ಕೊನೆಗೂ ಸಾಮಾಜಿಕ ಅಂತರ ಕಾಯ್ದುಕೊಂಡ ಬೆಳಗಾವಿ ಮಾರುಕಟ್ಟೆ
ಬೆಳಗಾವಿ, ಮಾರ್ಚ್ 30: ಕೊರೊನಾ ವೈರಸ್ ಹರಡದಂತೆ ತಡೆಯಲು ಭಾರತದಾದ್ಯಂತ ಲಾಕ್ಡೌನ್ ಮಾಡಿದ ಆರಂಭದ ದಿನಗಳಲ್ಲಿ, ಉತ್ತರ ಕರ್ನಾಟಕದ ಅತಿದೊಡ್ಡ ತರಕಾರಿ ಮಾರುಕಟ್ಟೆಯಲ್ಲಿ ಫುಲ್ ರಶ್ ಆಗಿತ್ತು. ಆದರೆ ಈಗ ಪೊಲೀಸರು ವ್ಯಾಪಾರಿಗಳ ಜೊತೆ ಸರಣಿ ಸಭೆಗಳನ್ನು ಮಾಡಿ ಎಲ್ಲ ಗದ್ದಲಗಳಿಗೆ ಬ್ರೇಕ್ ಹಾಕಿದ್ದಾರೆ.
ಬೆಳಗಾವಿ ಎಪಿಎಂಸಿ ಆವರಣದಲ್ಲಿ ಇರುವ ಹೋಲ್ ಸೇಲ್ ತರಕಾರಿ ಮಾರುಕಟ್ಟೆ ವ್ಯಾಪಾರಿಗಳ ಜೊತೆ ಕಳೆದ ಎರಡು ದಿನಗಳಿಂದ ಸಭೆಗಳನ್ನು ಮಾಡುವುದರ ಮೂಲಕ ಬೆಳಗಾವಿ ಪೊಲೀಸರು ಇಲ್ಲಿಯ ವಹಿವಾಟವನ್ನು ವ್ಯವಸ್ಥಿತಗೊಳಿಸಿದ್ದಾರೆ.
ಈಗ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಯುತ್ತಿದೆ. 2 ದಿನಗಳ ಹಿಂದೆ ಜನರಿಂದ ತುಂಬಿ ತುಳಕುತ್ತಿದ್ದ ತರಕಾರಿ ಮಾರುಕಟ್ಟೆ ಈಗ ಖಾಲಿ ಖಾಲಿಯಾಗಿದೆ. ಆದರೂ ತರಕಾರಿ ವ್ಯಾಪಾರಿಗಳು ಒಬ್ಬೊಬ್ಬರಾಗಿ, ತರಕಾರಿ ಖರೀದಿ ಮಾಡಿಕೊಂಡು ಹೋಗುತ್ತಿರುವ ದೃಶ್ಯ ಈಗ ಸಾಮಾನ್ಯವಾಗಿದೆ.

ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಬೆಳಗಾವಿಯ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಮಾಡಿಕೊಡದೇ ಜನಜಂಗುಳಿಗೆ ಪೂರ್ಣವಿರಾಮ ನೀಡಿದ್ದಾರೆ.
ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಓರ್ವ ಎಸಿಪಿ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟಿಗೆ ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ ವೇಳೆ ಚಿಲ್ಲರೆ ವ್ಯಾಪಾರಸ್ಥರಿಗೆ ತರಕಾರಿ ಖರೀದಿಗೆ ಅವಕಾಶ ಮಾಡಿ ಕೊಡಲಾಗಿದೆ. ಮಧ್ಯಾಹ್ನ 2 ರಿಂದ ರಾತ್ರಿ 8 ರವರೆಗೆ ರೈತರು ತರಕಾರಿ ಮಾರಾಟ ಮಾಡುತ್ತಿದ್ದಾರೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ತರಕಾರಿ ಖರೀದಿಗೆ ಅವಕಾಶವಿಲ್ಲ.
ಹಾಪ್ಕಾಮ್ಸ್ ಹಾಗೂ ಎಪಿಎಂಸಿ ವಾಹನಗಳ ಮೂಲಕ ತರಕಾರಿ ಮಾರಾಟ ಮಾಡುತ್ತಿವೆ. ನಗರದ 58 ವಾರ್ಡ್ ಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗಾವಿ ನಗರ ನಿವಾಸಿಗಳ ಮನೆ ಬಾಗಿಲಿಗೆ ತಾಜಾ ತರಕಾರಿ ಬರಲಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications