ರಾಜ್ಯದಲ್ಲಿ ಬರ: ನೆರವಿಗಾಗಿ ಕೇಂದ್ರಕ್ಕೆ ಸಚಿವ ದೇಶಪಾಂಡೆ ಪತ್ರ
ಬೆಂಗಳೂರು, ನವೆಂಬರ್ 03: ರಾಜ್ಯದಲ್ಲಿ ಉಲ್ಬಣಿಸಿರುವ ಬರ ಪರಿಸ್ಥಿತಿ ಬಗ್ಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದು ನೆರವು ನೀಡುವಂತೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ತೀವ್ರ ಬರಗಾಲ ಇದ್ದು ರಾಜ್ಯದ ಬಹುತೇಕ ಭಾಗಗಳಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ಆದಷ್ಟು ಬೇಗ ಎನ್.ಡಿ.ಆರ್.ಎಫ್ ವತಿಯಿಂದ ಪರಿಹಾರ ಬಿಡುಗಡೆ ಮಾಡಬೇಕು ಎಂದು ದೇಶಪಾಂಡೆ ಅವರು ಕೇಂದ್ರವನ್ನು ಪತ್ರಮುಖೇನ ಕೋರಿದ್ದಾರೆ.

ರಾಜ್ಯದಲ್ಲಿ ಹಿಂಗಾರು ಕೈಕೊಟ್ಟಿದ್ದು ಇಡೀ ರಾಜ್ಯದಲ್ಲಿ ಶೇಕಡ 49ರಷ್ಟು ಮಳೆ ಕೊರತೆ ಎದುರಾಗಿದೆ. ಉತ್ತರ ಒಳನಾಡಿನಲ್ಲಿ ಬಿತ್ತನೆ ಮಾಡಿರುವ ಶೇಕಡ 90ರಷ್ಟು ಹಿಂಗಾರು ಬೆಳೆ ಒಣಗುತ್ತಿದ್ದು, ಆ ಭಾಗದಲ್ಲಿ ಶೇಕಡ 67ರಷ್ಟು ತೀವ್ರ ಮಳೆ ಕೊರತೆ ಎದುರಾಗಿದೆ, ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಕೇಂದ್ರ ಸರಕಾರವು ಬರ ಅಧ್ಯಯನಕ್ಕೆ ಕಳಿಸಿದ್ದ 10 ಸದಸ್ಯರ ತಂಡವು ತನ್ನ ವರದಿಯನ್ನು ಒಂದೆರಡು ದಿನಗಳಲ್ಲಿ ನ್ಯಾಷನಲ್ ಎಕ್ಸಿಕ್ಯುಟೀವ್ ಕಮಿಟಿಗೆ ಸಲ್ಲಿಸಲಿದೆ. ಹೀಗಾಗಿ, ಪರಿಹಾರ ಬಿಡುಗಡೆ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಶೀಘ್ರವೇ ರಾಜ್ಯಕ್ಕೆ ಎನ್.ಡಿ.ಆರ್.ಎಫ್. ನಿಧಿಯಿಂದ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ದೇಶಪಾಂಡೆ ಕೋರಿದ್ದಾರೆ.
ದೇಶಪಾಂಡೆ ಅವರು ಪ್ರಧಾನಿ ನರೇಂದ್ರ ಮೋದಿಯವರಲ್ಲದೆ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಕೃಷಿ ಸಚಿವ ರಾಧಾಮೋಹನ್ ಸಿಂಗ್ ಅವರಿಗೂ ಪತ್ರವನ್ನು ಕಳುಹಿಸಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications