ರಾಜ್ಯದಾದ್ಯಂತ ಭೀಕರ ಬರ: ಸಿಂಧನೂರು ಭತ್ತದ ಹುಲ್ಲಿಗೆ ಬೇಡಿಕೆ!
ರಾಯಚೂರು ಫೆಬ್ರವರಿ 22: ರಾಜ್ಯದಾದ್ಯಂತ ಈ ವರ್ಷ ಭೀಕರ ಬರ ಆವರಿಸಿರುವುದರಿಂದ ಭತ್ತದ ಹುಲ್ಲಿಗೆ ಬೇಡಿಕೆ ತೀವ್ರ ಹೆಚ್ಚಿದೆ. ಬಾಗಲಕೋಟೆ ಜಿಲ್ಲಾ ವ್ಯಾಪ್ತಿಗೊಳಪಡುವ ಹಳ್ಳಿಗಳ ರೈತರೂ ಹುಲ್ಲು ಅರಸಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಬರುತ್ತಿದ್ದಾರೆ.
ಸಿಂಧನೂರು ತಾಲ್ಲೂಕಿನಲ್ಲಿ ಎರಡು ಬೆಳೆ ಬೆಳೆಯುತ್ತಿದ್ದ ರೈತರು ಈ ವರ್ಷ ಒಂದೇ ಬೆಳೆಗೆ ಸೀಮಿತವಾಗಿದ್ದಾರೆ. ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ ಇರುವುದರಿಂದ ಮುಂಗಾರು ಭತ್ತದ ಬೆಳೆ ಮಾತ್ರ ಬಂದಿದೆ. ಪ್ರತಿ ವರ್ಷ ಭತ್ತದ ಹುಲ್ಲನ್ನು ಸುಡುತ್ತಿದ್ದ ತಾಲ್ಲೂಕಿನ ಹಲವರು, ಇದೀಗ ಹುಲ್ಲು ಸಂಗ್ರಹಿಸಿ ಹೊರೆ ಕಟ್ಟಿ ದೊಡ್ಡ-ದೊಡ್ಡ ಬಣವೆ ಪೇರಿಸಿದ್ದಾರೆ.

ಹುಲ್ಲಿನ ಪ್ರತಿ ಹೊರೆಗೆ ₹150 ದರ ನಿಗದಿ ಪಡಿಸಿ ಮಾರಾಟ ಮಾಡುತ್ತಿದ್ದಾರೆ. ಒಣ ಬೇಸಾಯದ ಕುಷ್ಟಗಿ, ಲಿಂಗಸುಗೂರು ತಾಲ್ಲೂಕಿನ ಕೆಲ ಹಳ್ಳಿಗಳ ರೈತರು ಹಿಂದೆಲ್ಲ ಉಚಿತವಾಗಿ ಹುಲ್ಲನ್ನು ಹೇರಿಕೊಂಡು ಹೋಗುತ್ತಿದ್ದರು. ಈ ವರ್ಷ ಆ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ತಿಂಗಳು ಪ್ರತಿ ಹೊರೆಗೆ ₹100 ಪಡೆಯುತ್ತಿದ್ದ ಭತ್ತ ಬೆಳೆಗಾರರು, ಹುಲ್ಲಿನ ಬೇಡಿಕೆ ಹೆಚ್ಚಿದಂತೆ ಇದೀಗ ₹150ಕ್ಕೆ ದರ ಹೆಚ್ಚಿಸಿದ್ದಾರೆ.
'ಪ್ರತಿವರ್ಷ ಸಿಂಧನೂರು ತಾಲ್ಲೂಕಿನ ಗುಂಜಳ್ಳಿ ಗ್ರಾಮದಿಂದ ಹುಲ್ಲನ್ನು ಟ್ರ್ಯಾಕ್ಟರ್ನಲ್ಲಿ ಹೇರಿಕೊಂಡು ಹೋಗುತ್ತಿದ್ದೆವು. ಇಲ್ಲಿಯ ರೈತರೇ ಉಚಿತವಾಗಿ ಹೇರಿಕೊಂಡು ಹೋಗುವಂತೆ ಹೇಳುತ್ತಿದ್ದರು. ಈ ವರ್ಷ ಒಂದು ಟ್ರ್ಯಾಕ್ಟರ್ ಹುಲ್ಲಿಗೆ ₹4 ಸಾವಿರ ಕೊಟ್ಟಿದ್ದೇವೆ' ಎಂದು ಕುಷ್ಟಗಿ ತಾಲ್ಲೂಕಿನ ಟೆಂಗುಂಟಿ ಗ್ರಾಮದ ರೈತ ನಿಂಗಪ್ಪ ಹೇಳಿದರು.

'ಎಳ್ಳು ಅಮಾವ್ಯಾಸೆಗಿಂತ ಪೂರ್ವದಲ್ಲಿ ಒಂದು ಟ್ರ್ಯಾಕ್ಟರ್ ಹುಲ್ಲುನ್ನು ಖರೀದಿ ಮಾಡಿಕೊಂಡು ಹೋಗಿದ್ದೆವು. ಅದು ಮುಗಿದು ಹೋಯಿತು. ಪುನಃ ಹುಲ್ಲು ಕೊಂಡೊಯ್ಯಲು ಸಿಂಧನೂರು ತಾಲ್ಲೂಕಿಗೆ ಬಂದರೆ ಆಗ ಪ್ರತಿ ಹೊರೆಗೆ ₹100 ಇದ್ದದ್ದು, ಈಗ ₹150ಕ್ಕೆ ಏರಿದೆ. ಮುಂದಿನ ಮಳೆಗಾಲ ಬರುವ ತನಕ ದನಗಳನ್ನು ಸಾಕುವುದೇ ದುಸ್ತರವಾಗಿದೆ' ಎಂದು ಹುಲ್ಲು ಖರೀದಿಸಲು ಬಂದ ಲಿಂಗಸುಗೂರು ತಾಲ್ಲೂಕಿನ ನಾಗಲಾಪುರ ಗ್ರಾಮದ ರೈತ ಶರಣಪ್ಪ ಅಳಲುತೋಡಿಕೊಂಡರು.
-ಮೇವಿನ ಕೊರತೆ ಇರುವ ಹೋಬಳಿ ಕೇಂದ್ರಗಳಲ್ಲಿ ಮೇವಿನ ಬ್ಯಾಂಕ್ ತೆರೆಯುವ ಮೂಲಕ ರೈತರಿಗಾಗಿರು ಮೇವಿನ ಬವಣೆಯನ್ನು ನೀಗಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಳ್ಳಿ ಹೇಳಿದರು
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications