ಸೈನಿಕ ಹುಳು ನಿಯಂತ್ರಣ: ರೈತರಿಗೆ ಸಾಮಾನ್ಯ ಸಲಹೆ ಕೊಟ್ಟ ವಿಜ್ಞಾನಿಗಳು
ಶಿವಮೊಗ್ಗ, ಜೂನ್ 16: ಪರ್ಯಾಯ ಬೆಳೆ ಪದ್ಧತಿ, ರಸಾಯನಿಕ ಸಿಂಪರಣೆ ಮೂಲಕ ಸೈನಿಕ ಹುಳುಗಳ ನಿಯಂತ್ರಣ ಸಾಧ್ಯ ಎಂದು ಶಿವಮೊಗ್ಗ ಕೃಷಿ ವಿಶ್ವವಿದ್ಯಾನಿಲಯದ ಕೀಟಶಾಸ್ತ್ರ ವಿಜ್ಞಾನಿ ಡಾ. ಶರಣಬಸಪ್ಪ ಎಸ್. ದೇಶಮುಖ್ ಹೇಳಿದ್ದಾರೆ.
ಮುಸುಕಿನ ಜೋಳದಲ್ಲಿ ಸೈನಿಕ ಹುಳು ಹಾಗೂ ಮುಳ್ಳು ಸಜ್ಜೆ ಕಳೆ ನಿರ್ವಹಣೆ ಕುರಿತು ಮತ್ತು ಬೆಳೆ ವಿಮೆ ಯೋಜನೆ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕೃಷಿ ಇಲಾಖೆ ಶಿವಮೊಗ್ಗ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ ಹಾಗೂ ಇ-ಆಡಳಿತ ಕರ್ನಾಟಕ ಸರ್ಕಾರ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.

ಸುಮಾರು 8 ಸಾವಿರ ರೈತರಿಗೆ ದೂರವಾಣಿ ಕರೆ ಮೂಲಕ ಮುಸುಕಿನ ಜೋಳದಲ್ಲಿ ಸೈನಿಕ ಹುಳು ಹಾಗೂ ಮುಳ್ಳು ಸಜ್ಜೆ ಕಳೆ ನಿರ್ವಹಣೆ ಕುರಿತು ಕಾರ್ಯಗಾರದಲ್ಲಿ ಮಾಹಿತಿ ನೀಡಲಾಯಿತು. ಡಾ. ಶರಣಬಸಪ್ಪ ಎಸ್. ದೇಶಮುಖ್ ಮಾತನಾಡಿ, 2018 ರಿಂದ ಈಚೆಗೆ ಮುಸುಕಿನಜೋಳ ಬೆಳೆಯಲ್ಲಿ ಪಾಲ್ ಸೈನಿಕ ಹುಳುವಿನ ಬಾಧೆ ಹೆಚ್ಚಾಗಿದೆ ಎಂದರು.
ಇಳುವರಿ ನಷ್ಟಮಾಡುವ ಬಾಧೆ: ಮಾಗಿ ಉಳುಮೆ, ಬೇಗ ಬಿತ್ತನೆ, ಪರ್ಯಾಯ ಬೆಳೆ ಪದ್ಧತಿ ಹಾಗೂ ರಸಾಯನಿಕ ಸಿಂಪರಣೆ ಮೂಲಕ ಸೈನಿಕ ಹುಳುಗಳನ್ನು ನಿಯಂತ್ರಣ ಮಾಡಬಹುದು ಎಂದರು. ಈ ಹುಳುವು 20-25 ದಿನಗಳ ಜೀವನ ಚಕ್ರ ಹೊಂದಿದ್ದು, ಏಕ ಬೆಳೆಯಲ್ಲೇ ಇದರ ಮೂರು ಹಂತಗಳು (ಮೊಟ್ಟೆ/ ಮರಿಹಳು/ ಪ್ರೌಡ ಚಿಟ್ಟೆ) ಕಾಣಿಸಿಕೊಂಡು ಎಲೆಗಳನ್ನು, ಸುಳಿಗಳನ್ನು ತಿಂದು ರಂಧ್ರಗಳನ್ನು ಮಾಡಿ ಹಿಕ್ಕೆಗಳನ್ನು ಎಲೆಯ ಮೇಲೆಯ ಬಿಡುತ್ತದೆ.
ಬೆಳೆಯ 45 ದಿನಗಳವರೆಗೆ ಈ ಹುಳು ಕಾಣಿಸಿಕೊಂಡು ಶೇ.70-80 ರವರೆಗೆ ಇಳುವರಿ ನಷ್ಟಕ್ಕೆ ಕಾರಣವಾಗುತ್ತದೆ. ರೈತರು ಪರ್ಯಾಯ ಬೆಳೆ ಪದ್ಧತಿ ರಸಾಯನಿಕ ಸಿಂಪರಣೆ ಮೂಲಕ ಈ ರೋಗವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಡಾ. ಶರಣಬಸಪ್ಪ ಎಸ್. ದೇಶಮುಖ್ ಹೇಳಿದರು.
ಬೇಸಾಯ ಶಾಸ್ತ್ರಜ್ಞ ಹೊನ್ನಪ್ಪ ಮಾತನಾಡಿ, "ಮುಸುಕಿನ ಜೋಳ ಬೆಳೆಯಲ್ಲಿ ಮುಳ್ಳು ಸಜ್ಜೆ ಕಳೆ ನಿರ್ವಹಣೆ ಬಹಳ ಮುಖ್ಯ. ಬಿತ್ತನೆಯಾದ 3 ದಿನಗಳೊಳಗೆ ಅಟ್ರಜಿನ್ 50 WP ಯನ್ನು 1.5 ಕೆ.ಜಿ/ ಒಂದು ಎಕರೆಗೆ ಅಥವಾ ಪೆಂಡಿಮಕಾಲೀನ್ 400 ಎಂ.ಎಲ್/ ಒಂದು ಎಕರೆಗೆ ನೀರಿನಲ್ಲಿ ಮಿಶ್ರಣ ಮಾಡಿ ಸಿಂಪರಣೆ ಮಾಡವುದು. ಹಾಗೆಯೇ 25 ದಿನಗಳ ನಂತರ ಅಂತರ ಬೇಸಾಯ ಮಾಡಿ ಕಳೆ ನಿರ್ವಹಣೆ ಮಾಡಬಹುದು" ಎಂದು ಮಾಹಿತಿ ನೀಡಿದರು.
ಸುಮಾರು 1 ಗಂಟೆಯವರೆಗೆ ನಡೆದ ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ಶಿವಮೊಗ್ಗ ತಾಲ್ಲೂಕಿನ 8 ಸಾವಿರ ಜನ ರೈತರು ತಾಂತ್ರಿಕ ಮಾಹಿತಿಯನ್ನು ಆಲಿಸಿ ಕೊನೆಯಲ್ಲಿ ವಿಜ್ಞಾನಿಗಳಿಗೆ ಪ್ರಶ್ನೆಗಳನ್ನು ಕೇಳಿ ಸಮಗ್ರ ಮಾಹಿತಿ ಪಡೆದರು. ಕಾರ್ಯಕ್ರಮದಲ್ಲಿ ಮುಸುಕಿನ ಜೋಳಕ್ಕೆ ಶಿಫಾರಸ್ಸು ಮಾಡಲಾಗಿರುವ ರಸಗೊಬ್ಬರಗಳ ಕುರಿತು ಹಾಗೇಯೇ ಬೆಳೆ ವಿಮೆ ಕುರಿತು ಮಾಹಿತಿ ಹಂಚಿಕೊಳ್ಳಲಾಯಿತು.
ಮುಂಗಾರು ಹಂಗಾಮು ಪ್ರಾರಂಭವಾಗಿದ್ದು ರೈತರು ಡಿಎಪಿ ಗೊಬ್ಬರ ಒಂದರ ಮೇಲೆ ಅವಲಂಬಿತರಾಗದೆ ಪರ್ಯಾಯಾವಾಗಿ ಸಂಯುಕ್ತ ರಸಗೊಬ್ಬರಗಳಾದ 15:15:15, 20:20:0:13, 10:26:26, 19:19:19 ಇತ್ಯಾದಿ ಬಳಕೆ ಮಾಡುವುದು ಸೂಕ್ತ.
ಹಾಗೇಯೇ ಪ್ರತಿಕೂಲ ಹವಾಮಾನದಲ್ಲಿ ರೈತರಿಗೆ ಕೈಹಿಡಿಯುತ್ತಿರುವ ಬೆಳೆ ವಿಮೆ ಯೋಜನೆಯನ್ನು ಸರ್ಕಾರ ಮುಂದುವರೆಸಿದೆ. ರೈತರು ಕೂಡಲೇ ಬೆಳೆ ವಿಮೆ ಯೋಜನೆಗೆ ನೊಂದಣಿ ಮಾಡಿಕೊಳ್ಳಬೇಕು. ಮುಸುಕಿನಜೋಳ ಬೆಳೆ ವಿಮೆ ಪ್ರಾರಂಭವಾಗಿದ್ದು ಜುಲೈ ತಿಂಗಳ 31ರೊಳಗೆ ನೋಂದಣಿ ಮಾಡಿಸಬೇಕು ಎಂದು ರೈತರಿಗೆ ಮಾಹಿತಿ ನೀಡಲಾಯಿತು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications