ಬೀಜ, ರಸಗೊಬ್ಬರದ ದರ ಪ್ರಕಟಿಸಲು ಖಡಕ್ ಸೂಚನೆ
ಬೆಂಗಳೂರು, ಜೂನ್ 03: ನೈಋತ್ಯ ಮುಂಗಾರು ಹಂಗಾಮು ಆರಂಭವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿದೆ. ರೈತರಿಗೆ ನೆರವಾಗಲು ಸಾಕಷ್ಟು ಬೀಜ, ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ಆದರೆ ದರಗಳನ್ನು ಏರಿಕೆ ಮಾಡಲಾಗುತ್ತಿದೆ ಎಂಬ ಆರೋಪವಿದೆ.
ಮುಂಗಾರು ಹಂಗಾಮು 2024ರ ಬಿತ್ತನೆ ಆರಂಭಗೊಂಡಿದ್ದು, ಸಾಕಷ್ಟು ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿರುತ್ತದೆ. ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರವನ್ನು ವಿತರಿಸಬೇಕು, ಕೃತಕ ಅಭಾವ ಸೃಷ್ಟಿಸುವ ಅಥವಾ ನಿಗದಿತ ದರಕ್ಕಿಂತ ಹೆಚ್ವಿನ ದರ ಪಡೆಯುವ ವರ್ತಕರು ಮತ್ತು ವಿತರಕರ ಲೈಸೆನ್ಸ್ ರದ್ದುಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಈಗಾಗಲೇ 2024-25 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆಗಾಗಿ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಸಗಟು ವ್ಯಾಪಾರಿಗಳ ಮತ್ತು ವಿತರಕರ ಸಭೆಯನ್ನು ನಡೆಸಿ, ಹಲವು ಸೂಚನೆಗಳನ್ನು ಕೊಟ್ಟಿದ್ದಾರೆ.
ದರಪಟ್ಟಿ ಪ್ರಕಟಿಸಲು ಸೂಚನೆ: ವಿವಿಧ ಜಿಲ್ಲೆಗಳಲ್ಲಿ ಮಳೆ ಆರಂಭಗೊಂಡ ಬಳಿಕ ಮುಂಗಾರು ಹಂಗಾಮು ಬಿತ್ತನೆ ಆರಂಭಗೊಂಡಿರುತ್ತದೆ. ರೈತರು ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿಗೆ ಅಂಗಡಿಗಳಿಗೆ ಆಗಮಿಸುತ್ತಿದ್ದಾರೆ. ಕಳೆದ ವರ್ಷ ಬರಗಾಲದಿಂದ ರೈತರು ತತ್ತರಿಸಿದ್ದರು. ಈ ಬಾರಿ ಉತ್ತಮ ಮಳೆಯ ಮುನ್ಸೂಚನೆಯಿದೆ.
ಆದ್ದರಿಂದ ರೈತರು ಉತ್ಸಾಹದಲ್ಲಿಯೇ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಆದ್ದರಿಂದ ರೈತರಿಗೆ ಉತ್ತಮ ಗುಣಮಟ್ಟದ ಬೀಜ ವಿತರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ವರ್ತಕರಿಗೆ ಎಚ್ಚರಿಕೆ ನೀಡಲಾಗಿದೆ.
ಬೀಜ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು. ನಿಗದಿತ ದರಕ್ಕಿಂತ ಹೆಚ್ಚಿನ ದರ ಪಡೆದುಕೊಂಡರೆ ವರ್ತಕರ ನೋಂದಣಿಯನ್ನು ರದ್ದುಗೊಳಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಹಾಗೆಯೇ ರಸಗೊಬ್ಬರ ಲಭ್ಯತೆ ಹಾಗೂ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಹೆಚ್ಚುವರಿ ಹಣ ಪಡೆದರೆ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಸಾರಿಗೆ ವೆಚ್ಚ ಮತ್ತಿತರ ವೆಚ್ಚಗಳ ನೆಪವೊಡ್ಡಿ ರೈತರಿಂದ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಈಗಾಗಲೇ ಸಾಕಷ್ಟು ರಸಗೊಬ್ಬರ ಅಥವಾ ಬೀಜ ದಾಸ್ತಾನು ಮಾಡಲಾಗಿದೆ. ಆದರೆ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಮಳೆ ಆರಂಭವಾಗಿರುವ ಹಿನ್ನಲೆಯಲ್ಲಿ ರೈತರು ಏಕಕಾಲಕ್ಕೆ ಬೀಜ ವಿತರಣಾ ಕೇಂದ್ರಗಳಿಗೆ ಆಗಮಿಸಿದರೆ ಗೊಂದಲ ಉಂಟಾಗಬಹುದು. ಆದ್ದರಿಂದ ಟೋಕನ್ ವ್ಯವಸ್ಥೆ ಮಾಡುವ ಮೂಲಕ ಪ್ರತಿಯೊಬ್ಬರಿಗೂ ಅಗತ್ಯಕ್ಕೆ ಅನುಸಾರ ಬೀಜ, ರಸಗೊಬ್ಬರವನ್ನು ಪೂರೈಸಬೇಕು ಎಂದು ಸೂಚನೆ ನೀಡಲಾಗಿದೆ.
ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಾಕಾಷ್ಟು ದಾಸ್ತಾನು ಇರುತ್ತದೆ. ಸರ್ಕಾರದಿಂದ ವಿವಿಧ ಬಗೆಯ ಬಿತ್ತನೆ ಬೀಜಗಳಿಗೆ ನಿಗದಿಪಡಿಸಲಾಗಿರುವ ದರಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ.
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು












Click it and Unblock the Notifications