ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ಅಡಿಕೆ ಮಾರಾಟ ಮೇ 11 ರಿಂದ ಪುನಾರಂಭ

|
Google Oneindia Kannada News

ಶಿವಮೊಗ್ಗ, ಮೇ 5: ಕೊರೊನಾ ವೈರಸ್‌ ಲಾಕ್‌ಡೌನ್ ಇದ್ದ ಕಾರಣ ಅಡಿಕೆ ಮಾರಾಟಕ್ಕೂ ನಿರ್ಬಂಧ ಇತ್ತು. ಆದರೆ, ಮೇ 11 ರಿಂದ ಅಡಿಕೆ ಮಾರಾಟ ಪುನಾರಂಭವಾಗಿದೆ. ಈ ವಿಷಯವನ್ನು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಅಡಕೆ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು ಆಗಿರುವ ಆರಗ ಜ್ಞಾನೇಂದ್ರ ಇಂದು ಅಡಿಕೆ ವಹಿವಾಟಿನ ಬಗ್ಗೆ ಮ್ಯಾಮ್ ಕೋಸ್ ಕಚೇರಿಯಲ್ಲಿ ಮಾತನಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ಮಾರಾಟ ಮತ್ತೆ ಶುರು ಆಗಲಿದೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ.

ವಾಟ್ಸಪ್, ಫೇಸ್ ಬುಕ್ ಮೂಲಕ ಮಾವು ಮಾರಿ ಮಾದರಿಯಾದ ರೈತ!ವಾಟ್ಸಪ್, ಫೇಸ್ ಬುಕ್ ಮೂಲಕ ಮಾವು ಮಾರಿ ಮಾದರಿಯಾದ ರೈತ!

ಲಾಕ್‌ಡೌನ್ ಇರುವ ಕಾರಣ ಉತ್ತರ ಭಾರತದಲ್ಲಿನ ಪಾನ್ ಮಸಾಲ ಕಾರ್ಖಾನೆಗಳು ಸ್ಥಗಿತಗೊಂಡಿವೆ. ಈ ಕಾರಣದಿಂದ ಅಡಕೆ ರಫ್ತು ಸಾಧ್ಯವಾಗಿರಲಿಲ್ಲ ಎಂದಿದ್ದಾರೆ. ಸದ್ಯ ಕಾರ್ಮಿಕರ ಸಮಸ್ಯೆ ಸಹ ಇದ್ದು, ಇದರಿಂದ ಅಡಿಕೆ ಮಾರಾಟ ಆಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

Areca Selling Will Begin From May 5

ವಹಿವಾಟು ಇಲ್ಲದೆ ಇದ್ದರೂ, ಯಾವುದೇ ಕಾರಣಕ್ಕೂ ಅಡಕೆ ಧಾರಣೆ ಕುಸಿಯಲು ಬಿಡುವುದಿಲ್ಲ. ಹೀಗಾಗಿ, ರೈತರು ಮಧ್ಯವರ್ತಿಗಳಿಗೆ ಕಡಿಮೆ ಬೆಲೆಗೆ ಅಡಿಕೆ ಮಾರಾಟ ಮಾಡಬಾರದು ಎಂದಿದ್ದಾರೆ. ರೈತರು ಧಾರಣೆ ಕುಸಿಯಬಹುದು ಎಂದು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಲಾಕ್‌ಡೌನ್ ಘೋಷಣೆ ಆದ ದಿನದಿಂದ ಶಿವಮೊಗ್ಗದ ಮಾರುಕಟ್ಟೆಗಳಲ್ಲಿ ಅಡಿಕೆ ಮಾರಾಟ ಆಗುತ್ತಿಲ್ಲ. ಆದರೆ, ಮೇ 11 ರಿಂದ ಎಂದಿನಂತೆ ವ್ಯಾಪಾರ ನಡೆಯಲಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

English summary
Areca selling will begin from may 5 says MLA Araga Jnanendra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X