ರಾಜ್ಯದಾದ್ಯಂತ ಭೀಕರ ಬರ: ಸಿಂಧನೂರು ಭತ್ತದ ಹುಲ್ಲಿಗೆ ಬೇಡಿಕೆ!
ರಾಯಚೂರು ಫೆಬ್ರವರಿ 22: ರಾಜ್ಯದಾದ್ಯಂತ ಈ ವರ್ಷ ಭೀಕರ ಬರ ಆವರಿಸಿರುವುದರಿಂದ ಭತ್ತದ ಹುಲ್ಲಿಗೆ ಬೇಡಿಕೆ ತೀವ್ರ ಹೆಚ್ಚಿದೆ. ಬಾಗಲಕೋಟೆ ಜಿಲ್ಲಾ ವ್ಯಾಪ್ತಿಗೊಳಪಡುವ ಹಳ್ಳಿಗಳ ರೈತರೂ ಹುಲ್ಲು ಅರಸಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಬರುತ್ತಿದ್ದಾರೆ.
ಸಿಂಧನೂರು ತಾಲ್ಲೂಕಿನಲ್ಲಿ ಎರಡು ಬೆಳೆ ಬೆಳೆಯುತ್ತಿದ್ದ ರೈತರು ಈ ವರ್ಷ ಒಂದೇ ಬೆಳೆಗೆ ಸೀಮಿತವಾಗಿದ್ದಾರೆ. ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ ಇರುವುದರಿಂದ ಮುಂಗಾರು ಭತ್ತದ ಬೆಳೆ ಮಾತ್ರ ಬಂದಿದೆ. ಪ್ರತಿ ವರ್ಷ ಭತ್ತದ ಹುಲ್ಲನ್ನು ಸುಡುತ್ತಿದ್ದ ತಾಲ್ಲೂಕಿನ ಹಲವರು, ಇದೀಗ ಹುಲ್ಲು ಸಂಗ್ರಹಿಸಿ ಹೊರೆ ಕಟ್ಟಿ ದೊಡ್ಡ-ದೊಡ್ಡ ಬಣವೆ ಪೇರಿಸಿದ್ದಾರೆ.

ಹುಲ್ಲಿನ ಪ್ರತಿ ಹೊರೆಗೆ ₹150 ದರ ನಿಗದಿ ಪಡಿಸಿ ಮಾರಾಟ ಮಾಡುತ್ತಿದ್ದಾರೆ. ಒಣ ಬೇಸಾಯದ ಕುಷ್ಟಗಿ, ಲಿಂಗಸುಗೂರು ತಾಲ್ಲೂಕಿನ ಕೆಲ ಹಳ್ಳಿಗಳ ರೈತರು ಹಿಂದೆಲ್ಲ ಉಚಿತವಾಗಿ ಹುಲ್ಲನ್ನು ಹೇರಿಕೊಂಡು ಹೋಗುತ್ತಿದ್ದರು. ಈ ವರ್ಷ ಆ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ತಿಂಗಳು ಪ್ರತಿ ಹೊರೆಗೆ ₹100 ಪಡೆಯುತ್ತಿದ್ದ ಭತ್ತ ಬೆಳೆಗಾರರು, ಹುಲ್ಲಿನ ಬೇಡಿಕೆ ಹೆಚ್ಚಿದಂತೆ ಇದೀಗ ₹150ಕ್ಕೆ ದರ ಹೆಚ್ಚಿಸಿದ್ದಾರೆ.
'ಪ್ರತಿವರ್ಷ ಸಿಂಧನೂರು ತಾಲ್ಲೂಕಿನ ಗುಂಜಳ್ಳಿ ಗ್ರಾಮದಿಂದ ಹುಲ್ಲನ್ನು ಟ್ರ್ಯಾಕ್ಟರ್ನಲ್ಲಿ ಹೇರಿಕೊಂಡು ಹೋಗುತ್ತಿದ್ದೆವು. ಇಲ್ಲಿಯ ರೈತರೇ ಉಚಿತವಾಗಿ ಹೇರಿಕೊಂಡು ಹೋಗುವಂತೆ ಹೇಳುತ್ತಿದ್ದರು. ಈ ವರ್ಷ ಒಂದು ಟ್ರ್ಯಾಕ್ಟರ್ ಹುಲ್ಲಿಗೆ ₹4 ಸಾವಿರ ಕೊಟ್ಟಿದ್ದೇವೆ' ಎಂದು ಕುಷ್ಟಗಿ ತಾಲ್ಲೂಕಿನ ಟೆಂಗುಂಟಿ ಗ್ರಾಮದ ರೈತ ನಿಂಗಪ್ಪ ಹೇಳಿದರು.

'ಎಳ್ಳು ಅಮಾವ್ಯಾಸೆಗಿಂತ ಪೂರ್ವದಲ್ಲಿ ಒಂದು ಟ್ರ್ಯಾಕ್ಟರ್ ಹುಲ್ಲುನ್ನು ಖರೀದಿ ಮಾಡಿಕೊಂಡು ಹೋಗಿದ್ದೆವು. ಅದು ಮುಗಿದು ಹೋಯಿತು. ಪುನಃ ಹುಲ್ಲು ಕೊಂಡೊಯ್ಯಲು ಸಿಂಧನೂರು ತಾಲ್ಲೂಕಿಗೆ ಬಂದರೆ ಆಗ ಪ್ರತಿ ಹೊರೆಗೆ ₹100 ಇದ್ದದ್ದು, ಈಗ ₹150ಕ್ಕೆ ಏರಿದೆ. ಮುಂದಿನ ಮಳೆಗಾಲ ಬರುವ ತನಕ ದನಗಳನ್ನು ಸಾಕುವುದೇ ದುಸ್ತರವಾಗಿದೆ' ಎಂದು ಹುಲ್ಲು ಖರೀದಿಸಲು ಬಂದ ಲಿಂಗಸುಗೂರು ತಾಲ್ಲೂಕಿನ ನಾಗಲಾಪುರ ಗ್ರಾಮದ ರೈತ ಶರಣಪ್ಪ ಅಳಲುತೋಡಿಕೊಂಡರು.
-ಮೇವಿನ ಕೊರತೆ ಇರುವ ಹೋಬಳಿ ಕೇಂದ್ರಗಳಲ್ಲಿ ಮೇವಿನ ಬ್ಯಾಂಕ್ ತೆರೆಯುವ ಮೂಲಕ ರೈತರಿಗಾಗಿರು ಮೇವಿನ ಬವಣೆಯನ್ನು ನೀಗಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಳ್ಳಿ ಹೇಳಿದರು
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications