ ಪದ್ಧತಿ ಅಲ್ಲಿ ಖಡ್ಡಾಯ, ನಮ್ಮಲ್ಲೂ ಇಂತಹಾ ವ್ಯವಸ್ಥೆ ಬರಬೇಕು' ಎಂದರು.
ನೀರಿನ ಮಹತ್ವದ ಬಗ್ಗೆ ರೈತರಿಗೆ ಪಾಠ ಮಾಡಿದ ವಜುಭಾಯಿ ವಾಲಾ, ನೀರು ಅತ್ಯಮೂಲ್ಯ ಅದನ್ನು ಜವಾಬ್ದಾರಿಹೀನವಾಗಿ ಬಳಸಬೇಡಿ, ಹಾಗೆ ಮಾಡಿದ್ದಲ್ಲಿ ಬದುಕು ಕಳೆದುಕೊಳ್ಳು ಸ್ಥಿತಿ ಉದ್ಭವವಾಗುತ್ತದೆ' ಎಂದು ಅವರು ಎಚ್ಚರಿಸಿದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications