ಉಡುಪಿಯಲ್ಲಿ ಜೂನ್ ನಲ್ಲಿ ಜಿಲ್ಲಾಡಳಿತದಿಂದ ಸಾವಯವ ಸಂತೆ
ಉಡುಪಿ, ಮೇ 25: ಇಲ್ಲಿನ ಜಿಲ್ಲಾಡಳಿತ ಅಂದುಕೊಂಡಂತೆಯೇ ಎಲ್ಲ ನಡೆದರೆ ಜೂನ್ ಅಂತ್ಯದ ವೇಳೆಗೆ ಸಾವಯವ ಸಂತೆ ಆರಂಭವಾಗಲಿದೆ. ಇಲ್ಲಿನ ದೊಡ್ಡನಗುಡ್ಡೆಯಲ್ಲಿರುವ ಹೂವು ಹರಾಜು ಕೇಂದ್ರದಲ್ಲಿ ವಾರದ ಸಾವಯವ ಸಂತೆ ನಡೆಸಲು ಒಪ್ಪಿಗೆ ಸಿಕ್ಕಿದೆ. ರಾಜ್ಯ ಸರಕಾರದ ಸಾವಯವ ಭಾಗ್ಯ ಯೋಜನೆ ಅಡಿಯಲ್ಲಿ ಜಿಲ್ಲೆಯ ಆರು ನೂರಾ ಮೂವತ್ತೆರಡು ರೈತರು ಸಾವಯವ ಕೃಷಿ ಮಾಡುತ್ತಿದ್ದಾರೆ.
ಇದಕ್ಕಾಗಿ ಸರಕಾರೇತರ ಸಂಸ್ಥೆಗಳು ಹಾಗೂ ಕೃಷಿ ಇಲಾಖೆ ಸೇರಿ ಜಿಲ್ಲೆಯಲ್ಲಿ ಹಿರೇಬೆಟ್ಟು, ಕಡೂರು, ಕತ್ತಿನಗೇರಿ, ಬೆಳಿಂಜೆ, ಜಪ್ತಿ ಹಾಗೂ ತೆಗ್ಗರ್ಸೆಯಲ್ಲಿ ಕ್ಲಸ್ಟರ್ ಮಾಡಿವೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಒಳಗೊಂಡಂತೆ ಪ್ರಾದೇಶಿಕ ಸಹಕಾರ ಸಾವಯವ ಕೃಷಿಕರ ಒಕ್ಕೂಟ ಸಹ ಮಾಡಲಾಗಿದೆ.[ಅನ್ನದಾತನ ಕೈಹಿಡಿದಿರುವ ಮಹತ್ವಾಕಾಂಕ್ಷಿ ಯೋಜನೆಗಳು]

ಸಾವಯವ ಸಂತೆಯಲ್ಲಿ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳೆದ ಸಾವಯವ ತರಕಾರಿ, ಆಹಾರ ಧಾನ್ಯ ಮತ್ತು ಹಣ್ಣುಗಳು ಸಹ ದೊರೆಯಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ. ರಾಜ್ಯ ಸರಕಾರದ ಯೋಜನೆ ಹೊರತುಪಡಿಸಿ ಕೇಂದ್ರದ ಪರಂಪರಾಗತ್ ಕೃಷಿ ವಿಕಾಸ್ ಯೋಜನೆಯಲ್ಲಿ ಸಹ ಜಿಲ್ಲೆಯ ಒಂಬತ್ತು ಗ್ರಾಮಗಳ 292 ರೈತರು ಸಾವಯವ ಕೃಷಿ ಮಾಡುತ್ತಿದ್ದಾರೆ.[ಭಾರತವನ್ನು ಸಾವಯವ ಕೃಷಿ ದೇಶವಾಗಿಸುವುದೇ ನಮ್ಮ ಗುರಿ - ಅನಂತ್ ಕುಮಾರ್]
ಸಾವಯವ ಸಂತೆಯು ಮುದಿನ ತಿಂಗಳಿಂದ ಭಾನುವಾರದಂದು ನಡೆಯಲಿದೆ. ಆದರೆ ದಿನಾಂಕ ನಿಗದಿಯಾಗಿಲ್ಲ. ಮೊದಲ ಬಾರಿಗೆ ಹೂವು ಹರಾಜು ಕೇಂದ್ರದಲ್ಲಿ ಗೋದಾಮು ಮಾಡಲಾಗುವುದು ಮತ್ತು ಅಲ್ಲೇ ಸಾವಯವ ವಸ್ತುಗಳು ಮಾರಾಟಕ್ಕಿವೆ ಎಂದು ಫಲಕ ಇಟ್ಟು ಆರಂಭದಲ್ಲಿ ಮಾರಾಟ ಮಾಡಲಾಗುವುದು. ಸಾವಯವ ಸಂತೆ ಬಗ್ಗೆ 'ದ ಹಿಂದೂ' ಪತ್ರಿಕೆಯಲ್ಲಿ ವರದಿ ಪ್ರಕಟವಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications