Arecanut farmers: ಕಾನೂನು ಸಮರ ಗೆದ್ದು ಪರಿಹಾರ ಪಡೆದ ಶಿರಸಿಯ ಅಡಿಕೆ ಬೆಳೆದ ರೈತರು
ಶಿರಸಿ, ಮೇ. 10 : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 473 ಅಡಿಕೆ ಬೆಳೆಗಾರರಿಗೆ 12 ಲಕ್ಷ 78 ಸಾವಿರ ವಿಮಾ ಹಣ ಹಾಗೂ 9 ಲಕ್ಷ 46 ಸಾವಿರ ನಷ್ಟ ಪರಿಹಾರ ಕೊಡಲು ಎಸ್.ಬಿ.ಆಯ್ ವಿಮಾ ಕಂಪನಿಗೆ ಆದೇಶ ನೀಡಲಾಗಿದೆ. ಶಿರಸಿಯ ನೀಲಕುಂದ, ತಂಡಾಗುಡಿ ಪ್ರದೇಶದ ಅಡಿಕೆ ಬೆಳೆಗಾರ ರೈತರು 2017-18 ರಲ್ಲಿ ಅಡಿಕೆ ಬೆಳೆಯನ್ನು ಬೆಳೆದಿದ್ದರು.
ಆ ಬೆಳೆಗೆ ರೈತರು ಕೆನರಾ ಕೋ-ಆಪ್ರೆಟಿವ್ ಸಂಘದೊಂದಿಗೆ ಎಸ್.ಬಿ.ಆಯ್ ವಿಮಾ ಕಂಪನಿಗೆ ತಮ್ಮ ಅಡಿಕೆ ಬೆಳೆಯನ್ನು 2017-18ರ ವರ್ಷಕ್ಕೆ ವಿಮೆ ಮಾಡಿಸಿದ್ದರು. ಮಳೆ ನಿಗದಿಗಿಂತ ಜಾಸ್ತಿಯಾಗಿ ಅತಿವೃಷ್ಠಿಯಾದರೆ ಆ ರೈತರು ವಿಮೆ ಪರಿಹಾರ ಪಡೆಯಲು ಅರ್ಹತೆ ಹೊಂದಿದ್ದರು. ಜುಲೈ 2017ರಲ್ಲಿ ತಮ್ಮ ಭಾಗದಲ್ಲಿ ಅತಿ ಹೆಚ್ಚಿನ ಮಳೆ ನಿರಂತರವಾಗಿ 4 ದಿವಸ 59 ಎಂಎಂಗಿಂತ ಹೆಚ್ಚಿನ ಮಳೆ ಆದ ಕಾರಣ ತಮ್ಮ ಅಡಿಕೆ ಬೆಳೆ ನಾಶವಾಗಿ ರೈತರಿಗೆ ಆರ್ಥಿಕ ತೊಂದರೆ ಮತ್ತು ಹಾನಿಯಾಗಿದೆ.

ವಿಮಾ ಪಾಲಸಿಯ ನಿಯಮದಂತೆ ತಮಗೆ ಬೆಳೆ ಹಾನಿ ಮತ್ತು ಪರಿಹಾರ ಕೊಡಲು 1ನೇ ಎದುರುದಾರ ಎಸ್.ಬಿ.ಆಯ್. ವಿಮಾ ಕಂಪನಿಗೆ ಹಲವು ಬಾರಿ ಕೇಳಿಕೊಂಡರೂ ಅವರು ತಮಗೆ ವಿಮಾ ಹಣ ಅಥವಾ ಪರಿಹಾರ ಕೊಟ್ಟಿಲ್ಲ. ವಿಮಾ ಕಂಪನಿ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನತೆ ಆಗುತ್ತದೆ ಎಂದು ಒಟ್ಟು 473 ರೈತರು ಧಾರವಾಡದ ಜನಾದೇಶ ಗ್ರಾಹಕರ ಸ್ವಯಂ ಸೇವಾ ಸಂಘದ ಮೂಲಕ ದಿನಾಂಕ 27/05/2022 ರಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಈ ದೂರಿನ ಬಗ್ಗೆ ಆಯೋಗದ ಅಧ್ಯಕ್ಷರಾದ ಈಶಪ್ಪ.ಭೂತೆ, ವಿಶಾಲಾಕ್ಷಿ.ಅ.ಬೋಳಶೆಟ್ಟಿ ಹಾಗೂ ಪ್ರಭು .ಸಿ ಹಿರೇಮಠ ಸದಸ್ಯರು ಕೂಲಂಕುಷವಾಗಿ ವಿಚಾರಣೆ ನಡೆಸಿದರು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದವರು ದೂರುದಾರರ ಸ್ಥಳಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಮಳೆ ಬಿದ್ದ ಬಗ್ಗೆ ವರದಿ ಕೊಡಬೇಕಾಗಿತ್ತು. ಆದರೆ 2017-18ನೇ ಇಸವಿಯಲ್ಲಿ 6.7 ನಷ್ಟು ಮಳೆಯಾಗಿದೆ ಅಂತಾ ವರದಿ ಕೊಟ್ಟಿದ್ದರಿಂದ ದೂರುದಾರರು ಪ್ರಕೃತಿ ವಿಕೋಪದ ಆಧಾರದಲ್ಲಿ ವಿಮೆ ಪರಿಹಾರ ಪಡೆಯಲು ಅರ್ಹರಲ್ಲ ಎಂದು 1ನೇ ಎದುರುದಾರ/ಎಸ್.ಬಿ.ಆಯ್. ವಿಮಾ ಕಂಪನಿ ಆಕ್ಷೇಪಣೆ ಎತ್ತಿದ್ದರು.

ಅತಿ ಹೆಚ್ಚು ಮಳೆಯಾಗಿದ್ದರೂ ಮಳೆ ಮಾಪನ ಕೇಂದ್ರಗಳು ಕಡಿಮೆ ಮಳೆ ಅಂತಾ ದಾಖಲಿಸಿಕೊಂಡಿದ್ದ ಪ್ರಸಂಗದಲ್ಲಿ ಅಕ್ಕಪಕ್ಕ ಮಳೆ ಮಾಪನ ಕೇಂದ್ರಗಳ ವರದಿಗಳನ್ನು ಆಧರಿಸಿ 1ನೇ ಎದುರುದಾರ ವಿಮಾ ಕಂಪನಿ ದೂರುದಾರರ ವಿಮಾ ಅರ್ಜಿಗಳನ್ನು ಪರಿಶೀಲಿಸಿ ವಿಮಾ ಹಣಕೊಡಬೇಕು ಅನ್ನುವುದು ರಾಜ್ಯ ಸರ್ಕಾರದ ನಿಯಮವಿದೆ.
ಈ ಪ್ರಕರಣದಲ್ಲಿ ಜುಲೈ-2017ರಲ್ಲಿ ದೂರುದಾರರ ಏರಿಯಾದಲ್ಲಿ ಅತೀ ಹೆಚ್ಚು ಮಳೆಯಾಗಿದೆ ಆದರೆ ತಾಂತ್ರಿಕ ದೋಷದಿಂದ ಅಲ್ಲಿಯ ಮಳೆ ಮಾಪನ ಕೇಂದ್ರದಲ್ಲಿ 6.7 ಅಂತಾ ಕಡಿಮೆ ಮಳೆ ಆಗಿದೆ ಅಂತಾ ದಾಖಲಾಗಿದೆ. ಮೇಲೆ ಹೇಳಿದ ರಾಜ್ಯ ಸರ್ಕಾರದ ನಿರ್ದೇಶನದಂತೆ ಪಕ್ಕದ ಮಳೆ ಮಾಪನ ಕೇಂದ್ರದಲ್ಲಿ 72.ಎಂಎಂಗಿಂತ ಹೆಚ್ಚು ಮಳೆಯಾದ ಬಗ್ಗೆ ದಾಖಲೆ ಇದೆ ಅದನ್ನು ಆಧರಿಸಿ ವಿಮಾ ಕಂಪನಿ ದೂರುದಾರರಿಗೆ ಬೆಳೆ ವಿಮೆ ಪರಿಹಾರ ಕೊಡಬೇಕಾಗಿತ್ತು.
ಆದರೆ, ಆ ರೀತಿ ಮಾಡದೇ ದೂರುದಾರರ ವಿಮಾ ಕೋರಿಕೆಯ ಬಗ್ಗೆ ಏನು ಹೇಳದೆ ಎದುರುದಾರ/ಎಸ್.ಬಿ.ಆಯ್ ವಿಮಾ ಸಂಸ್ಥೆ ಕರ್ತವ್ಯ ಲೋಪ ಎಸಗಿ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ. ಒಟ್ಟು 473 ರೈತರಿದ್ದು ಅವರಿಗೆ 12 ಲಕ್ಷ 78 ಸಾವಿರ ವಿಮಾ ಹಣ ಮತ್ತು ಅದರ ಮೇಲೆ ದೂರು ದಾಖಲಾದ ದಿನಾಂಕ 27/05/2022 ರಿಂದ ಶೇ 8% ರಂತೆ ಪೂರ್ತಿ ಹಣ ಸಂದಾಯವಾಗುವವರೆಗೆ ಲೆಕ್ಕಾ ಹಾಕಿ ಕೊಡುವಂತೆ ಆಯೋಗ ಎಸ್.ಬಿ.ಆಯ್ ವಿಮಾ ಕಂಪನಿಗೆ ನಿರ್ದೇಶಿಸಿದೆ.
ಎಲ್ಲ 473 ರೈತರಿಗೆ ಆಗಿರುವ ಅನಾನುಕೂಲ ಹಾಗೂ ಮಾನಸಿಕ ಹಿಂಸೆಗಾಗಿ ತಲಾ 2,000 ರೂಪಾಯಿಯಂತೆ ಒಟ್ಟು 9 ಲಕ್ಷ 46 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಆಯೋಗ ವಿಮಾ ಕಂಪನಿಗೆ ಆದೇಶಿಸಿದೆ. ಒಟ್ಟು 30 ಸಾವಿರ ರೂಪಾಯಿ ಪ್ರಕರಣಗಳ ಖರ್ಚು ವೆಚ್ಚ ನೀಡಲು ಸಹ ಆಯೋಗ ವಿಮಾ ಕಂಪನಿಗೆ ತಿಳಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications