ಖಾತೆ ಕ್ಯಾತೆ: ದೆಹಲಿಗೆ ಹಾರಿದ ಸಚಿವ ಶಾಮನೂರು!
ಕೋಲಾರ, ಸೆ.25: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ತಮ್ಮ ಸಚಿವ ಖಾತೆ ಬಗ್ಗೆ ಹೊಂದಿರುವ ಅತೃಪ್ತಿ ತೀವ್ರ ಸ್ವರೂಪ ಪಡೆದಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಮನೂರು ಜತೆ ಮಾತನಾಡುವೆ ಎಂದು ಹೇಳಿದ್ದರು.
ಆದರೆ ಅಷ್ಟಕ್ಕೆ ತಫ್ತರಾಗದ ಶಾಮನೂರು ಇಂದು ಬುಧವಾರ ಸೀದಾ ದೆಹಲಿಗೆ ಹೊರಟಿದ್ದಾರೆ. ಅಲ್ಲಿ ಹೈಕಮಾಂಡ್ ಅನ್ನು ಭೇಟಿಯಾಗಿ ಖಾತೆ ಬದಲಾವಣೆ ಮಾಡಿಸಿಕೊಂಡು ಬರುವ ಇರಾದೆ ಹೊಂದಿದ್ದಾರೆ.
ಹಿಂದಿನ ಸುದ್ದಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ. ಶಾಮನೂರು ಶಿವಶಂಕರಪ್ಪ ಅವರು ಮತ್ತೆ ತಮ್ಮ ಅತೃಪ್ತಿಯನ್ನು ಹೊರಹಾಕಿದ್ದಾರೆ. ಆದರೆ ಇದಕ್ಕೆ ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯರಾದ ಶಾಮನೂರು ಜತೆ ಮಾತನಾಡಿ, ಸಮಸ್ಯೆಗೆ ಪರಿಹಾರ ಸೂಚಿಸುವೆ ಎಂದು ಹೇಳಿದ್ದಾರೆ.
ಎಪಿಎಂಸಿ ಮಾರುಕಟ್ಟೆ, ತೋಟಗಾರಿಕೆ ಸಚಿವರಾದ ಡಾ. ಶಾಮನೂರು ಶಿವಶಂಕರಪ್ಪ (82) ಅವರು ನಿನ್ನೆ ಚಿತ್ರದುರ್ಗದಲ್ಲಿ 'ತೋಟಗಾರಿಕೆ ಮತ್ತು ಕೃಷಿ ಉತ್ಪನ್ನ ಹಾಗೂ ಮಾರುಕಟ್ಟೆ ಇಲಾಖೆಗಳು ಕೆಲಸಕ್ಕೆ ಬಾರದಂತಹವು' ಎಂದು ಗಂಭೀರವಾಗಿ ಹೇಳಿದ್ದರು.

ಕೃಷಿ ಕ್ಷೇತ್ರಕ್ಕೆ ಬಜೆಟ್ ಬಜೆಟ್ ನಲ್ಲಿ ರಾಜ್ಯ ಸರಕಾರವು ಸಾವಿರಾರು ಕೋಟಿ ರೂ ಅನುದಾನ ತೆಗೆದಿರಿಸಿದ್ದರೂ ಸಚಿವರ ದೃಷ್ಟಿಯಲ್ಲಿ ಕೃಷಿ ಖಾತೆ ಕೆಲಸಕ್ಕೆ ಬಾರದವು! ನನ್ನ ಬಳಿ ಕೆಲಸಕ್ಕೆ ಬಾರದ ಖಾತೆಗಳಿದ್ದು ಅವುಗಳಿಗೆ ಜೀವ ತುಂಬುವ ಕಾಯಕದಲ್ಲಿ ತೊಡಗಿದ್ದೇನೆ ಎಂದು ಹಿರಿಯ ಸಚಿವರಾದ ಶಾಮನೂರು ಶಿವಶಂಕರಪ್ಪ ತಮ್ಮ ಅತೃಪ್ತಿ ತೋಡಿಕೊಂಡಿದ್ದರು.
ಇದನ್ನು ಕೇಳಿ ವೇದಿಕೆಯಲ್ಲಿದ್ದ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು 'ಸಚಿವರ ಮಾತಿನ ಅರ್ಥವೇನು? ಕೆಲಸಕ್ಕೆ ಬಾರದ ಖಾತೆ ಅಂದರೆ ದುಡ್ಡು ಮಾಡಲು ಆಗದಂತಹವುಗಳು ಎಂದರ್ಥವೇ' ಎಂದು ನೇರವಾಗಿ ಪ್ರಶ್ನಿಸಿದರು.
ಶಾಮನೂರು ಶಿವಶಂಕರಪ್ಪ ಅಂದ್ರೆ ಕೊಡುಗೈ ದಾನಿಗಳು. ನಿಮ್ಮಂಥಹವರು ರಾಜಕೀಯದಲ್ಲಿ ದುಡ್ಡು ಮಾಡೋ ಅಗತ್ಯವಿಲ್ಲ. ತೋಟದಲ್ಲಿ ಸುತ್ತಾಡಿ ಒಳ್ಳೆಯ ಗಾಳಿ ಸೇವಿ ಆರೋಗ್ಯ ಚೆನ್ನಾಗಿಟ್ಟುಕೊಳ್ಳಿ. ತೋಟಗಾರಿಕೆಯನ್ನು ಕೆಲಸಕ್ಕೆ ಬಾರದ ಇಲಾಖೆ ಅಂತ ಮಾತ್ರ ಕರೀಬೇಡಿ' ಎಂದು ಶ್ರೀಗಳು ಸಚಿವರನ್ನುದ್ದೇಶಿಸಿ ಹಿತವಚನ ನುಡಿದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications