ರೈತರ ಜೊತೆ ಮುಕ್ತವಾಗಿ ಚರ್ಚಿಸದೆ ಬೇರೆ ದಾರಿಯೇ ಇಲ್ಲ; ಸುಪ್ರೀಂ ಕೋರ್ಟ್
ನವದೆಹಲಿ, ಡಿಸೆಂಬರ್ 16: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ದೆಹಲಿಯ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆಗೆ ಜಮಾಯಿಸಿರುವ ರೈತರನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಿ ಸುಪ್ರೀಂ ಕೋರ್ಟ್ ಗೆ ಹಲವು ಅರ್ಜಿಗಳೂ ಬಂದಿವೆ.
ಬುಧವಾರ ಈ ಅರ್ಜಿಗಳ ವಿಚಾರಣೆ ನಡೆಸಿರುವ ಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಿದೆ. ರೈತರೊಂದಿಗಿನ ಈ ಬಿಕ್ಕಟ್ಟನ್ನು ಕೊನೆ ಮಾಡಲು ರೈತ ಮುಖಂಡರು, ಸರ್ಕಾರಿ ಅಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರನ್ನು ಒಳಗೊಂಡ ಸಮಿತಿಯನ್ನು ರಚಿಸಲು ಸಲಹೆ ನೀಡಿದೆ. ಮುಂದೆ ಓದಿ...

"ಮುಕ್ತವಾಗಿ ಮಾತನಾಡದೇ ಬೇರೆ ದಾರಿಯಿಲ್ಲ"
ಪ್ರತಿಭಟನೆ ಸಂಬಂಧ ವಿಚಾರಣೆ ನಡೆಸಿದ ಸಿಜೆಐ ಬೊಬ್ಡೆ, "ಸರ್ಕಾರವು ರೈತರೊಂದಿಗೆ ಮುಕ್ತವಾಗಿ ಚರ್ಚೆ ನಡೆಸದೇ ಇದ್ದರೆ, ರೈತರ ಜೊತೆಗಿನ ಸಂಧಾನ ಮತ್ತೆ ಮತ್ತೆ ಸೋಲುವುದರಲ್ಲಿ ಸಂಶಯವೇ ಇಲ್ಲ" ಎಂದಿದ್ದಾರೆ. "ಸರ್ಕಾರದ ಕೃಷಿ ಕಾಯ್ದೆಗಳು ತಮ್ಮ ವಿರುದ್ಧವಾಗಿವೆ ಎಂದು ರೈತರು ಗ್ರಹಿಸಿದ್ದಾರೆ. ಈ ಕುರಿತು ಸರ್ಕಾರ ಅವರೊಂದಿಗೆ ಮುಕ್ತವಾಗಿ ಚರ್ಚಿಸಬೇಕು. ಇಲ್ಲದಿದ್ದರೆ ನಿಮ್ಮ ಉದ್ದೇಶ ಮತ್ತೆ ವಿಫಲಗೊಳ್ಳುತ್ತದೆ" ಎಂದಿದ್ದಾರೆ.

ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕೋರ್ಟ್
"ರೈತರ ಈ ಪ್ರತಿಭಟನೆ ಶೀಘ್ರದಲ್ಲೇ ರಾಷ್ಟ್ರೀಯ ವಿಚಾರವಾಗಲಿದೆ. ಸರ್ಕಾರದಿಂದ ಈ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ" ಎಂದಿರುವ ನ್ಯಾಯಾಲಯ, ಇದಕ್ಕೆ ತಜ್ಞರ ತಂಡ ರಚಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದೆ.

ಬಿಕ್ಕಟ್ಟು ಶಮನಕ್ಕೆ ಸಮಿತಿ ರಚನೆ ಸಲಹೆ
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ, ಎ.ಎಸ್. ಬೋಪಣ್ಣ ಹಾಗೂ ವಿ.ರಾಮ ಸುಬ್ರಹ್ಮಣಿಯಂ ಅವರನ್ನೊಳಗೊಂಡ ಪೀಠವು, ಸರ್ಕಾರ, ರೈತ ಸಂಘಟನೆಯ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚಿಸಿ ಈ ಬಿಕ್ಕಟ್ಟನ್ನು ಕೊನೆಗಣಿಸಲು ನ್ಯಾಯಾಲಯವು ಸಮಿತಿ ರಚಿಸಬಹುದು ಎಂದು ತಿಳಿಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆದಿದೆ.

"ನಿಮ್ಮ ಈವರೆಗಿನ ಪ್ರಯತ್ನಗಳು ವಿಫಲವಾಗಿವೆ"
ಈವರೆಗೂ ರೈತರೊಂದಿಗಿನ ನಿಮ್ಮ ಸಂಧಾನ ಪ್ರಯತ್ನಗಳು ವಿಫಲವಾಗಿವೆ ಎಂಬ ಅಂಶವನ್ನು ಕೇಂದ್ರಕ್ಕೆ ನ್ಯಾಯಾಲಯ ಎತ್ತಿತೋರಿಸಿದೆ. ಈ ಸಂದರ್ಭ, ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುವುದಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ದೆಹಲಿ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ರಸ್ತೆಗಳಿಗೆ ತಡೆಯಾಗಿ ಜನರಿಗೆ ತೊಂದರೆಯಾಗುತ್ತಿದೆ. ಕೊರೊನಾ ಆತಂಕವೂ ಎದುರಾಗಿದೆ. ಹೀಗಾಗಿ ರೈತರನ್ನು ಅಲ್ಲಿಂದ ತೆರವುಗೊಳಸಬೇಕು ಎಂದು ಸಂಬಂಧಪಟ್ಟ ಆಡಳಿತಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ಗೆ ಹಲವು ಮನವಿಗಳು ಬಂದಿವೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications