ನಮ್ಮ ಅವಶ್ಯಕತೆಗಾಗಿ ಇಲ್ಲಿವರೆಗೂ ಬಂದಿದ್ದೇವೆ; ಕ್ಷಮೆ ಯಾಚಿಸಿದ ರೈತ ಸಂಘ
ನವದೆಹಲಿ, ಡಿಸೆಂಬರ್ 14: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧದ ರೈತರ ಹೋರಾಟ 19ನೇ ದಿನಕ್ಕೆ ತಲುಪಿದೆ. ತಮ್ಮ ಹೋರಾಟದ ಭಾಗವಾಗಿ ಇಂದು ರೈತರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ದೆಹಲಿಯ ಗಡಿಯಲ್ಲಿ ಸುಮಾರು 40ಕ್ಕೂ ಹೆಚ್ಚು ರೈತ ಸಂಘಟನೆಗಳು ಹೆದ್ದಾರಿ ತಡೆದು ಧರಣಿ ನಡೆಸುತ್ತಿವೆ.
ಹೋರಾಟದಿಂದಾಗಿ ಸಾರ್ವಜನಿಕರ ದಿನನಿತ್ಯದ ಬದುಕಿಗೆ ಸಮಸ್ಯೆಯಾಗುತ್ತಿರುವುದಕ್ಕೆ ರೈತ ಸಂಘ ಕ್ಷಮೆ ಯಾಚಿಸಿದೆ. ಸಂಯುಕ್ತ ಕಿಸಾನ್ ಮೋರ್ಚಾ ಸಂಘವು ಕರಪತ್ರ ಹಂಚುವ ಮೂಲಕ ಜನರಲ್ಲಿ ಕ್ಷಮೆ ಯಾಚಿಸಿದೆ.
ಕರಪತ್ರದಲ್ಲಿ, "ನಾವು ರೈತರು. ನಮ್ಮನ್ನು ಅನ್ನದಾತರು ಎಂದು ಕರೆಯುತ್ತಾರೆ. ಪ್ರಧಾನಿ ಮೋದಿಯವರು, ತಮಗೆ ಈ ಮೂರು ಕೃಷಿ ಕಾಯ್ದೆಗಳನ್ನು ಕೊಡುಗೆಯಂತೆ ನೀಡಿರುವುದಾಗಿ ತಿಳಿಸಿದ್ದಾರೆ. ಆದರೆ ಇದು ಕೊಡುಗೆಯಲ್ಲ, ಶಿಕ್ಷೆ. ನೀವು ನಮಗೆ ಕೊಡುಗೆ ನೀಡಬೇಕು ಎಂದಿದ್ದರೆ, ನಮ್ಮ ಬೆಳೆಗಳಿಗೆ ಸೂಕ್ತ ಬೆಲೆಯ ಭರವಸೆ ಕೊಡಿ ಸಾಕು" ಎಂದು ಬರೆದಿದ್ದಾರೆ.

"ರಸ್ತೆಗಳನ್ನು ತಡೆದು, ಸಾರ್ವಜನಿಕರಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶವಲ್ಲ. ನಮ್ಮ ಅವಶ್ಯಕತೆಗಳಿಗಾಗಿ ನಾವು ಇಲ್ಲಿ ಕುಳಿತಿದ್ದೇವೆ. ನಿಮಗೆ ನಮ್ಮ ಈ ಹೋರಾಟ ಬೇಸರ, ನೋವು ತರಿಸುತ್ತಿದ್ದರೆ, ನಿಮ್ಮ ಮುಂದೆ ನಾವು ಕೈ ಕಟ್ಟಿ ಕ್ಷಮೆ ಯಾಚಿಸುತ್ತಿದ್ದೇವೆ" ಎಂದು ಬರೆಯಲಾಗಿದೆ.
"ನಮಗೆ ದಾನ ಬೇಡ, ಬೆಲೆ ಬೇಕು. ಇದೊಂದೇ ಬೇಡಿಕೆಯೊಂದಿಗೆ ದೆಹಲಿವರೆಗೂ ಬಂದಿದ್ದೇವೆ. ನಮ್ಮ ಉದ್ದೇಶವನ್ನು ಪ್ರಧಾನಿಯವರಿಗೆ ತಿಳಿಸಲು ಪ್ರಯತ್ನಿಸುತ್ತಿದ್ದೇವೆ. ನಮ್ಮೊಂದಿಗೆ ಮಾತನಾಡುವಂತೆ ಸರ್ಕಾರ ನಟಿಸುತ್ತಿದೆ. ಆದರೆ ನಮ್ಮ ಮಾತನ್ನು ಕೇಳಿಸಿಕೊಳ್ಳುತ್ತಿಲ್ಲ. ನಿಮ್ಮಲ್ಲಿ ರೋಗಿಗಳಿದ್ದು, ತುರ್ತು ಚಿಕಿತ್ಸೆ ಅವಶ್ಯಕವಿದ್ದರೆ, ಹಿರಿಯರಿಗೆ ತೊಂದರೆಯಿದ್ದರೆ, ಆಂಬುಲೆನ್ಸ್ ಗೆ ನಮ್ಮಿಂದ ತಡೆಯಾಗುತ್ತಿದ್ರೆ ತಕ್ಷಣವೇ ನಮಗೆ ತಿಳಿಸಿ. ನಿಮ್ಮ ಸಹಾಯಕ್ಕೆ ನಾವು ನಿಲ್ಲುತ್ತೇವೆ" ಎಂದು ಕರಪತ್ರದಲ್ಲಿ ತಿಳಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications