Get Updates
Get notified of breaking news, exclusive insights, and must-see stories!

'ದೇಶದ್ರೋಹ' ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಶಿ ತರೂರ್, ಪತ್ರಕರ್ತ ಸರ್ದೇಸಾಯಿ

ನವದೆಹಲಿ, ಫೆಬ್ರವರಿ 3: ಗಣರಾಜ್ಯೋತ್ಸವ ದಿನದಂದು ರೈತರ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ವೇಳೆ ಯುವಕನೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡುವ ಟ್ವೀಟ್ ಮಾಡಿದ್ದಕ್ಕಾಗಿ ವಿವಿಧ ರಾಜ್ಯಗಳಲ್ಲಿ ತಮ್ಮ ಮೇಲೆ ಎಫ್‌ಐಆರ್ ದಾಖಲಿಸಿರುವುದರ ವಿರುದ್ಧ ಕಾಂಗ್ರೆಸ್‌ನ ಸಂಸದ ಶಶಿ ತರೂರ್ ಮತ್ತು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜನವರಿ 26ರಂದು ಟ್ರ್ಯಾಕ್ಟರ್ ಮಗುಚಿ ಮೃತಪಟ್ಟಿದ್ದ ಯುವಕ ಪೊಲೀಸರ ಗುಂಡೇಟಿನಿಂದ ಸತ್ತಿರುವುದು ಎಂದು ಟ್ವೀಟ್ ಮಾಡಿದ್ದಕ್ಕಾಗಿ ವಿವಿಧ ರಾಜ್ಯಗಳಲ್ಲಿ ಎಫ್‌ಐಆರ್ ದಾಖಲಾಗಿವೆ. ಪತ್ರಕರ್ತರಾದ ಮೃಣಾಲ್ ಪಾಂಡೆ, ಜಾಫರ್ ಅಘಾ, ಪರೇಶ್ ನಾಥ್ ಮತ್ತು ಅನಂತ್ ನಾಥ್ ಅವರೂ ಕೂಡ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ಸಂದರ್ಭದಲ್ಲಿ 'ಸುಳ್ಳು ವರದಿಗಾರಿಕೆ' ಮತ್ತು 'ಅಸಾಮರಸ್ಯ ಹರಡುವಿಕೆ' ಕೃತ್ಯ ಮಾಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ಆರು ಮಂದಿ ಪತ್ರಕರ್ತರ ವಿರುದ್ಧ ಬೆಂಗಳೂರು, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು. ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ದೇಶದ್ರೋಹ, ಅಪರಾಧ ಸಂಚು ಮತ್ತು ವೈರತ್ವಕ್ಕೆ ಪ್ರಚೋದನೆ ನೀಡುವ ಪ್ರಕರಣಗಳನ್ನು ದಾಖಲಿಸಲಾಗಿದೆ.

Shashi Tharoor, Rajdeep Sardesai Move Supreme Court Against FIRs For Tweet On Violence

ಬೆಂಗಳೂರಿನಲ್ಲಿ ಒಂದು, ಉತ್ತರ ಪ್ರದೇಶದ ನೋಯ್ಡಾದಲ್ಲಿ ಒಂದು, ಮಧ್ಯಪ್ರದೇಶದ ಭೋಪಾಲ್, ಹೊಸಂಗಾಬಾದ್, ಮುಲ್ತೈ ಮತ್ತು ಬೇಟುಲ್‌ಗಳಲ್ಲಿ ನಾಲ್ಕು ಸೇರಿದಂತೆ ಒಟ್ಟು ಆರು ಎಫ್‌ಐಆರ್ ದಾಖಲಾಗಿರುವುದು ವರದಿಯಾಗಿದೆ.

ಶಶಿ ತರೂರ್ ಮತ್ತು ಪತ್ರಕರ್ತರಾದ ರಾಜ್‌ದೀಪ್ ಸರ್ದೇಸಾಯಿ, ಮೃಣಾಲ್ ಪಾಂಡೆ, ಜಾಫರ್ ಅಘಾ, ವಿನೋದ್ ಜೋಸ್, ಪರೇಶ್ ನಾಥ್ ಮತ್ತು ಅನಂತ್ ನಾಥ್

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+