ಸೈನಿಕ ಹುಳು ನಿಯಂತ್ರಣ: ರೈತರಿಗೆ ಸಾಮಾನ್ಯ ಸಲಹೆ ಕೊಟ್ಟ ವಿಜ್ಞಾನಿಗಳು
ಶಿವಮೊಗ್ಗ, ಜೂನ್ 16: ಪರ್ಯಾಯ ಬೆಳೆ ಪದ್ಧತಿ, ರಸಾಯನಿಕ ಸಿಂಪರಣೆ ಮೂಲಕ ಸೈನಿಕ ಹುಳುಗಳ ನಿಯಂತ್ರಣ ಸಾಧ್ಯ ಎಂದು ಶಿವಮೊಗ್ಗ ಕೃಷಿ ವಿಶ್ವವಿದ್ಯಾನಿಲಯದ ಕೀಟಶಾಸ್ತ್ರ ವಿಜ್ಞಾನಿ ಡಾ. ಶರಣಬಸಪ್ಪ ಎಸ್. ದೇಶಮುಖ್ ಹೇಳಿದ್ದಾರೆ.
ಮುಸುಕಿನ ಜೋಳದಲ್ಲಿ ಸೈನಿಕ ಹುಳು ಹಾಗೂ ಮುಳ್ಳು ಸಜ್ಜೆ ಕಳೆ ನಿರ್ವಹಣೆ ಕುರಿತು ಮತ್ತು ಬೆಳೆ ವಿಮೆ ಯೋಜನೆ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕೃಷಿ ಇಲಾಖೆ ಶಿವಮೊಗ್ಗ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ ಹಾಗೂ ಇ-ಆಡಳಿತ ಕರ್ನಾಟಕ ಸರ್ಕಾರ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.

ಸುಮಾರು 8 ಸಾವಿರ ರೈತರಿಗೆ ದೂರವಾಣಿ ಕರೆ ಮೂಲಕ ಮುಸುಕಿನ ಜೋಳದಲ್ಲಿ ಸೈನಿಕ ಹುಳು ಹಾಗೂ ಮುಳ್ಳು ಸಜ್ಜೆ ಕಳೆ ನಿರ್ವಹಣೆ ಕುರಿತು ಕಾರ್ಯಗಾರದಲ್ಲಿ ಮಾಹಿತಿ ನೀಡಲಾಯಿತು. ಡಾ. ಶರಣಬಸಪ್ಪ ಎಸ್. ದೇಶಮುಖ್ ಮಾತನಾಡಿ, 2018 ರಿಂದ ಈಚೆಗೆ ಮುಸುಕಿನಜೋಳ ಬೆಳೆಯಲ್ಲಿ ಪಾಲ್ ಸೈನಿಕ ಹುಳುವಿನ ಬಾಧೆ ಹೆಚ್ಚಾಗಿದೆ ಎಂದರು.
ಇಳುವರಿ ನಷ್ಟಮಾಡುವ ಬಾಧೆ: ಮಾಗಿ ಉಳುಮೆ, ಬೇಗ ಬಿತ್ತನೆ, ಪರ್ಯಾಯ ಬೆಳೆ ಪದ್ಧತಿ ಹಾಗೂ ರಸಾಯನಿಕ ಸಿಂಪರಣೆ ಮೂಲಕ ಸೈನಿಕ ಹುಳುಗಳನ್ನು ನಿಯಂತ್ರಣ ಮಾಡಬಹುದು ಎಂದರು. ಈ ಹುಳುವು 20-25 ದಿನಗಳ ಜೀವನ ಚಕ್ರ ಹೊಂದಿದ್ದು, ಏಕ ಬೆಳೆಯಲ್ಲೇ ಇದರ ಮೂರು ಹಂತಗಳು (ಮೊಟ್ಟೆ/ ಮರಿಹಳು/ ಪ್ರೌಡ ಚಿಟ್ಟೆ) ಕಾಣಿಸಿಕೊಂಡು ಎಲೆಗಳನ್ನು, ಸುಳಿಗಳನ್ನು ತಿಂದು ರಂಧ್ರಗಳನ್ನು ಮಾಡಿ ಹಿಕ್ಕೆಗಳನ್ನು ಎಲೆಯ ಮೇಲೆಯ ಬಿಡುತ್ತದೆ.
ಬೆಳೆಯ 45 ದಿನಗಳವರೆಗೆ ಈ ಹುಳು ಕಾಣಿಸಿಕೊಂಡು ಶೇ.70-80 ರವರೆಗೆ ಇಳುವರಿ ನಷ್ಟಕ್ಕೆ ಕಾರಣವಾಗುತ್ತದೆ. ರೈತರು ಪರ್ಯಾಯ ಬೆಳೆ ಪದ್ಧತಿ ರಸಾಯನಿಕ ಸಿಂಪರಣೆ ಮೂಲಕ ಈ ರೋಗವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಡಾ. ಶರಣಬಸಪ್ಪ ಎಸ್. ದೇಶಮುಖ್ ಹೇಳಿದರು.
ಬೇಸಾಯ ಶಾಸ್ತ್ರಜ್ಞ ಹೊನ್ನಪ್ಪ ಮಾತನಾಡಿ, "ಮುಸುಕಿನ ಜೋಳ ಬೆಳೆಯಲ್ಲಿ ಮುಳ್ಳು ಸಜ್ಜೆ ಕಳೆ ನಿರ್ವಹಣೆ ಬಹಳ ಮುಖ್ಯ. ಬಿತ್ತನೆಯಾದ 3 ದಿನಗಳೊಳಗೆ ಅಟ್ರಜಿನ್ 50 WP ಯನ್ನು 1.5 ಕೆ.ಜಿ/ ಒಂದು ಎಕರೆಗೆ ಅಥವಾ ಪೆಂಡಿಮಕಾಲೀನ್ 400 ಎಂ.ಎಲ್/ ಒಂದು ಎಕರೆಗೆ ನೀರಿನಲ್ಲಿ ಮಿಶ್ರಣ ಮಾಡಿ ಸಿಂಪರಣೆ ಮಾಡವುದು. ಹಾಗೆಯೇ 25 ದಿನಗಳ ನಂತರ ಅಂತರ ಬೇಸಾಯ ಮಾಡಿ ಕಳೆ ನಿರ್ವಹಣೆ ಮಾಡಬಹುದು" ಎಂದು ಮಾಹಿತಿ ನೀಡಿದರು.
ಸುಮಾರು 1 ಗಂಟೆಯವರೆಗೆ ನಡೆದ ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ಶಿವಮೊಗ್ಗ ತಾಲ್ಲೂಕಿನ 8 ಸಾವಿರ ಜನ ರೈತರು ತಾಂತ್ರಿಕ ಮಾಹಿತಿಯನ್ನು ಆಲಿಸಿ ಕೊನೆಯಲ್ಲಿ ವಿಜ್ಞಾನಿಗಳಿಗೆ ಪ್ರಶ್ನೆಗಳನ್ನು ಕೇಳಿ ಸಮಗ್ರ ಮಾಹಿತಿ ಪಡೆದರು. ಕಾರ್ಯಕ್ರಮದಲ್ಲಿ ಮುಸುಕಿನ ಜೋಳಕ್ಕೆ ಶಿಫಾರಸ್ಸು ಮಾಡಲಾಗಿರುವ ರಸಗೊಬ್ಬರಗಳ ಕುರಿತು ಹಾಗೇಯೇ ಬೆಳೆ ವಿಮೆ ಕುರಿತು ಮಾಹಿತಿ ಹಂಚಿಕೊಳ್ಳಲಾಯಿತು.
ಮುಂಗಾರು ಹಂಗಾಮು ಪ್ರಾರಂಭವಾಗಿದ್ದು ರೈತರು ಡಿಎಪಿ ಗೊಬ್ಬರ ಒಂದರ ಮೇಲೆ ಅವಲಂಬಿತರಾಗದೆ ಪರ್ಯಾಯಾವಾಗಿ ಸಂಯುಕ್ತ ರಸಗೊಬ್ಬರಗಳಾದ 15:15:15, 20:20:0:13, 10:26:26, 19:19:19 ಇತ್ಯಾದಿ ಬಳಕೆ ಮಾಡುವುದು ಸೂಕ್ತ.
ಹಾಗೇಯೇ ಪ್ರತಿಕೂಲ ಹವಾಮಾನದಲ್ಲಿ ರೈತರಿಗೆ ಕೈಹಿಡಿಯುತ್ತಿರುವ ಬೆಳೆ ವಿಮೆ ಯೋಜನೆಯನ್ನು ಸರ್ಕಾರ ಮುಂದುವರೆಸಿದೆ. ರೈತರು ಕೂಡಲೇ ಬೆಳೆ ವಿಮೆ ಯೋಜನೆಗೆ ನೊಂದಣಿ ಮಾಡಿಕೊಳ್ಳಬೇಕು. ಮುಸುಕಿನಜೋಳ ಬೆಳೆ ವಿಮೆ ಪ್ರಾರಂಭವಾಗಿದ್ದು ಜುಲೈ ತಿಂಗಳ 31ರೊಳಗೆ ನೋಂದಣಿ ಮಾಡಿಸಬೇಕು ಎಂದು ರೈತರಿಗೆ ಮಾಹಿತಿ ನೀಡಲಾಯಿತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications